ಮಂಡ್ಯ | ಗೂಬೆ ಹಳ್ಳ ಕೊಲೆ ಪ್ರಕರಣ ಸಾಬೀತುಪಡಿಸಲು ವಿಫಲ: 10 ವರ್ಷಗಳ ಬಳಿಕ ಆರೋಪಿಗಳಿಗೆ ಖುಲಾಸೆ

Date:


ರಾಜು ಎಂಬಾತನ ಕೊಲೆ ಆರೋಪದಡಿ 2015ರಂದು ಮಂಡ್ಯದ ಗೂಬೆ ಹಳ್ಳದ ಏಳು ಮಂದಿ ಯುವ ಪೌರ ಕಾರ್ಮಿಕರ ವಿರುದ್ಧ ಮಂಡ್ಯ ಪೂರ್ವ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಸಾಬೀತುಪಡಿಸಲು ವಿಫಲವಾಗಿರುವುದಾಗಿ ತೀರ್ಪು ನೀಡಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸುಬ್ರಹ್ಮಣ್ಯ ಅವರು ಆರೋಪಿಗಳನ್ನು ಬಿಡುಗಡೆ ಮಾಡಿದರು.

2025ರ ಜುಲೈ 23ರಂದು ಪ್ರಕರಣದ ವಿಚಾರಣೆ ಕೈಗೊಂಡ ವೇಳೆ ಕೊಲೆ ಪ್ರಕರಣವನ್ನು ಸಾಬೀತುಪಡಿಸುವಲ್ಲಿ ವಿಫಲವಾದ ಕಾರಣ ಆರೋಪಿಗಳನ್ನು ಬಿಡುಗಡೆ ಮಾಡಲಾಗಿದೆ.

ಘಟನೆ ಹಿನ್ನೆಲೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಡ್ಯದ ಗೂಬೆ ಹಳ್ಳದಲ್ಲಿ ನಡೆದ ರಾಜು ಎಂಬಾತನ ಕೊಲೆ ಆರೋಪದಡಿ 2015ರಂದು ಏಳು ಮಂದಿ ಯುವ ಪೌರ ಕಾರ್ಮಿಕರ ವಿರುದ್ಧ ಮಂಡ್ಯ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಒಂದನೇ ಆರೋಪಿ ರಘು ಎಂಬಾತ ಅಪ್ರಾಪ್ತನಾಗಿದ್ದ ಕಾರಣ ಆತನ ವಿರುದ್ಧದ ಪ್ರಕರಣ ಬಾಲ ನ್ಯಾಯಮಂಡಳಿಗೆ ವರ್ಗಾವಣೆಯಾಗಿತ್ತು. ಉಳಿದವರ ಪ್ರಕರಣ ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ 10 ವರ್ಷಗಳಿಂದ ನಡೆಯಿತು.

2015ರ ಆಗಸ್ಟ್ 30ರ ರಾತ್ರಿ ಗಾಯಗೊಂಡಿದ್ದ ರಾಜು ಎಂಬಾತನ್ನು ಮಂಡ್ಯ ಸರ್ಕಾರಿ ಆಸ್ಪತ್ರೆಯಿಂದ ಬೆಂಗಳೂರಿನ ನಿಮ್ಹಾನ್ಸ್‌ಗೆ ಕಳುಹಿಸಲಾಗಿತ್ತು. ಮರುದಿನ ಬೆಳಿಗ್ಗೆ 9ಕ್ಕೆ ಮಂಡ್ಯ ಜಿಲ್ಲಾ ಆಸ್ಪತ್ರೆಯಲ್ಲಿ ರಾಜು ಪೊಲೀಸರಿಗೆ ಹೇಳಿಕೆ ನೀಡಿದ ಆಧಾರದ ಮೇಲೆ ಪ್ರಕರಣ ದಾಖಲಾಯಿತು. 20 ದಿನಗಳ ನಂತರ ರಾಜುವಿನ ಸಾವಿನ ಹೇಳಿಕೆ ದಾಖಲಾಯಿತು. ಆದರೆ, ರಾಜು ನಿಮ್ಹಾನ್ಸ್, ಅಪೋಲೋ ಮತ್ತು ಇಎಸ್ಐ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವಾಗ ರಘುವಿನ ಹೆಸರನ್ನು ಬಿಟ್ಟು ಇತರ ಆರೋಪಿಗಳ ಹೆಸರನ್ನು ಉಲ್ಲೇಖಿಸಿರಲಿಲ್ಲ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಕನ್ನಡ ತರ್ಜುಮೆ ತಂತ್ರಾಂಶ ʼಕನ್ನಡ ಕಸ್ತೂರಿʼ ಶೀಘ್ರದಲ್ಲೇ ಬಿಡುಗಡೆ

ಪೊಲೀಸರು ರಾಜು ಆಸ್ಪತ್ರೆಯಲ್ಲಿರಲಿಲ್ಲವೆಂದು ಹೇಳಿಕೆ ದಾಖಲಿಸಿದ ದಿನದಂದು ವೈದ್ಯರು, ʼರಾಜು ಕುಡಿದ ನಶೆಯಲ್ಲಿದ್ದು, ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲʼವೆಂದು ತಿಳಿಸಿದರು. ಆರೋಪಿಗಳ ವಕೀಲರ ಪ್ರಶ್ನೆಯಲ್ಲಿ ವೈದ್ಯರು, ʼರಾಜು ಸಾವಿನ ಸ್ಥಿತಿಯಲ್ಲಿ ಇರಲಿಲ್ಲʼವೆಂಬುದನ್ನು ಒಪ್ಪಿಕೊಂಡರು. ಪ್ರಾಸಿಕ್ಯೂಷನ್ ರಾಜುವಿನ ಹೇಳಿಕೆಯ ಸಮಯ ಮತ್ತು ಸ್ಥಳವನ್ನು ಸ್ಪಷ್ಟವಾಗಿ ವಿವರಿಸಲು ವಿಫಲವಾಯಿತು.

ಹೀಗಾಗಿ, 2025ರ ಜುಲೈ 23ರಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸುಬ್ರಹ್ಮಣ್ಯ ಅವರು, ʼಕೊಲೆ ಪ್ರಕರಣ ಸಾಬೀತುಪಡಿಸಲು ವಿಫಲವಾಗಿದೆʼ ಎಂದು ತೀರ್ಪು ನೀಡಿ ಆರೋಪಿಗಳನ್ನು ಬಿಡುಗಡೆ ಮಾಡಿದರು. ಆರೋಪಿಗಳ ಪರವಾಗಿ ವಕೀಲ ಬಿ ಟಿ ವಿಶ್ವನಾಥ್ ವಾದ ಮಂಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...