ಮಂಡ್ಯ | ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಎಲ್ಲರ ಬೆಂಬಲ ಅವಶ್ಯ : ಸಚಿವ ಚಲುವರಾಯಸ್ವಾಮಿ

Date:

ಮೂವತ್ತು ವರ್ಷಗಳ ಬಳಿಕ ಮಂಡ್ಯದಲ್ಲಿ ಡಿಸೆಂಬರ್ 20, 21, 22ರಂದು ಮೂರು ದಿನಗಳ ಕಾಲ ಜರುಗಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಲು ಎಲ್ಲರ ಸಹಕಾರ, ಬೆಂಬಲ ಅತ್ಯವಶ್ಯಕ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಚಲುವರಾಯಸ್ವಾಮಿ ಹೇಳಿದರು.

ಅವರು ಮಂಡ್ಯ ನಗರದ ಹೊರವಲಯದಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಂಡಿದ್ದ ಮಂಡ್ಯ ಜಿಲ್ಲೆಯ ಸಾಹಿತಿಗಳ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಂಡ್ಯದ ಆತಿಥ್ಯ, ಸತ್ಕಾರವನ್ನು ಎಲ್ಲರೂ ನೆನೆಯಬೇಕು. ಆ ನಿಟ್ಟಿನಲ್ಲಿ ಸಮ್ಮೇಳನ ಯಶಸ್ವಿಗೊಳಿಸುವ ಹೊಣೆ ನಮ್ಮೆಲ್ಲರ ಮೇಲಿದೆ. ಮಂಡ್ಯಕ್ಕೆ ತನ್ನದೇ ಆದ ಸೊಗಡಿದೆ. ವೈಶಿಷ್ಟ್ಯ ಇದೆ. ಸಮ್ಮೇಳನ ಯಶಸ್ಸಿ ಎಲ್ಲರ ಸಲಹೆ, ಮಾರ್ಗದರ್ಶನ, ಅನಿಸಿಕೆ ಪಡೆಯಲಾಗುತ್ತಿದೆ. ಸಮಿತಿಯೊಂದಿಗೆ ಚರ್ಚಿಸಿ ಕಾರ್ಯರೂಪಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಈ ಸಮ್ಮೇಳನವನ್ನು ವಿಜೃಂಭಣೆಯಿಂದ, ಅರ್ಥಪೂರ್ಣವಾಗಿ ನೆರವೇರಿಸಲಾಗುವುದು. ಇದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಹಿತ್ಯ ಸಮ್ಮೇಳನದ ಕುರುಹು ಉಳಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು. ಕಲಾಮಂದಿರ, ಅಂಬೇಡ್ಕರ್ ಭವನ, ರೈತ ಭವನಗಳ ದುರಸ್ತಿ ಕಾರ್ಯ ಚಾಲನೆ ನೀಡಲಾಗಿದೆ. ಶಿವಪುರ ಧ್ವಜ ಸತ್ಯಾಗ್ರಹ ಪ್ರತಿಷ್ಠಾನ ರಚನೆ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಸ್ಥಾಪನೆ ಮಾಡುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮಹೇಶ್ ಜೋಷಿ ಮಾತನಾಡಿ, ಪ್ರಜಾಪ್ರಭುತ್ವ ಅಡಿಯಲ್ಲಿ ಕೆಲಸ ಮಾಡಬೇಕಿದೆ. ಸರ್ಕಾರದ ಸಹಕಾರ ಸಹಭಾಗಿತ್ವ, ಸಮನ್ವಯತೆ ಸಮಾಲೋಚನೆ ಮುಖ್ಯ. ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಜಿಲ್ಲಾಡಳಿತ ಅತಿ ಉತ್ಸಾಹದಿಂದ ಕೆಲಸ ಮಾಡುತ್ತಿದೆ. ಸಮ್ಮೇಳನದ ಯಶಸ್ವಿಗೆ ಎಲ್ಲರ ಸಹಕಾರ ಬೆಂಬಲ ಮುಖ್ಯ ಎಂದರು.

ಫ್ರೊ.ಕೃಷ್ಣೇಗೌಡ ಮಾತನಾಡಿ, ಸಮ್ಮೇಳನದಲ್ಲಿ ಬಹುಮುಖ್ಯವಾಗಿ ಜನರು ಗ್ರಹಿಸುವುದು ಸಮ್ಮೇಳನದ ಧ್ವನಿ ಏನು? ಎಂಬುದು. ಸಮ್ಮೇಳನದ ಬಗ್ಗೆ ಜನರ ಗ್ರಹಿಕೆ ಏನು ಎಂಬುದು ಮುಖ್ಯ. ಅತಿ ದೊಡ್ಡ ಕಾರ್ಯಕ್ರಮ ಇದಾಗಿದ್ದು, ಸುಸಂಸ್ಕೃತದ ಸಮ್ಮೇಳನ ಇದಾಗಲಿ ಎಂದರು.

