ಮಂಡ್ಯ | ಎಲ್ಲ ಸರ್ಕಾರದಿಂದ ರೈತರು, ಕಾರ್ಮಿಕರ ಶೋಷಣೆ: ರೈತ ಮುಖಂಡ ಕೆಂಪೂಗೌಡ

Date:

ಯಾವುದೇ ಸರ್ಕಾರ ಬರಲಿ ರೈತರನ್ನು, ಕಾರ್ಮಿಕರನ್ನು ಶೋಷಣೆ ಮಾಡುವವರೇ. ಸಂಯುಕ್ತ ಹೋರಾಟ – ಕರ್ನಾಟಕದ ಬ್ಯಾನರಿನ ಅಡಿಯಲ್ಲಿ ಎಲ್ಲಾ ಸಂಘಟನೆಗಳು ಸೇರಿ ಹೋರಾಟ ಮಾಡುತ್ತಿದ್ದೇವೆ. ಇವತ್ತಿನ ಸ್ಥಿತಿಯಲ್ಲಿ ನಾವು ಒಟ್ಟಾಗುವುದು ಅನಿವಾರ್ಯವಾಗಿದೆ. ಎಲ್ಲ ಸೇರಿ ಹೋರಾಟ ಮಾಡಿದರೆ ಬೆಲೆ ಇದೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ಕೆಂಪೂಗೌಡ ಹೇಳಿದರು.

ಅವರು ರೈತ, ಕಾರ್ಮಿಕ, ದಲಿತ ಸಂಘಟನೆಗಳ ಒಕ್ಕೂಟದ ಸಂಯುಕ್ತ ಕಿಸಾನ್ ಮೋರ್ಚಾದ ಕರೆಯ ಮೇರೆಗೆ ದೇಶದ್ಯಾಂತ ಜಿಲ್ಲಾಧಿಕಾರಿ ಕಛೇರಿಗಳ ಬಳಿ ಪ್ರತಿಭಟನೆ ನಡೆಯಿತು. ಮಂಡ್ಯದ ಜಿಲ್ಲಾಧಿಕಾರಿ ಕಛೇರಿ ಬಳಿ ರೈತರ ವಿವಿಧ ಸಮಸ್ಯೆಗಳ ಬಗೆ ನಡರದ ಪ್ರತಿಭಟನೆ ನಡೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಮಂಡ್ಯ ಜಿಲ್ಲಾ ರೈತ ಸಂಘವು ಕೂಡ ಈ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಹೋರಾಟದಲ್ಲಿ ಭಾಗಿಯಾಯಿತು.

IMG 20241126 WA0065 1

ನಾವು ಮಾಡಿದ್ದೇ ಕಾನೂನು ಎಂಬ ಧೋರಣೆ ಒಕ್ಕೂಟ ಸರ್ಕಾರಕ್ಕೆ ಇತ್ತು. ಎಲ್ಲಾ ಸಂಘಟನೆಗಳ ಪ್ರಜ್ಣೆಯಿಂದ ಅದನ್ನು ಪ್ರಶ್ನೆ ಮಾಡುವ ವಿರೋಧ ಪಕ್ಷವನ್ನು ಆಯ್ಕೆ ಮಾಡಿದ್ದೇವೆ. ವಿರೋಧ ಪಕ್ಷ ಸಕ್ರಿಯವಾಗಿ ಕೆಲಸ ಮಾಡಿದಾಗ ಮಾತ್ರ ಪ್ರಜಾಪ್ರಭುತ್ವಕ್ಕೆ ಬೆಲೆ ಬರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಸಂಘಟನೆಗಳು ನಿರಂತರವಾಗಿ ಚಳುವಳಿಗಳನ್ನು ಮಾಡೋಣ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಸಿದ್ದರಾಜು ಮಾತನಾಡಿ, ಸರ್ಕಾರಗಳ ನೀತಿಯೇ ರೈತ, ಕಾರ್ಮಿಕ ವಿರೋಧಿ ಕಾನೂನುಗಳನ್ನು ಜಾರಿ ಮಾಡುವುದಾಗಿದೆ. ನಾವೆಲ್ಲ ಒಟ್ಟಾಗಿ ಹೋರಾಟದ ನಿರಂತರತೆಯನ್ನು ಕಾಪಾಡಿಕೊಳ್ಳಬೇಕಿದೆ. ಜನ ವಿರೋಧಿ ಸರ್ಕಾರಗಳನ್ನು ಕಿತ್ತೊಗೆಯಬೇಕು. ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳ ಕಿವಿ ಹಿಂಡಿ ಬಡಿದೆಬ್ಬಿಸಬೇಕಿದೆ. ನಮ್ಮ ನಡೆ ಮುಂಬರುವ ಸರಕಾರಗಳಿಗೆ ಎಚ್ಚರಿಕೆಯಾಗಬೇಕು. ಅವು ಎಚ್ಚೆತ್ತುಕೊಂಡು ನೀಡಬೇಕಿದೆ ಎಂದು ಕರೆ ನೀಡಿದರು.

