ಮಂಡ್ಯ | ರೈತ ಆತ್ಮಹತ್ಯೆ ಪ್ರಕರಣ: ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ, ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ

Date:

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತ ಮಂಜೇಗೌಡರಿಗೆ ಮಂಡ್ಯದ ವಿವಿಧ ಪ್ರಗತಿಪರ ಸಂಘಟನೆಗಳು ಬುಧವಾರ ಸಂಜೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಶ್ರದ್ಧಾಂಜಲಿ ಅರ್ಪಿಸಿ, ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಸಾಂಸ್ಕ್ರತಿಕ ಪ್ರತಿರೋಧ ವ್ಯಕ್ತಪಡಿಸಿದವು.

ಹುರುಗಲವಾಡಿ ರಾಮಯ್ಯ, ಗಾಮನಹಳ್ಳಿಸ್ವಾಮಿ ಮತ್ತು ತಂಡದವರಿಂದ ಹೋರಾಟದ ಗೀತೆಗಳನ್ನು ಹಾಡಿ ರೈತರ ತ್ಯಾಗವನ್ನು ಸ್ಮರಿಸಲಾಯಿತು. ಚಿತ್ರಕಲಾವಿದ ತೂಬಿನಕೆರೆ ಗೋವಿಂದು ಕುಂಚಗಳಲ್ಲಿ ರೈತರು ಪ್ರಸ್ತುತ ಪರಿಸ್ಥಿತಿಯನ್ನು ಬಿಂಬಿಸುವ ಚಿತ್ರಗಳನ್ನು ಬಿಡಿಸುವ ಮೂಲಕ ಗಮನ ಸೆಳೆದರು.

ಸದ್ದಾಂ ತಗ್ಗಹಳ್ಳಿ ಮತ್ತು ಶಿವಕುಮಾರ ಆರಾಧ್ಯ ಅವರು ರೈತನ ಬಗ್ಗೆ ಕವನಗಳನ್ನು ವಾಚನ ಮಾಡುವ ಮೂಲಕ ರೈತರ ಸಮಸ್ಯೆಗಳನ್ನು ತೆರೆದಿಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರುನಾಡು ಸೇವಕರು ಸಂಘಟನೆಯ ನಾಗಣ್ಣಗೌಡ ಮಾತನಾಡಿ, “ನಿನ್ನೆ ನಾವು ಪ್ರತಿಭಟನೆ ನಡೆಸಿದ ಫಲವಾಗಿ ಸರ್ಕಾರ ಎಚ್ಚೆತ್ತಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸಚಿವರು ತೆರಳಿ ಮೃತ ರೈತನ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ್ದಾರೆ. ಇಷ್ಟಾದರೆ ಸಾಲದು ಪ್ರತಿ ಇಲಾಖೆಗಳಲ್ಲಿ ಇರುವ ಭ್ರಷ್ಟ ಅಧಿಕಾರಿಗಳಿಗೆ ಸರ್ಕಾರ ಎಚ್ಚರಿಕೆ ನೀಡಬೇಕು” ಎಂದು ಆಗ್ರಹಿಸಿದರು.

ನ್ಯಾಯವಾದಿ ಬಿ ಟಿ ವಿಶ್ವನಾಥ್ ಮಾತನಾಡಿ, “ಸರ್ಕಾರದ ಪ್ರತಿ ಇಲಾಖೆಗಳಲ್ಲಿ ರೈತ ವಿರೋಧಿ ಅಧಿಕಾರಿಗಳಿದ್ದರೆ, ಸರ್ಕಾರ ಅವಕಾಶ ನೀಡಿದರೆ ಅಂತಹ ಭ್ರಷ್ಟ ಅಧಿಕಾರಿಗಳ ಪಟ್ಟಿಯನ್ನು ಇಲ್ಲಿರುವ ಹಲವು ಸಂಘಟನೆಗಳ ಮುಖಂಡರು ಬಹಿರಂಗಪಡಿಸುತ್ತೇವೆ. ಅವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ” ಎಂದು ಎಚ್ಚರಿಸಿದರು.

ಜಾಗೃತ ಕರ್ನಾಟಕದ ಸಂಚಾಲಕ ಎನ್ ನಾಗೇಶ್, ಚೀರನಹಳ್ಳಿ ಲಕ್ಷ್ಮಣ್ ಸೇರಿದಂತೆ ಮತ್ತಿತರರು ಮಾತನಾಡಿದರು.

ಈ ಸಂದರ್ಭದಲ್ಲಿ ಅರವಿಂದ ಪ್ರಭು, ಹೆಚ್ ಡಿ ಜಯರಾಂ, ಎಸ್ ನಾರಾಯಣ್, ನಾರಾಯಣಸ್ವಾಮಿ, ಹನುಮೇಶ್, ಜಾಗೃತ ಕರ್ನಾಟಕದ ಸಂಚಾಲಕ ನಗರಕೆರೆ ಜಗದೀಶ್, ಪೃಥ್ವಿರಾಜ್, ಸುಬ್ರಮಣ್ಯ, ಕೀಲಾರ ಕೃ‍ಷ್ಣೇಗೌಡ, ಸತ್ಯಮೂರ್ತಿ, ಸಂಜು ಆಲಕೆರೆ ಸೇರಿದಂತೆ ಕೆ ಆರ್ ಎಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

ಘಟನೆ ಹಿನ್ನೆಲೆ

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಕಾವೇರಿ ಉದ್ಯಾನದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ಕೆ ಆರ್ ಪೇಟೆ ತಾಲೂಕು ಮೂಡನಹಳ್ಳಿ ಗ್ರಾಮದ ರೈತ ಮಂಜೇಗೌಡ ಎಂ ಡಿ(55) ಅವರು ಬುಧವಾರ ಬೆಳಿಗ್ಗೆ ಬೆಂಗಳೂರು ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟರು.

