ಮಂಡ್ಯ | ಶ್ರಮಜೀವಿ ಪೌರಕಾರ್ಮಿಕರು, ದಿಟವಾದ ಕಾಯಕಯೋಗಿಗಳು: ನಾಗೇಶ್

Date:

ಸೂರ್ಯೋದಯಕ್ಕೂ ಮುನ್ನ ನಗರವನ್ನು ಸ್ವಚ್ಛಗೊಳಿಸುವ ಕಾಯಕದಲ್ಲಿ ನಿರತವಾಗುವ ಶ್ರಮಜೀವಿ ಪೌರಕಾರ್ಮಿಕರು ದಿಟವಾದ ಕಾಯಕಯೋಗಿಗಳು ಎಂದು ಮಂಡ್ಯ ನಗರಸಭೆ ಅಧ್ಯಕ್ಷ ನಾಗೇಶ್ ಹೇಳಿದರು.

ನಗರದ ಪರಮಪೂಜ್ಯ ಡಾ. ಶ್ರೀ ಶಿವಕುಮಾರ ಮಹಾಸ್ವಾಮೀಜಿ ಉದ್ಯಾನವನದಲ್ಲಿ ಸೇವಾ ನಿವೃತ್ತಿ ಹೊಂದಿದ ಪೌರಕಾರ್ಮಿಕ ಹಾಗೂ ಕರಾಟೆ ತರಬೇತುದಾರ ನಾರಾಯಣ್ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

“ಪೌರಕಾರ್ಮಿಕರನ್ನು ಯಾರೂ ಕೂಡಾ ಕೀಳಾಗಿ ಕಾಣಬಾರದು. ಪ್ರತಿದಿನ ನಗರದ ಕಸವನ್ನು ಸ್ವಚ್ಚಗೊಳಿಸುವ ಕೆಲಸದಲ್ಲಿ ಶ್ರಮವಹಿಸುವ ಅವರ ಕಾಯಕ ಇಲ್ಲದಿದ್ದರೆ ನಗರದಲ್ಲಿ ಅನೈರ್ಮಲ್ಯ ತಾಂಡವವಾಡುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೌರಾಯುಕ್ತ ಪಂಪಶ್ರೀ ಮಾತನಾಡಿ, “ಕರಾಟೆಯ ಜತೆಗೆ ನಗರದ ಸ್ವಚ್ಚತೆಯಲ್ಲೂ ಉತ್ತಮ ಹೆಸರು ಮಾಡಿರುವ ನಾರಾಯಣ್ ಕಾಯಕ ಶ್ರದ್ಧೆ ಎಲ್ಲರಿಗೂ ಅನುಕರಣೀಯವಾಗಿದೆ. ಪೌರಕಾರ್ಮಿಕ ನಾರಾಯಣ್ ಮಂಡ್ಯ ನಗರಸಭೆಯಲ್ಲಿ ಶಿಸ್ತಿನ ಸಿಪಾಯಿಯಂತೆ ತಮ್ಮ ಸೇವೆಯನ್ನು ಸಲ್ಲಿಸಿದ್ದಾರೆ. ಪೌರಕಾರ್ಮಿಕ ವೃತ್ತಿಯ ಜೊತೆಯಲ್ಲೇ ಕರಾಟೆಯನ್ನೂ ಮೈಗೂಡಿಸಿಕೊಂಡು ಹಲವಾರು ಮಂದಿಗೆ ಸಾಹಸ ಕ್ರೀಡೆಯಾದ ಕರಾಟೆ ತರಬೇತಿ ನೀಡಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಿರುವುದು ಎಲ್ಲ ಪೌರಕಾರ್ಮಿಕರಗೂ ಮಾದರಿಯಾಗಿದೆ” ಎಂದು ಬಣ್ಣಿಸಿದರು.

ಪೌರಕಾರ್ಮಿಕರ ಸಂಘನೆಯ ರಾಜ್ಯ ಉಪಾಧ್ಯಕ್ಷರಾದ ನಾಗೇಶ್ ಮಾತನಾಡಿ, ಹನ್ನೆರಡನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣ ಕಸಗುಡಿಸುವ ಮಂದಿಯನ್ನೂ ಶರಣರನ್ನಾಗಿಸಿ ಅವರಿಗೆ ಧರ್ಮದೀಕ್ಷೆ ನೀಡಿ ಗೌರವಿಸಿ ಕಾಯಕದಲ್ಲೇ ಕೈಲಾಸ ಕಾಣಬೇಕೆಂಬ ದಿವ್ಯ ಸಂದೇಶವನ್ನು ಸಾರಿದರು. ಅದೇ ಹಾದಿಯಲ್ಲಿ ಇಂದು ಪೌರಕಾರ್ಮಿಕರು ಸಾಗುತ್ತಿರುವುದು ಶ್ಲಾಘನೀಯ ಎಂದರು.

ಇದನ್ನು ಓದಿದ್ದೀರಾ? ಮದ್ದೂರು | ಮಣ್ಣಿನ ಆರೋಗ್ಯ, ರೈತರ ಕಲ್ಯಾಣಕ್ಕೆ ಸರ್ಕಾರ ಗಮನಹರಿಸಲಿ: ಚಂದನ್‌ ಗೌಡ

ನಗರಸಭೆ ಮಾಜಿ ಅಧ್ಯಕ್ಷ ಮಂಜು ಮಾತನಾಡಿ, “ಪೌರಕಾರ್ಮಿಕರು ದುಶ್ಚಟಗಳಿಂದ ದೂರವಿದ್ದು, ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು. ನಾರಾಯಣ್ ಮಂಡ್ಯ ನಗರದಲ್ಲಿ ಅತ್ಯುತ್ತಮ ಪೌರಕಾರ್ಮಿಕರಾಗಿ ಸೇವೆ ಸಲ್ಲಿಸಿದ್ದು, ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಅವರ ನಿವೃತ್ತಿ ಜೀವನ ಸುಖಮಯವಾಗಿರಲಿ” ಎಂದು ಆಶಿಸಿದರು.

ಕಾಯಕಯೋಗಿ ಫೌಂಡೇಶನ್ ಅಧ್ಯಕ್ಷ ಎಂ ಶಿವಕುಮಾರ್, ಪೌರಾಯುಕ್ತ ಪಂಪಶ್ರೀ ಹಾಗೂ ಪೌರಕಾರ್ಮಿಕ ನಾರಾಯಣ್ ಅವರಿಗೆ ವಿಶ್ವಗುರು ಬಸವಣ್ಣನವರ ಭಾವಚಿತ್ರ ನೀಡಿ ಅಭಿನಂದಿಸಿ ಮಾತನಾಡಿದರು.

ನಗರಸಭೆ ಸದಸ್ಯರಾದ ರಜನಿ, ಲಲಿತಾ, ಮುಖಂಡರಾದ ಎಂ ಆರ್ ರಘು, ಅಶ್ವಥ್, ಪ್ರಕಾಶ್, ನಂಜುಂಡಪ್ಪ, ಮುತ್ತಾಲಯ್ಯ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...