ಇದನ್ನು ಓದಿದ್ದೀರಾ? ಮಂಡ್ಯ | ಶಾಲೆಯಲ್ಲಿ ಗಿಡ ಬೆಳೆಸಿದರೆ 6 ಸಾವಿರ ಸ್ಕಾಲರ್‌ಷಿಪ್!

ಕರ್ನಾಟಕ ಶ್ರಮಿಕ ಶಕ್ತಿಯ ವರದರಾಜೇಂದ್ರ ಮಾತನಾಡಿ, ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ಕೊಡದಿರುವುದರಿಂದ ರೈತರಿಗೆ ನಷ್ಟ ಉಂಟಾಗಿದೆ. ಕಾರ್ಮಿಕರಿಗೆ ಕನಿಷ್ಠ ವೇತನವನ್ನು ಕೂಡ ಕೊಡುತ್ತಿಲ್ಲ. ಈ ನಡೆಗಳಿಂದ ಕಾರ್ಮಿಕರ ಬದುಕು ದುರ್ಬಲವಾಗಿದೆ. ಈ ಕೂಡಲೇ ಒಕ್ಕೂಟ ಹಾಗೂ ರಾಜ್ಯ ಸರ್ಕಾರಗಳು ರೈತ-ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಎಲ್ಲಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆಯನ್ನು ಕಾನೂನು ಬದ್ಧಗೊಳಿಸಿ. 4 ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಿ. ಯಾವುದೇ ರೂಪದಲ್ಲಿ ಕಾರ್ಮಿಕರಿಗೆ ಗುತ್ತಿಗೆ ಇಲ್ಲವೇ ಹೊರಗುತ್ತಿಗೆ ಇರಬಾರದು. ರಾಷ್ಟ್ರೀಯ ಕನಿಷ್ಠ ವೇತನ ತಿಂಗಳಿಗ 26 ಸಾವಿರದ ಜಾರಿಗೊಳಿಸಿ. ಪಿಂಚಣಿ ತಿಂಗಳಿಗೆ 10 ಸಾವಿರ ಮತ್ತು ಅಸಂಘಟಿತ ಕಾರ್ಮಿಕರು, ಕೃಷಿ ವಲಯ ಎಲ್ಲಾ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಯನ್ನು ಒದಗಿಸಿ. ಸಾಲ ಭಾದೆ ಮತ್ತು ಆತ್ಮಹತ್ಯೆಗಳನ್ನು ಕೊನೆಗೊಳಿಸಲು ರೈತ ಮತ್ತು ಕೃಷಿ ಕಾರ್ಮಿಕರ ಸಮಗ್ರ ಸಾಲ ಮನ್ನಾ ಮಾಡಿ. ರೈತರಿಗೆ ಮತ್ತು ಕಾರ್ಮಿಕರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯಗಳನ್ನು ಖಚಿತಪಡಿಸಿ ಮುಂತಾದ ಹಕ್ಕೊತ್ತಾಯಗಳನ್ನು ಮಂಡಿಸಿದರು.

IMG 20241126 WA0039

ಈ ಹೋರಾಟದಲ್ಲಿ ಮಹಿಳಾ ಮುನ್ನಡೆಯ ಪೂರ್ಣಿಮಾ, ಪ್ರಾಂತ ಕೂಲಿಕಾರ ಸಂಘಟನೆಯ ಶಿವಕುಮಾರ್, ಭರತ್‌ರಾಜ್, ರಾಜ್ಯ ರೈತ ಸಂಘದ ಎಣ್ಣೆಹೊಳೆ ಮಂಜು, ರಘು, ಕರ್ನಾಟಕ ಶ್ರಮಿಕ ಶಕ್ತಿ, ಸಿಐಟಿಯು, ಕನ್ನಡ ಪರ ಸಂಘಟನೆ, ಜನವಾದಿ ಸಂಘಟನೆ ಇನ್ನೂ ಮುಂತಾದ ಸಂಘಟನೆಯ ಸದಸ್ಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...