ಹಬ್ಬಕ್ಕೆಂದು ಆಲೆಮನೆಯಲ್ಲಿ ಪಟಾಕಿಗಳಿಗೆ ಮದ್ದು ತುಂಬುವ ವೇಳೆ ಸ್ಫೋಟ ಸಂಭವಿಸಿದ್ದು, ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ತಾಲೂಕಿನ ಜಿ ಕೆಬ್ಬಹಳ್ಳಿ ಗ್ರಾಮದಲ್ಲಿ ಘಟನೆ ನಡೆಸಿದೆ. ದುರ್ಘಟನೆಯಲ್ಲಿ ತಮಿಳುನಾಡು ಮೂಲದ ಕಾರ್ಮಿಕ ರಮೇಶ್ ಸಾವನ್ನಪ್ಪಿದ್ದಾರೆ. ಇನ್ನಿಬ್ಬರಿಗೆ ಗಾಯಗಳಾಗಿವೆ.
ಗ್ರಾಮದಲ್ಲಿ ಹಬ್ಬ ಆಚರಣೆ ಸಂದರ್ಭದಲ್ಲಿ ಪಟಾಕಿ ಸಿಡಿಸುವ ಜವಾಬ್ದಾರಿಯನ್ನು ತಮಿಳುನಾಡು ಮೂಲದ ನಾಲ್ವರಿಗೆ ನೀಡಲಾಗಿತ್ತು. ನಾಲ್ವರು ಗ್ರಾಮಕ್ಕೆ ಬಂದು ಆಲೆಮನೆಯೊಂದರಲ್ಲಿ ವಾಸ್ತವ್ಯವಿದ್ದರು. ಸೋಮವಾರ ಪಟಾಕಿಗೆ ಮದ್ದು ತುಂಬುವ ಸಂದರ್ಭದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಸ್ಪೋಟದ ರಭಸಕ್ಕೆ ಆಲೆಮನೆಗೆ ಸಂಪೂರ್ಣ ಹಾನಿಯಾಗಿದೆ.
ಗಾಯಾಳುಗಳನ್ನು ಮಿಮ್ಸ್ಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕ ತೆರಳಿ ಬೆಂಕಿ ನಂದಿಸಿದ್ದಾರೆ. ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




