ಮಂಡ್ಯ | ಹಾಕಿ ಮಾಂತ್ರಿಕ ದ್ಯಾನ್‌ ಚಂದ್‌ ಅವರ 119ನೇ ಜನ್ಮದಿನ

Date:

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹಾಕಿ ಮಾಂತ್ರಿಕ ದ್ಯಾನ್‌ ಚಂದ್‌ ಅವರ 119ನೇ ಜನ್ಮದಿನದ ಆಚರಿಸಿದರು.

ಡಾ. ಕೆ ವೈ ಶ್ರೀನಿವಾಸ್ ಮಾತನಾಡಿ “ಮಕ್ಕಳೇ ನಿಮಗೆ ಇವತ್ತು ಯಾವ ದಿನವೆಂದು ಗೊತ್ತಿಲ್ಲ. ಆಗಸ್ಟ್‌ 29ರ ವಿಶೇಷತೆಯ ಕುರಿತು ಯಾವ ಪತ್ರಿಕೆಯಲ್ಲೂ ಒಂದು ಸುದ್ದಿ ಇಲ್ಲ. ನಮ್ಮ ಒಕ್ಕೂಟದ ಸ್ಥಿತಿ ಈ ಮಟ್ಟಿಗಿದೆ. ಒಲಂಪಿಕ್ಸ್‌ನಲ್ಲಿ ನಮಗೆ ಸಿಕ್ಕ ಪದಕಗಳ ಸಂಖ್ಯೆಯೇ ಕ್ರೀಡೆಯ ಬಗ್ಗೆ ನಮಗಿರುವ ಉದಾಸಿನತೆಯ ಮನಸ್ಥಿತಿಯನ್ನು ತಿಳಿಸುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

“ಆಗಸ್ಟ್‌ 29ರಂದು ದ್ಯಾನ್‌ ಚಂದ್‌ ಅವರ ಹುಟ್ಟುಹಬ್ಬ. ಈ ದಿನವನ್ನು ರಾಷ್ಟ್ರೀಯ ಕ್ರೀಡಾ ದಿನವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಧ್ಯಾನ್‌ ಚಂದ್ ಅವರು ಮಿಲಿಟರಿಯಲ್ಲಿ ಸೈನಿಕರಾಗಿದ್ದರು. ಹಗಲಿನಲ್ಲಿ ಕೆಲಸ ಮಾಡುತ್ತ ರಾತ್ರಿ ಬೆಳದಿಂಗಳ ಬೆಳಕಿನಲ್ಲಿ ಹಾಕಿ ಅಭ್ಯಾಸ ಮಾಡುತ್ತಿದ್ದರು. ಆದ್ದರಿಂದ ʼಧ್ಯಾನ್‌ಚಂದ್ʼ ಎಂಬ ಹೆಸರು ಬಂತು” ಎಂದು ಮಕ್ಕಳಿಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಕೀಲ ಸಿ ಎಸ್ ವೆಂಕಟೇಶ್ ಮಾತನಾಡಿ, “ಹೆಣ್ಣುಮಕ್ಕಳಿಗೆ ಕ್ರೀಡೆ ಎಂದರೆ ಇಷ್ಟ ಇಲ್ವಾ. ನಿಮ್ಮ ಸುತ್ತಮುತ್ತ ವಾತಾವರಣ ಕ್ರೀಡೆಗೆ ಪೂರಕವಾಗಿ ಇಲ್ವಾ. ತಂದೆ-ತಾಯಿ ಶಿಕ್ಷಕರು ನಿಮ್ಮ ಕ್ರೀಡಾ ಬೆಳವಣಿಗೆಗೆ ಸಹಾಯ ಮಾಡುತ್ತಲ್ವಾ ಅಥವಾ ನಿಮಗೇ ಆಸಕ್ತಿ ಇಲ್ವಾ. ಮನೆಗಳಲ್ಲಿ ಓದು ಬರಹಕ್ಕೆ ಮಾತ್ರ ಒತ್ತು ಕೊಟ್ಟಾಗ ಕ್ರೀಡೆಯ ಆಸಕ್ತಿ ಕಡಿಮೆಯಾಗುತ್ತದೆ. ವಿನೇಶ್ ಫೋಗಟ್ ಎಷ್ಟೇ ಕಷ್ಟ, ಅಡೆತಡೆ ಬಂದರೂ ಒಲಂಪಿಕ್ಸ್‌ನಲ್ಲಿ ಗೆದ್ದು ಬಂದರು. ನೀವೂ ಕೂಡಾ ಅದೇ ರೀತಿ ಕ್ರೀಡೆಯಲ್ಲಿ ಸಾಧನೆ ಮಾಡಬೇಕು” ಎಂದು ಹೆಣ್ಣುಮಕ್ಕಳಿಗೆ ಸಲಹೆ ನೀಡಿದರು.

ಶೆಟ್ಟಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಅಪ್ಪಾಜಿ ಕೆ ಮಾತನಾಡಿ, “ನಮ್ಮ ಪಂಚಾಯಿತಿಗೆ ಶುಭರಾಣಿ ಎಂಬ ಪಿಡಿಒ ಬಂದಿದ್ದಾರೆ. ಪ್ರಧಾನಮಂತ್ರಿಗಳು ಮನದಮಾತಿನಲ್ಲಿ ಇವರ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ. ಅಂದರೆ ಅವರ ಸಾಧನೆ ಏನೆಂಬುದನ್ನು ತಾವುಗಳು ಯೋಚನೆ ಮಾಡಬೇಕು. ಗ್ರಾಮ ಪಂಚಾಯಿತಿಯ ಸಮಗ್ರ ಏಳಿಗೆಗೆ ಮಾಡಿದ ಕೆಲಸವನ್ನು ಗುರುತಿಸಿ, ಇವರ ಹೆಸರನ್ನು ಮನದಮಾತಿನಲ್ಲಿ ಪ್ರಸ್ತಾಪ ಮಾಡಿದ್ದಾರೆ. ಇವರಿಗೆ ರಾಷ್ಟ್ರ ಪ್ರಶಸ್ತಿ ಕೂಡ ಬಂತು. ನೀವೂ ಕೂಡ ಪಿಡಿಒರಂತೆ ಸಾಧನೆ ಮಾಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಮುಖ್ಯ ಶಿಕ್ಷಕರಾದ ಮಂಚೇಗೌಡ, ಕೆ ಎಸ್ ಜಯಶಂಕರ್, ಶ್ರೀರಂಗಪಟ್ಟಣ ಸಮರ್ಪಣಾ ಟ್ರಸ್ಟ್(ರಿ) ಅಧ್ಯಕ್ಷ ಹರೀಶ್, ವಿಶ್ವಜ್ಞಾನಿ ಅಂಬೇಡ್ಕರ್ ಸಂಘದ ಅಧ್ಯಕ್ಷ ಮಾದೇಶ್ ಕೆ ಸಿ, ಸುಚಿತ್ರ, ಜೋಶಿ, ಪ್ರದೀಪ್, ಪ್ರಕಾಶ್, ಸ್ಮಿತಾ, ಪದ್ಮ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...