ಮಂಡ್ಯ | ಒಂದು ಟ್ವೀಟ್‌ನಿಂದ ಏನಾಗುತ್ತದೆ ಎಂದು ಪ್ರಶ್ನಿಸುವವರಿಗೆ ಇಲ್ಲಿದೆ ಉತ್ತರ!

Date:

ಕನ್ನಡ ಮನಸುಗಳು ಟ್ವಿಟರ್ ಅಕೌಂಟಿನಿಂದ ಪವನ್‌ ಧರೆಗುಂಡಿ, ಚಿಕ್ಕಮಂಡ್ಯ ಶಾಲೆಯ ಮುಂಭಾಗದಲ್ಲಿನ ಅವ್ಯವಸ್ಥೆ, ಗಲೀಜು ಮತ್ತು ಗಬ್ಬು ವಾಸನೆಯ ಕುರಿತು ಒಂದು ಟ್ವೀಟ್ ಮಾಡಿದ್ದರು. ಅದು ನಾಡಿನ ಸಿಎಂ ಸಿದ್ದರಾಮಯ್ಯನವರ ವಿಶೇಷ ಕರ್ತವ್ಯಾಧಿಕಾರಿಗೂ ಟ್ಯಾಗ್ ಮಾಡಿದ್ದರು. ಇದು ಪ್ರಜ್ಞಾವಂತರ ಗಮನ ಸೆಳೆದಿತ್ತು. ಪರಿಸರ ಪ್ರೇಮಿಗಳು ಮತ್ತು ಸರಕಾರಿ ಶಾಲಾಭಿಮಾನಿಗಳು ಸಂಬಂಧಪಟ್ಟವರಿಗೆ ಕರೆ ಮಾಡಿದ್ದರು.

ಇದಕ್ಕೆ ಸಕಾಲದಲ್ಲಿ ಸ್ಪಂದಿಸಿದ ಮಂಡ್ಯದ ಜಿಲ್ಲಾಡಳಿತ ಕೂಡಲೇ ದುರ್ವಾಸನೆ ಬೀರುತ್ತಿದ್ದ ಸ್ಥಳವನ್ನು ಶುಚಿಗೊಳಿಸುವಂತೆ ನಿರ್ದೇಶನ ನೀಡಿತ್ತು. ಹಲವು ವರ್ಷಗಳಿಂದ ಶಾಲೆಯ ಮುಂಭಾಗ ಕಸ ಸುರಿದಿದ್ದರಿಂದ ಆವರಣವನ್ನು ಸ್ವಚ್ಛಗೊಳಿಸಲು ಪೌರ ಕಾರ್ಮಿಕರಿಗೆ ಇಡೀ ದಿನ ಬೇಕಾಯಿತು. ಸ್ಥಳೀಯ ನಾಗರಿಕರು ಸಂತಸ ವ್ಯಕ್ತಪಡಿಸಿದ್ದಾರೆ.

IMG 20241118 WA0004

ನಮಗೆ ಕಾಣದ್ದು ಪವನ್‌ಗೆ ಕಂಡಿತು!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧರೆಗುಂಡಿ ಪವನ್ ಮಾತನಾಡಿ, ಚಿಕ್ಕ ಮಂಡ್ಯ ಶಾಲೆಗೆ ಸುಣ್ಣ, ಬಣ್ಣ ಮಾಡಲು ವಾಲೆಂಟಿಯರ್‌ಗಳಾಗಿ ಹೋಗಿದ್ವಿ. ಶಾಲೆಯ ಪಕ್ಕದಲ್ಲಿ ತುಂಬಾ ಅಂದರೆ ತುಂಬಾನೆ ಗಲೀಜಾಗಿತ್ತು. ಶಾಲೆಯ ಅಕ್ಕ ಪಕ್ಕದ ಪರಿಸರ ಸ್ವಚ್ಛವಾಗಿರಬೇಕು ಎನ್ನುವ ಉದ್ದೇಶದಿಂದ ಒಂದು ವಿಡಿಯೋ ಮಾಡಿ ಟ್ವಿಟ್ ಮಾಡಿದ್ದೆ. ಅದಕ್ಕೆ ಜಿಲ್ಲಾಡಳಿತ ಸ್ಪಂದಿಸಿ ಗಲೀಜನ್ನು ಎತ್ತಾಕಿಸಿದೆ ಎಂದು ಮಾಹಿತಿ ನೀಡಿದರು.