“ಭೂಸ್ವಾಧೀನಗೊಂಡ ಜಮೀನಿಗೆ ಹಲವಾರು ವರ್ಷಗಳಿಂದ ಪರಿಹಾರ ಸಿಕ್ಕಿಲ್ಲ. ಅರ್ಜಿ ಸಲ್ಲಿಸಿದರೂ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ”ವೆಂದು ಆರೋಪಿಸಿ ಕೆ ಆರ್ ಪೇಟೆ ತಾಲೂಕು ಮೂಡನಹಳ್ಳಿ ಗ್ರಾಮದ ರೈತ ಮಂಜೇಗೌಡ ಎಂ ಡಿ(55) ಅವರು ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಕಾವೇರಿ ಉದ್ಯಾನದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ಬಳಿಕ ಸಮೀಪದಲ್ಲಿದ್ದ ಸಾರ್ವಜನಿಕರು ಬೆಂಕಿ ನಂದಿಸಿ, ನಗರದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದರು. ಮಿಮ್ಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇಲ್ಲಿನ ವೈದ್ಯರು, ʼದೇಹವು ಶೇ.80ರಷ್ಟು ಸುಟ್ಟು ಹೋಗಿತ್ತುʼ ಎಂದು ತಿಳಿಸಿದ್ದರು. ರೈತ ಮಂಜೇಗೌಡ ಅವರು ಬುಧವಾರ ಬೆಳಿಗ್ಗೆ ಮೃತಪಟ್ಟರು.

ಈ ಹಿನ್ನೆಲೆಯಲ್ಲಿ ಘಟನೆ ಖಂಡಿಸಿ ಕನ್ನಡಪರ ಮತ್ತು ರೈತಪರ ಹೋರಾಟಗಾರರು ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮಂಗಳವಾರವೂ ಪ್ರತಿಭಟನೆ ನಡೆಸಿದ್ದು, “ಹೊತ್ತಿ ಉರಿದ ರೈತನಿಗೆ ನ್ಯಾಯ ಕೊಡಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ” ಎಂದು ಆಕ್ರೋಶ ಹೊರಹಾಕಿದ್ದರು. ರೈತ ಮಂಜೇಗೌಡ ಮೃತಪಟ್ಟ ಬಳಿಕವೂ ಬೃಹತ್‌ ಹೋರಾಟ ನಡೆಸಿದ್ದಾರೆ.

ಮೃತ ಮಂಜೇಗೌಡ ಕೆ ಆರ್ ಪೇಟೆ ತಾಲೂಕಿನ ಮಲ್ಲೇನಹಳ್ಳಿಯ ಸ.ನಂ 103 ಅರಣ್ಯ ಇಲಾಖೆಗೆ ಸೇರಿದ ಬೀಳುಬಿದ್ದಿದ್ದ ಜಾಗದಲ್ಲಿ ಕಲ್ಲುಗಳನ್ನು ತೆಗೆದು ವ್ಯವಾಸಯ ಮಾಡುತ್ತಿದ್ದರು. ಸದರಿ ಜಾಗ ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವುದರಿಂದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ.ನಂ 103ರಲ್ಲಿ ವ್ಯವಸಾಯ ಮಾಡಬಾರದೆಂದು ತಿಳಿಸಿದ್ದರು.

ಸಚಿವ ಚೆಲುವರಾಯ ಸ್ವಾಮಿ

ಮಂಜೇಗೌಡರು, ʼತಮ್ಮ ಕುಟುಂಬದಲ್ಲಿ 10 ಜನ ವಾಸವಾಗಿದ್ದು ಯಾವುದೇ ಜಮೀನು ಇರುವುದಿಲ್ಲʼವೆಂದು ಮನವಿ ಸಲ್ಲಿಸಿದ್ದರು. ಮಂಜೇಗೌಡ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 2014ರ ಆಗಸ್ಟ್‌ 14ರಂದು ₹3,50,000 ಬೆಳೆ ಸಾಲ ಪಡೆದಿದ್ದು, ಪ್ರಸ್ತುತ ₹7.79,613 ಬಾಕಿ ಪಾವತಿ ಮಾಡದೇ ಉಳಿಸಿಕೊಂಡಿದ್ದಾರೆಂದು ಕುಟುಂಬಸ್ಥರು ಸಚಿವರಿಗೆ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಬಲ ಬೆಲೆಗೆ ಕಬ್ಬು ಬೆಳೆಗಾರರ ಅನಿರ್ದಿಷ್ಟಾವಧಿ ಧರಣಿ: ನ.7ರಂದು ರಾಜ್ಯಾದ್ಯಂತ ಹೋರಾಟಕ್ಕೆ ರೈತರ ನಿರ್ಧಾರ

ನಂತರ ಮೃತ ರೈತನ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ಘೋಷಿಸಿರುವ ಸಚಿವ ಚೆಲುವರಾಯ ಸ್ವಾಮಿಯವರು ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಹೆಚ್ಚುವರಿ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಮೃತ ರೈತನ ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಸದರಿ ಜಾಗವನ್ನು ಜಂಟಿ ಸರ್ವೆ ನಡೆಸಿ ಸ್ಥಳವೇನಾದರೂ ಅರಣ್ಯ ಇಲಾಖೆ ಒಡೆತನಕ್ಕೆ ಸೇರದಿದ್ದರೆ ಸದರಿ ಜಾಗವನ್ನು ಕುಟುಂಬಸ್ಥರಿಗೆ ನೀಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...