ಮಂಡ್ಯ | ಕೃಷ್ಣರಾಜ ಸಾಗರ ಅಚ್ಚುಕಟ್ಟು ಪ್ರದೇಶದ ರೈತರಿಗೆ ನಿರಂತರ ನೀರು ಹರಿಸುವಂತೆ ಆಗ್ರಹ

Date:

ಕೃಷ್ಣರಾಜ ಸಾಗರ ಅಚ್ಚುಕಟ್ಟು ಪ್ರದೇಶದ ರೈತರು ಮುಂಗಾರು ಬೆಳೆ ಬೆಳೆಯಲು ಕಟ್ಟೆಯಿಂದ ಕಟ್ಟು ಪದ್ದತಿಯಲ್ಲಿ ನೀರು ಕೊಡುವ ಅವೈಜ್ಞಾನಿಕ ಪದ್ದತಿ ಕೈ ಬಿಟ್ಟು ನಿರಂತರ ನೀರು ಹರಿಸಬೇಕು ಎಂದು ಆಗ್ರಹಿಸಿದ ರೈತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ರೈತ ಸಂಘ(ಮೂಲ ಸಂಘಟನೆ) ಮುಂದಾಳತ್ವದಲ್ಲಿ ರೈತರು ಕಾವೇರಿ ನೀರಾವರಿ ನಿಗಮದ ಎದುರು ಪ್ರತಿಭಟನೆ ನಡೆಸಿ ಕೃಷ್ಣರಾಜ ಸಾಗರ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ಕಟ್ಟು ಪದ್ಧತಿಯಲ್ಲಿ ನೀರು ಹರಿಸುವ ಅವೈಜ್ಞಾನಿಕ ಕ್ರಮದ ಎದುರು ಆಕ್ರೋಶ ವ್ಯಕ್ತಪಡಿಸಿದರು.

ಸೊ ಸಿ ಪ್ರಕಾಶ್ ಮಾತನಾಡಿ “ಕಳೆದ ಎರಡು ವರ್ಷದಿಂದ  ಭೀಕರ ಬರ ಪರಿಸ್ಥಿತಿ ಪರಿಣಾಮ ರೈತರು ಬೆಳೆ ಬೆಳೆಯಲು ಸಾಧ್ಯವಾಗಲಿಲ್ಲ. ಬರದಿಂದ ತತ್ತರಿಸಿದ್ದ ಜಿಲ್ಲೆಯ ಜನರಿಗೆ ಕನ್ನಂಬಾಡಿ ಅಣೆಕಟ್ಟೆಯಲ್ಲಿ ನೀರು ಸಂಪೂರ್ಣ ತುಂಬಿರುವುದು  ರೈತರಲ್ಲಿ ಹುರುಪು ತಂದಿದೆ. ಕನ್ನಂಬಾಡಿ ತುಂಬಿದ ಸಂದರ್ಭದಲ್ಲಿ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನಿರಂತರ ನೀರು ಹರಿಯುವಿಕೆ ವಾಡಿಕೆ ಪದ್ಧತಿ ಇತ್ತು. ಆದರೆ ಇದೀಗ ಜಲಾಶಯ ತುಂಬಿದ್ದರೂ ಕೂಡಾ ಕಟ್ಟು ಪದ್ಧತಿಯಲ್ಲಿ  ನೀರು ಹರಿಸಲು ಮುಂದಾಗಿರುವುದು ಸರಿಯಲ್ಲ. ಉಸ್ತುವಾರಿ ಸಚಿವರು, ಶಾಸಕರು, ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ನಿಲುವಿನಲ್ಲಿ ಖಚಿತತೆ ಇಲ್ಲದಿರುವುದು ರೈತರಲ್ಲಿ ಆತಂಕ ಮೂಡಿಸಿದೆ. ಈ ಆತಂಕ ನಿವಾರಣೆಗೆ ನಾಲೆಗಳಿಗೆ ನಿರಂತರ ನೀರು ಹರಿಸುವ ತೀರ್ಮಾನ ಕೈಗೊಂಡು ನೀರು ಹರಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಡ್ಯ ಜಿಲ್ಲೆಯ ಕೆರೆ ಕಟ್ಟೆಗಳನ್ನು ಶೀಘ್ರ ತುಂಬಿಸಬೇಕು. ಕೆರೆ ಅಚ್ಚುಕಟ್ಟು ರೈತರಿಗೆ ಭತ್ತದ ಸಸಿ ಮಡಿಗೆ ಅವಕಾಶ ನೀಡಿ ಭತ್ತ ಬೆಳೆಯಲು ಅನುವು ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

“ವಿಸಿ ನಾಲೆ ಕೊನೆಯ ಭಾಗದ ಮದ್ದೂರು, ಮಳವಳ್ಳಿ, ಕೆ ಎಂ ದೊಡ್ಡಿ, ಕೊಪ್ಪ ಭಾಗದ ನಾಲೆಗಳಿಗೆ ನೀರು ಹರಿಸಿ ಮುಂಗಾರು ಬೆಳೆಗೆ ಅವಕಾಶ ಮಾಡಬೇಕು. ಮುಖ್ಯ ನಾಲೆಗಳಿಂದ ಉಪನಾಲೆಗಳಿಗೆ ಸಮರ್ಪಕವಾಗದೆ ನೀರು ಸರಬರಾಜಾಗದೆ ರೈತರ ಜಮೀನುಗಳಿಗೆ ನೀರು ದೊರಕದೆ ತೊಡಕಾಗಿದೆ. ಹಾಗಾಗಿ ನಾಲೆಗಳಲ್ಲಿನ ಹೂಳು, ಗಿಡ ಗಂಟೆಗಳನ್ನು ಸ್ವಚ್ಛಗೊಳಿಸಬೇಕು. ಜಿಲ್ಲಾ ವ್ಯಾಪ್ತಿಯ ಸಕ್ಕರೆ ಕಾರ್ಖಾನೆಗಳಿಗೆ ನೀರಿನ ಕೊರತೆ ಉಂಟಾಗಿ ನಿರಂತರ ಕಬ್ಬು ಅರೆಯುವಿಕೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಕಾರ್ಖಾನೆಗಳಿಗೆ ನೀರಿನ ಲಭ್ಯತೆ ಪೂರೈಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಗುಂಡಿಮಯವಾದ ಅನುಪಿನಕಟ್ಟೆ ಗ್ರಾಮದ ರಸ್ತೆ : ಹೈರಾಣಾದ ವಾಹನ ಸವಾರರು!

ರೈತಸಂಘದ ಜಿಲ್ಲಾಧ್ಯಕ್ಷ ಇಂಡುವಾಳು ಚಂದ್ರಶೇಖರ್, ಸೋ ಸಿ ಪ್ರಕಾಶ್, ರಾಮಕೃಷ್ಣಯ್ಯ, ಎಸ್ ಮಂಜೇಶ್, ಬೋರಲಿಂಗೇಗೌಡ, ವೆಂಕಟೇಶ್ ಪಣ್ಣೆದೊಡ್ಡಿ, ಆರ್ ಕಾಂತಯ್ಯ, ಡಿ ಎಸ್ ಚಂದ್ರಣ್ಣ, ಶಿವಲಿಂಗೇಗೌಡ, ಕಾಂತರಾಜು, ಪಿ ಕೆ ರಮೇಶ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...