ಮಂಡ್ಯ | ಕಬ್ಬು ಅರೆಯುವಿಕೆ ವಿಚಾರ: ರೈತರು- ಎನ್‌ಎಸ್ಎಲ್ ಶುಗರ್ಸ್ ಅಧಿಕಾರಿಗಳ ನಡುವೆ ಮಾತುಕತೆ

Date:

ಮಂಡ್ಯದ ಕಬ್ಬು ಬೆಳೆಗಾರರು, ರೈತ ಮುಖಂಡರು ಹಾಗೂ ಮದ್ದೂರು ತಾಲೂಕು ಕೊಪ್ಪ ಎನ್‌ಎಸ್‌ಎಲ್ ಶುಗರ್ಸ್ ಸಕ್ಕರೆ ಕಾರ್ಖಾನೆ ಅಧಿಕಾರಿಗಳು 2024-25 ಸಾಲಿನ ಕಬ್ಬು ಅರೆಯುವಿಕೆ ವಿಚಾರದಲ್ಲಿ ಸಭೆ ಸೇರಿದ್ದರು.

ಈ ಸಭೆಯಲ್ಲಿ ಮಾತನಾಡಿದ ರೈತ ಮುಖಂಡ ಸೊ ಸಿ ಪ್ರಕಾಶ್, ಈ ಬಾರಿ ಕಬ್ಬು ಬೆಳೆಗಾರರು ತುಂಬಾ ಸಂಕಷ್ಟದಲ್ಲಿದ್ದು ಕಾರ್ಖಾನೆ ಕೆಲವು ಮಾರ್ಪಾಡುಗಳನ್ನು ಮಾಡಿಕೊಂಡು ರೈತರಿಗೆ ಅನುಕೂಲ ಮಾಡಿಕೊಡಲು ಒತ್ತಾಯಿಸಿದರು.

ಕಬ್ಬು ಅರೆಯುವಿಕೆಯ 15 ದಿನಗಳ ಒಳಗಾಗಿ ಕಬ್ಬು ಹಣವನ್ನು ಪಾವತಿ ಮಾಡಬೇಕು, ಎಫ್‌ಆರ್‌ಪಿ ದರ 3151 ರೂ ಜೊತೆಗೆ ಪ್ರೋತ್ಸಾಹ ಧನ 250 ಕೊಡಬೇಕು, ಬಿತ್ತನೆ ಕಬ್ಬನ್ನು ಈ ಬಾರಿ ರೈತರಿಗೆ ಉಚಿತವಾಗಿ ಹಂಚಿಕೆ ಮಾಡಬೇಕು ಮತ್ತು ರಸಗೊಬ್ಬರ ಮತ್ತು ವ್ಯವಸಾಯದ ಖರ್ಚಿಗೆ ಮುಂಗಡ ಹಣ ಎಕರೆಗೆ 40,000 ರೂ.ಗಳನ್ನು ಪಾವತಿಸಬೇಕು. ಕಬ್ಬು ಕಟಾವು ನಂತರ ಅವಧಿ ಸಾಲದ ರೂಪದಲ್ಲಿ ಕಬ್ಬು ಸರಬರಾಜು ಮಾಡಿದ ನಂತರ ಹಣ ಹಿಡಿದುಕೊಳ್ಳುವಂತೆ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
mandya 7

ಕಬ್ಬು ಕಟಾವು ಮಾಡುವ ಹಂತದಲ್ಲಿ ಕಾರ್ಖಾನೆ ಸಿಬ್ಬಂದಿ ನಿಗಾ ವಹಿಸಬೇಕು, ಒಂದು ಟನ್ ಕಬ್ಬಿಗೆ ನಾನೂರು ರೂಪಾಯಿ ಕಟಾವು ದರ ನಿಗದಿಪಡಿಸಬೇಕು, ಪ್ರೆಸ್‌ಮಡ್ ಮತ್ತು ಬೂದಿಯನ್ನು ಕಬ್ಬು ಬೆಳೆಗಾರರಿಗೆ ಉಚಿತವಾಗಿ ಕೊಡಬೇಕು, ರೈತರ ಜಮೀನುಗಳಿಗೆ ಹೋಗಲು ಬಂಡಿ ದಾರಿ ಅಭಿವೃದ್ಧಿ ಮಾಡಿಸಲು ಒತ್ತು ಕೊಡಬೇಕು ಎಂಬುದು ರೈತರ ಹಕ್ಕೊತ್ತಾಯವಾಗಿತ್ತು.

ಕಬ್ಬು ಬೆಳೆಗಾರರಿಗೆ ಉಚಿತವಾಗಿ ಅರ್ಧ ಕೆಜಿ ಸಕ್ಕರೆ ಕೊಡಬೇಕು ಹಾಗೂ ತಿಂಗಳಲ್ಲಿ ಎರಡು ಬಾರಿ ಸಕ್ಕರೆ ವಿತರಿಸಬೇಕು, ಆಸಕ್ತ ರೈತರಿಗೆ ಅಂತಾರಾಜ್ಯ ಅಧ್ಯಯನದ ಪ್ರವಾಸ ಮಾಡಿಸಬೇಕು. ಹೀಗೆ ರೈತರು ಹಾಗೂ ಸಕ್ಕರೆ ಕಾರ್ಖಾನೆ ಅಧಿಕಾರಿಗಳ ನಡುವೆ ಅನೇಕ ವಿಷಯಗಳ ಚರ್ಚೆ ಆಗಿದ್ದು, ಆಡಳಿತ ಮಂಡಳಿಯ ಮುಂದೆ ರೈತರ ಬೇಡಿಕೆ ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳಲು ಬಗ್ಗೆ ಅಧಿಕಾರಿಗಳಲ್ಲಿ ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಚಿತ್ರದುರ್ಗ | ಶಸ್ತ್ರಚಿಕಿತ್ಸೆಗಾಗಿ 4 ಸಾವಿರ ಲಂಚ ಪಡೆದಿದ್ದ ಸರ್ಜನ್ ಡಾ. ಸಾಲಿ ಮಂಜಪ್ಪ ಅಮಾನತು

ಸಭೆಯಲ್ಲಿ ರೈತ ಮುಖಂಡರಾದ ಪ್ರಭುಲಿಂಗ ರಾಮಲಿಂಗೇಗೌಡ, ಪಣ್ಣೆದೊಡ್ಡಿ ವೆಂಕಟೇಶ್, ಶಿವಲಿಂಗಯ್ಯ, ನಂಜುಂಡಯ್ಯ ನಾಗರಾಜ್, ಲಿಂಗರಾಜ್, ಕೊಪ್ಪ ಯೋಗಾನಂದ, ತಮ್ಮಯ್ಯ, ದೇಶಹಳಿ ಮಹೇಶ್, ಸತೀಶ್, ರಾಮಕೃಷ್ಣ, ರಾಮಸ್ವಾಮಿ, ಜಗದೀಶ್ ಮುದ್ದುಂಗೆರೆ, ಕೆ.ಜಿ. ಉಮೇಶ್, ಕಾರ್ಖಾನೆಯ ಡಿಜಿಎಂ ರಾಮಚಂದ್ರರಾವ್, ಪರಿಮಳ ರಂಗನ್, ಗೌರಿ ಪ್ರಕಾಶ್, ಸೋಮಶೇಖರ್, ತಮ್ಮಯ್ಯ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...