ಮಂಡ್ಯ | ಅ.20ರಂದು ದೇಶದ ಮೊದಲ ರೈತರ ಶಾಲೆಗೆ ಶಂಕುಸ್ಥಾಪನೆ

Date:

ಯುವಜನತೆ ನಗರಗಳಿಗೆ ವಲಸೆ ಹೋಗುವುದನ್ನು ತಪ್ಪಿಸಲು ಮತ್ತು ವಿದ್ಯಾವಂತರನ್ನು ವ್ಯವಸಾಯದೆಡೆಗೆ ಆಕರ್ಷಿಸಲು ಮಂಡ್ಯದಲ್ಲಿ ಅಕ್ಟೋಬರ್‌ 20ರಂದು ರೈತರ ಶಾಲೆಗೆ ಶಂಕುಸ್ಥಾಪನೆ ನಡೆಯಲಿದೆ.

ರೈತರ ಶಾಲೆಯ ಮುಖ್ಯಸ್ಥ ಪ್ರೊ. ಸತ್ಯಮೂರ್ತಿ ಗಂಜಾಂ ಅವರು ಈ ಬಗ್ಗೆ ಪ್ರಕಟಣೆಯಲ್ಲಿ ತಿಳಿಸಿದ್ದು, “ಮಂಡ್ಯ ತಾಲೂಕಿನ ಕೀಲಾರ ಸಮೀಪದ ಆಲಕೆರೆ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ 10.30ಕ್ಕೆ ಭಾರತದ ಮೊದಲ ರೈತರ ಶಾಲೆಗೆ ಪ್ರಗತಿಪರ ರೈತರು ಶಂಕುಸ್ಥಾಪನೆ ನೆರವೇರಿಸಲಿದ್ದು, ಅಕ್ಕಪಕ್ಕದ ಊರುಗಳ ಗ್ರಾಮಸ್ಥರು ಪಾಲ್ಗೊಳ್ಳುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“ಯುವಜನರು ಪಟ್ಟಣಗಳಿಗೆ ಸಮರೋಪಾದಿಯಲ್ಲಿ ವಲಸೆ ಹೋಗುತ್ತಿರುವುದನ್ನು ತಡೆಯಲು ʼಭಾರತದ ಆತ್ಮ ಹಳ್ಳಿಗಳಲ್ಲಿದೆ. ರೈತರ ಉದ್ಧಾರವಾದರೆ ದೇಶದ ಉದ್ಧಾರವಾಗುತ್ತದೆʼ ಎಂಬ ಗಾಂಧಿಯ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡಲು ಪ್ರಯತ್ನಿಸುವತ್ತ ಹೆಜ್ಜೆ ಇಡಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಗರಗಳಿಗೆ ಯುಜನತೆ ವಲಸೆ ಹೋಗುವುದನ್ನು ತಪ್ಪಿಸುವುದು ಮತ್ತು ವ್ಯವಸಾಯದೆಡೆಗೆ ವಿದ್ಯಾವಂತರನ್ನು ಆಕರ್ಷಿಸಲು ರೈತರ ಶಾಲೆ ಆರಂಭಿಸುತ್ತಿದ್ದು, ಕೃಷಿ ವಿಜ್ಞಾನಿಗಳು, ವಿಶ್ವ ವಿದ್ಯಾಲಯಗಳ ಪ್ರೊಫೆಸರ್‌ಗಳು, ಮಾರುಕಟ್ಟೆ ತಜ್ಞರು, ಪ್ರಗತಿಪರ ಕೃಷಿಕರು ಮತ್ತು ಯುವ ಸಾಫ್ಟ್‌ವೇರ್ ತಂತ್ರಜ್ಞರು ರೈತರ ಶಾಲೆಯನ್ನು ರೂಪಿಸುತ್ತಿದ್ದಾರೆ. ರೈತರಿಗೆ ಅಗತ್ಯವಾಗಿ ಬೇಕಾದ ಸಿಲಬಸ್ ಕೂಡ ತಯಾರಾಗುತ್ತಿದೆ. ಹೊಸ ವರ್ಷ 2025ರ ಜನವರಿ 1ಕ್ಕೆ ರೈತರ ಶಾಲೆಯ ಕಾರ್ಯಾಚರಣೆ ಶುರುವಾಗಲಿದೆ” ಎಂದು ಪ್ರೊ. ಸತ್ಯಮೂರ್ತಿ ಗಂಜಾಂ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪ್ರವಾದಿ ಮಹಮ್ಮದ್‌ರಿಗೆ ಅವಹೇಳನ; ಯತಿ ನರಸಿಂಹಾನಂದ ವಿರುದ್ಧ ಕ್ರಮಕ್ಕೆ ಆಗ್ರಹ

“ಕೃಷಿಯ ಹೊಸ ಸಾಧ್ಯತೆಗಳನ್ನು ಪರಿಚಯಿಸುವುದರ ಜತೆಗೆ ಬೆಳೆ ವಿಧಾನ, ರೋಗಬಾಧೆಗಳ ನಿವಾರಣೆಯ ಕ್ರಮಗಳು ಮತ್ತು ಮಾರುಕಟ್ಟೆ ಜ್ಞಾನವನ್ನು ಗ್ರಾಮಮಟ್ಟದಲ್ಲಿ ನೀಡುವುದು ರೈತರ ಶಾಲೆಯ ಸದಾಶಯವಾಗಿದೆ” ಎಂದರು.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗಂಜಾಂ ಗ್ರಾಮದ ಸತ್ಯಮೂರ್ತಿಯವರು ಕೃಷಿ ಅರ್ಥಶಾಸ್ತ್ರದ ಬಗ್ಗೆ ಸಾಕಷ್ಟು ಓದಿಕೊಂಡಿದ್ದು, ಸ್ವತಃ ಕೃಷಿಕರಾಗಿದ್ದರೂ, ಐದಾರು ವರ್ಷಗಳಿಂದ ಮಂಡ್ಯ ಹಳ್ಳಿ‌ಹಳ್ಳಿಗಳನ್ನು ಸುತ್ತಾಡಿ, ರೈತರೊಂದಿಗೆ ಒಡನಾಡಿ ರೈತರನ್ನು ಎಲ್ಲ ಬಗೆಯಿಂದ ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಇದೀಗ ರೈತರ ಶಾಲೆಯೊಂದಕ್ಕೆ ಅಡಿಗಲ್ಲು ಹಾಕುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...