ಮಂಡ್ಯ | ರೌಡಿಶೀಟರ್ ಅಶೋಕ್ ಪೈ ಗಡಿಪಾರು; ಆದೇಶಕ್ಕೆ ಹೈಕೋರ್ಟ್ ತಡೆ

Date:

  • ಗಡಿಪಾರು ಮಾಡಿ ಆದೇಶ ಹೊರಡಿಸಿದ್ದ ಜಿಲ್ಲಾಧಿಕಾರಿ
  • ನ್ಯಾ, ಎಸ್ ವಿಶ್ವಜಿತ್ ಶೆಟ್ಟಿ ಅವರ ಪೀಠದಿಂದ ಅರ್ಜಿ ವಿಚಾರಣೆ

ಮಂಡ್ಯ ಜಿಲ್ಲೆಯಾದ್ಯಂತ ನಿರಂತರವಾಗಿ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿ ಪೊಲೀಸರಿಗೆ ತಲೆನೋವಾಗಿದ್ದ ರೌಡಿಶೀಟರ್‌ ಅಶೋಕ್‌ ಪೈ ಗಡಿಪಾರು ಆದೇಶಕ್ಕೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.

ಮಂಡ್ಯ ಜಿಲ್ಲೆಯ ಅಶೋಕ್‌ ಪೈ ಹಲವು ದಿನಗಳಿಂದ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆಂದು ಆರೋಪಿಸಲಾಗಿದೆ. ಆತನನ್ನು 2023ರ ಮಾ.15ರಿಂದ ಜು.15ರವರೆಗೆ ಮಂಡ್ಯ ಜಿಲ್ಲೆಯಿಂದ ಗಡಿಪಾರು ಮಾಡಿ ಮಂಡ್ಯ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು.

ತನ್ನನ್ನು ಗಡಿಪಾರು ಮಾಡಿದ್ದ ಆದೇಶವನ್ನು ಪ್ರಶ್ನಿಸಿ ಮತ್ತು ಆದೇಶವನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಅಶೋಕ್‌ ಪೈ ಕ್ರಿಮಿನಲ್ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜಿದಾರ ಪರ ವಕೀಲ ಸಿ.ಎನ್ ರಾಜು “ಅಶೋಕ್‌ ಪೈ ಇದುವರೆಗೂ ಯಾವುದೇ ಅಪರಾಧ ಚಟುವಟಿಕೆಯಲ್ಲಿ ಪಾಲ್ಗೊಂಡಿಲ್ಲ. ಆದರೂ, ಕೂಡ ಮಂಡ್ಯ ಪೊಲೀಸ್ ವರಿಷ್ಠಧಿಕಾರಿ ಅಶೋಕ್ ಪೈ ವಿರುದ್ಧ ವರದಿ ಸಿದ್ಧಪಡಿಸಿದ್ದು, ಇದರಲ್ಲಿ ಕೂಡ ಯಾವುದೇ ಸೂಕ್ತ ಸಾಕ್ಷ್ಯಧಾರಗಳು ಇಲ್ಲ” ಎಂದು ತಿಳಿಸಿದ್ದರು.

ಈ ಸುದ್ದಿ ಓದಿದ್ದೀರಾ?: ಕರ್ನಾಟಕ-ಮಹಾರಾಷ್ಟ್ರ ಗಡಿಜನರಿಗೆ ವಿಮೆ | ಉದ್ಧಟತನದ ಪರಮಾವಧಿ ಎಂದ ಸಿಎಂ ಬೊಮ್ಮಾಯಿ

“ಈ ಬಗ್ಗೆ ಜಿಲ್ಲಾಧಿಕಾರಿಗಳು ನೋಟಿಸ್‌ ನೀಡಿದಾಗ ಅರ್ಜಿದಾರರು ಅವರ ಮುಂದೆ ಹಾಜರಾಗಿ ಅಗತ್ಯ ವಿವರಣೆ ಮತ್ತು ಸಾಕ್ಷ್ಯಗಳನ್ನು ಒದಗಿಸಿದ್ದಾರೆ. ಅಲ್ಲದೆ, ಆಕ್ಷೇಪಣೆ ಕೂಡ ಸಲ್ಲಿಸಿದ್ದಾರೆ. ಆದರೂ, ಇದ್ಯಾವುದನ್ನು ಪರಿಗಣಿಸದ ಜಿಲ್ಲಾಧಿಕಾರಿಗಳು ಗಡುಪಾರು ಆದೇಶ ಮಾಡಿದ್ದರು” ಎಂದು ವಾದಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ, ಅರ್ಜಿಯಲ್ಲಿ ಪ್ರತಿವಾದಿಗಳಾದ ಮಂಡ್ಯ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಅರ್ಜಿ ಕುರಿತ ಮುಂದಿನ ವಿಚಾರಣೆವರೆಗೆ ಅರ್ಜಿದಾರರ ವಿರುದ್ಧದ ಗಡಿಪಾರು ಆದೇಶಕ್ಕೆ ತಡೆಯಾಜ್ಞೆ ನೀಡಿದ್ದು, ವಿಚಾರಣೆಯನ್ನು ಮುಂದೂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...