ಮುತ್ತತ್ತಿ ಅರಣ್ಯ ಪ್ರದೇಶದ ಕಾವೇರಿ ನದಿಯಲ್ಲಿ ಈಜಾಡಲು ತೆರಳಿದ್ದ ತಂದೆ ಮಗ ಸೇರಿದಂತೆ ನಾಲ್ವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.
ಮೈಸೂರಿನ ಗುಂಡೂರಾವ್ ನಗರ ನಿವಾಸಿಗಳಾದ ನಾಗೇಶ್(45), ಅವರ ಪುತ್ರ ಭರತ್(17), ಮಹಾದೇವ(14), ಗುರು(32) ಮೃತಪಟ್ಟವರು.
ಮೈಸೂರಿನ ಕನಕನಗರ ನಿವಾಸಿಗಳಾದ ಭಾಗ್ಯಮ್ಮ ಹಾಗೂ ರಾಜು ದಂಪತಿ ಮುತ್ತತ್ತಿಯ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಆಯೋಜಿಸಿದ್ದರು. ಈ ಸಲುವಾಗಿ ತೆರಳಿದ ವೇಳೆ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಅರಣ್ಯ ಪ್ರದೇಶಕ್ಕೆ ಮಂಗಳವಾರ ಬೆಳಿಗ್ಗೆ 50 ಮಂದಿಯ ತಂಡವೊಂದು ಬಂದಿತ್ತು. ಬೆಳಿಗ್ಗೆ ತಿಂಡಿ ತಿಂದ ಬಳಿಕ ಹಲವರು ಈಜಾಡಲು ಕಾವೇರಿ ನದಿಗೆ ಇಳಿದಿದ್ದರು. ಈಜಾಡುವ ಸಂದರ್ಭದಲ್ಲಿ ಮಹಾದೇವ ನೀರಿನಲ್ಲಿ ಮುಳುಗಿದರು. ಆತನನ್ನು ರಕ್ಷಿಸಲು ತಂದೆ ನಾಗೇಶ್ ಪ್ರಯತ್ನಿಸಿದರು. ಆದರೆ, ಅವರೂ ಕೂಡಾ ನೀರಿನಲ್ಲಿ ಸಿಲುಕಿದರು. ರಕ್ಷಣೆಗೆ ತೆರಳಿದ ಭರತ್, ಗುರು ಕೂಡ ಮುಳುಗಿದರು. ನೀರಿನಿಂದ ಹೊರಬರಲಾಗದೆ ನಾಲ್ವರೂ ಮೃತಪಟ್ಟಿದ್ದಾರೆ.
ಈ ಸುದ್ದಿ ಓದಿದ್ದೀರಾ? ಗದಗ | ಚರಂಡಿ ಗಬ್ಬುನಾರುತ್ತಿದ್ದರು ಅಧಿಕಾರಿಗಳ ನಿರ್ಲಕ್ಷ್ಯ; ಗ್ರಾಮಸ್ಥರ ಆಕ್ರೋಶ
ನಾಗೇಶ್ ಹಾಗೂ ಭರತ್ ಮೃತದೇಹವನ್ನು ನೀರಿನಿಂದ ಹೊರತೆಗೆದಿದ್ದು, ಮಹಾದೇವ, ಗುರು ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಘಟನೆ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




