ಮಂಡ್ಯ | ಮಗಳಿಗೆ ಅಧಿಕಾರ ಹಸ್ತಾಂತರಿಸಿದ ತಂದೆ

Date:

ತಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆಗೆ ಪಿಎಸ್‌ಐ ಆಗಿ ನೇಮಕಗೊಂಡ ಮಗಳಿಗೆ ಹೂಗುಚ್ಛ ನೀಡಿ ಅಧಿಕಾರ ಹಸ್ತಾಂತರಿಸಿದ್ದು, ತಂದೆಯಿಂದಲೇ ಅಧಿಕಾರ ಸ್ವೀಕರಿಸಿದ ಅಪರೂಪದ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯದಲ್ಲಿ ಪಿಎಸ್‌ಐ ಆಗಿದ್ದ ತಂದೆಯು ತಾನು ನಿರ್ವಹಿಸುತ್ತಿದ್ದ ಹುದ್ದೆಯ ಚಾರ್ಜನ್ನು (ಕರ್ತವ್ಯ ಹೊಣೆಗಾರಿಕೆ) ತಮ್ಮ ಮಗಳಿಗೆ ನೀಡಿದ್ದಾರೆ. ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿ ಎಸ್ ವೆಂಕಟೇಶ್ ಅವರು ಎಸ್‌ಪಿ ಕಚೇರಿಗೆ ವರ್ಗಾವಣೆಯಾಗಿದ್ದರು. ಈವರೆಗೆ ವೆಂಕಟೇಶ್ ಕಾರ್ಯ ನಿರ್ವಹಿಸುತ್ತಿದ್ದ ಹುದ್ದೆಗೆ ಅವರ ಪುತ್ರಿ ಬಿ ವಿ ವರ್ಷಾ ನೇಮಕಗೊಂಡಿದ್ದಾರೆ.

ಪಿಎಸ್‌ಐ ಪರೀಕ್ಷೆಯಲ್ಲಿ ತೇರ್ಗಡೆಗೊಂಡ 2022ರ ಬ್ಯಾಚ್‌ನಲ್ಲಿ ಪಿಎಸ್‌ಐ ಆಗಿರುವ ವರ್ಷಾ ಅವರು ಗುಲ್ಬರ್ಗಾದಲ್ಲಿ ತರಬೇತಿ ಮುಗಿಸಿ, ಮಂಡ್ಯದಲ್ಲೇ 1 ವರ್ಷ ಪ್ರೊಬೆಷನರಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಈಗ ಅವರ ಮೊದಲ ನೇಮಕ ಕೂಡ ಮಂಡ್ಯದಲ್ಲೇ ಆಗಿದೆ. ಅದೂ ಕೂಡ ಅದೃಷ್ಟವೆಂಬಂತೆ ತನ್ನ ತಂದೆ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಗೆ ಪಿಎಸ್‌ಐ ನೇಮಕಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಬಿ ವಿ ವರ್ಷಾ ಅವರು ಮಂಗಳವಾರ ತಮ್ಮ ತಂದೆಯಿಂದಲೇ ಪಿಎಸ್‌ಐ ಚಾರ್ಚ್ ಪಡೆದುಕೊಂಡು ಪೊಲೀಸ್ ವೃತ್ತಿಜೀವನ ಆರಂಭಿಸಿದ್ದಾರೆ. ಇವರು ಅರ್ಥಶಾಸ್ತದಲ್ಲಿ ಎಂಎ ಪದವಿಯನ್ನೂ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಜ್ಞಾನ, ಏಕಾಗ್ರತೆಗೆ ಯೋಗ ಉತ್ತಮ ಚಿಕಿತ್ಸೆ : ಡಾ. ಅರುಂಧತಿ ಎಸ್ ಅಂಗಡಿ

ವರ್ಷಾ ಅವರ ತಂದೆ ವೆಂಕಟೇಶ್ ಅವರು ತುಮಕೂರು ಜಿಲ್ಲೆ ಹುಲಿಯೂರು ದುರ್ಗದವರು. 16 ವರ್ಷಗಳ ಮಿಲಿಟರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಪಾಕಿಸ್ತಾನ, ಚೈನಾ, ಬಾಂಗ್ಲ ದೇಶದ ಗಡಿಯಲ್ಲಿ ಕರ್ತವ್ಯ ನಿರ್ವಹಿಸಿದ ಜತೆಗೆ ಕಾರ್ಗಿಲ್ ಯುದ್ಧದಲ್ಲೂ ಭಾಗಿಯಾಗಿದ್ದ ಹೆಗ್ಗಳಿಕೆ ಇದೆ. ಮಿಲಿಟರಿ ಸೇವೆಯಿಂದ ನಿವೃತ್ತರಾದ ಬಳಿಕ ಪಿಎಸ್‌ಐ ಪರೀಕ್ಷೆ ಪಡೆದು ಮಿಲಿಟರಿ ಕೋಟಾದಡಿ 2021ರ ಬ್ಯಾಚ್‌ನ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಗಿ 2ನೇ ವೃತ್ತಿ ಜೀವನ ಆರಂಭಿಸಿದ್ದರು.

ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಜಿಲ್ಲೆಯ ಹಲವೆಡೆ ಕರ್ತವ್ಯ ನಿರ್ವಹಿಸಿ, ಮತ್ತೆ ಮಂಡ್ಯ ಸೆಂಟ್ರಲ್ ಠಾಣೆಗೆ ಒಂದೂವರೆ ವರ್ಷದ ಹಿಂದೆ ವರ್ಗಾವಣೆಯಾಗಿ ಬಂದಿದ್ದರು. ಈಗ ತಾನು ನಿರ್ವಹಿಸುತ್ತಿದ್ದ ಹುದ್ದೆಯ ಚಾರ್ಜ್‌ ಪುತ್ರಿಗೆ ನೀಡಿ ಎಸ್‌ಪಿ ಕಚೇರಿಗೆ ವರ್ಗಾವಣೆಯಾಗಿದ್ದಾರೆ. ತಂದೆಯೇ ಮಗಳಿಗೆ ಚಾರ್ಜ್ ನೀಡುವ ವಿಶೇಷ ಕ್ಷಣಗಳಿಗೆ ಪೊಲೀಸ್ ಠಾಣೆಯ ಸಿಬ್ಬಂದಿ ಸಾಕ್ಷಿಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...