IMG 20241118 WA0009

ಚಿತ್ರಕೂಟದ ಅರವಿಂದ ಪ್ರಭು ಮಾತನಾಡಿ, ನಾವು ಪ್ರತಿ ದಿನ ಇದೇ ರಸ್ತೆಯಲ್ಲಿ ಓಡಾಡುತ್ತಿದ್ದೆವು. ಪಕ್ಕದಲ್ಲೇ ಇರುವ ನಿಲ್ದಾಣದಲ್ಲಿ ವಾಸನೆ ಸಹಿಸಿಕೊಂಡು ಬಸ್ ಹತ್ತುತ್ತಿದ್ದೆವು. ನಮಗ್ಯಾರಿಗೂ ಇದು ಕಣ್ಣಿಗೆ ಬಿದ್ದಿರಲಿಲ್ಲ. ನೂರು ಕಿಲೋ ಮೀಟರ್ ದೂರದಿಂದ ಬಂದ ಕನ್ನಡವೀರನೊಬ್ಬ ನಮ್ಮೆಲ್ಲರ ಕಣ್ಣು ತೆರೆಸಿದ. ಶಾಲೆಯ ಮಕ್ಕಳ ಜತೆಗೆ ಸಾರ್ವಜನಿಕರಿಗೂ ಪವನ್ ಈ ಕೆಲಸದಿಂದ ಒಳ್ಳೆಯದಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

https://twitter.com/kannadamanasuga/status/1856197861223899365?t=fImVbTd_kjUaTRQ2CANUPw&s=19

ಚಿಕ್ಕಮಂಡ್ಯ ಸರಕಾರಿ ಶಾಲೆಯ ದೈಹಿಕ ಶಿಕ್ಷಕ ಚಂದನ್ ಮಾತನಾಡಿ, ಗಲೀಜು ಮಾಡಿ ಎತ್ತಾಕುವುದಕ್ಕಿಂತ ಕಸ ಹಾಕದಂತೆ ಸ್ಥಳೀಯ ಆಡಳಿತದಿಂದ ಕ್ರಮ ಆಗಬೇಕು. ಕನ್ನಡ ಮನಸ್ಸುಗಳು ತಂಡದ ಪವನ್ ಧರೆಗುಂಡಿಯವರಿಗೆ ಬಂದಂತಹ ಯೋಚನೆ ನಮಗ್ಯಾಕೆ ಬರಲಿಲ್ಲ ಎಂದರು.

ಇದನ್ನು ಓದಿದ್ದೀರಾ? ಮಂಡ್ಯ | ದಕ್ಷಿಣ ಭಾರತಕ್ಕೆ ಸುಪ್ರೀಂ ಕೋರ್ಟ್ ಬೆಂಚ್ ಬೇಕು: ಅಭಿಗೌಡ

ಮಂಗಲ ಯೋಗೇಶ್ ಮಾತನಾಡಿ, ಪಂಚಾಯಿತಿಯಿಂದ ಆಯ್ಕೆ ಆದವರಿಗೆ ಕಣ್ಣು, ಕಿವಿ, ನಾಲಿಗೆ ಯಾವುದೂ ಇಲ್ಲ. ಅಯ್ಯೋ ನಮಗ್ಯಾಕೆ ಬಿಡು ಅಂತ ಸುಮ್ಮನಾಗುತ್ತಾರೆ. ಕೇಳುವವರಿದ್ದಾಗಲೇ ಕೆಲಸ ಆಗುವುದು. ಗೆಳೆಯ ಪವನ್ ಎಚ್ಚರಿಸುವ ಕೆಲಸ ಮಾಡಿರುವುದರಿಂದ ಒಳೆಯದಾಗಿದೆ ಎಂದು ಮೆಚ್ಚುಗೆ ಸೂಚಿಸಿದರು.

Untitled 24
ನಗರಕೆರೆ ಜಗದೀಶ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...