ಜಿಲ್ಲಾಧಿಕಾರಿ ಡಾ. ಕುಮಾರ್ ಮಾತನಾಡಿ, 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಸರ್ಕಾರ, ಜಿಲ್ಲಾಡಳಿತ ಅಥವಾ ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನವಲ್ಲ ಇದು ಎಲ್ಲಾ ಕನ್ನಡಿಗರ ಮನ ಮನೆಯ ಸಮ್ಮೇಳನ ಎಂದು ಹೇಳಿದರು.

ಬರಹಗಾರರಾದ ನರಹಳ್ಳಿ ಬಾಲಸುಬ್ರಹ್ಮಣ್ಯ ಮಾತನಾಡಿ, ಯಕ್ಷಗಾನ ಕಲೆಯ ಮೂಲ ಮಂಡ್ಯ. ಯಕ್ಷಗಾನದ ತವರು ಮಂಡ್ಯ. ಕೆಂಪಣ್ಣಗೌಡ ಮೊದಲ ಕವಿ. ಮೂಡಲಪಾಯ ಕಲೆ ಮತ್ತೆ ಬೆಳಕಿಗೆ ಬರಬೇಕು. ಮಂಡ್ಯ ಜಿಲ್ಲೆಯ ಕೊಡುಗೆಗಳನ್ನು ಕೇಂದ್ರವಾಗಿಟ್ಟುಕೊಂಡು  ಚರ್ಚೆಯಾಗಬೇಕು. ರಾಜ್ಯಮಟ್ಟದ ವಿದ್ವಾಂಸರನ್ನು ಕರೆಸಬೇಕು ಎಂದು ಸಲಹೆ ನೀಡಿದರು.

ಕೃಷಿ ಸಂಸ್ಕೃತಿಗೆ ಮಂಡ್ಯ ಕೊಡುಗೆ ಅಪಾರ.  ನೇಗಿಲಯೋಗಿ ಪರಿಕಲ್ಪನೆ ಚರ್ಚೆಯಾಗಬೇಕು. ಸಮ್ಮೇಳನಕ್ಕೆ ಘನತೆಯೇ ಗೋಷ್ಠಿ. ಗೋಷ್ಠಿ ಬಗ್ಗೆ ಚರ್ಚೆ ಆಗಬೇಕು. ಸಾಹಿತ್ಯ, ಕೃಷಿ, ಸಂಸ್ಕೃತಿ ಮತ್ತು ಜಾನಪದ ಗೋಷ್ಠಿಯಾಗಬೇಕು. ಅನುವಾದ ಗೋಷ್ಠಿ ಆರಂಭಿಸುವ ಮೂಲಕ ಅನುವಾದ ಗೋಷ್ಠಿ ಮೊದಲು ಮಾಡಿದ ಕೀರ್ತಿ ಮಂಡ್ಯ ಸಮ್ಮೇಳನಕ್ಕೆ ಸಲ್ಲಬೇಕು ಎಂದರು.

ಇದನ್ನು ಓದಿದ್ದೀರಾ? ಬೆಂಗಳೂರು | ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಮ್​ನಲ್ಲಿ ಭೀಕರ ಅಗ್ನಿ ದುರಂತ: ಸಿಬ್ಬಂದಿ ಯುವತಿ ಸಾವು

ಕನ್ನಡ ಸಂಘದ ಅಧ್ಯಕ್ಷರಾದ ಜಯಪ್ರಕಾಶ್ ಗೌಡ ಮಾತನಾಡಿ, ಮಂಡ್ಯ ಮಾದರಿ ಇಟ್ಟುಕೊಂಡು ಸಮ್ಮೇಳನ ಆಯೋಜಿಸಲಿ. ಎಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡಬೇಕು. ಜಿ.ನಾರಾಯಣ್, ಶಂಕರೇಗೌಡ್ರು, ಸಾಹುಕಾರ್ ಚೆನ್ನಾಯ್ಯ, ಶೀಂಕಠೇಗೌಡ್ರ ಹೆಸರನ್ನು ಮಹಾದ್ವಾರಗಳಿಗೆ ಇಡಬೇಕು. ಜಿಲ್ಲೆಯ ಮಹನೀಯರನ್ನು ನೆನೆಯಬೇಕು ಎಂದು ಹೇಳಿದರು.

ಸಭೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್, ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಕನ್ನಡ ಸಾಹಿತ್ಯ ಸಮ್ಮೇಳನದ ಸಂಚಾಲಕರಾದ ಮೀರಾ ಶಿವಲಿಂಗಯ್ಯ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಡಾ. ಕೃಷ್ಣೇಗೌಡ ಹುಸ್ಕೂರು, ವಿ ಹರ್ಷ ಸೇರಿದಂತೆ ಇನ್ನಿತರರ ಹಿರಿಯ ಸಾಹಿತಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...