ಮಂಡ್ಯ | ಅಕ್ರಮ ಕಟ್ಟಡ ನಿರ್ಮಾಣ ಅಬಾಧಿತ; ನಗರಸಭೆ ವೈಫಲ್ಯ

Date:

ನಕ್ಷೆ ಉಲ್ಲಂಘಿಸಿ ಅಕ್ರಮವಾಗಿ ಕಟ್ಟಡಗಳನ್ನು ನಿರ್ಮಿಸುವ ಪ್ರವೃತ್ತಿ ಎಗ್ಗಿಲ್ಲದೆ ಸಾಗಿದೆ. ಸಾಮಾನ್ಯವಾಗಿ ಕಟ್ಟಡಗಳನ್ನು ನಿರ್ಮಿಸುವವರು ನಗರಸಭೆಯಿಂದ ಪರವಾನಗಿ ಪಡೆದು ಕಟ್ಟಡಗಳನ್ನು ನಿರ್ಮಿಸುತ್ತಾರಾದರೂ ಅನುಮೋದಿತ ನಕ್ಷೆಗೂ ನಿರ್ಮಾಣವಾಗುವ ಕಟ್ಟಡಕ್ಕು ಅಜಗಜಾಂತರ ವ್ಯತ್ಯಾಸವಿರುತ್ತದೆ.

ಹೌದು, ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನಿರ್ಮಾಣದ ಪರವಾನಗಿ ನೀಡಿದ ನಂತರ ನಗರಸಭೆಯ ಇಂಜಿನಿಯರುಗಳು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರೀಶೀಲಿಸಬೇಕು. ನಕ್ಷೆ ಉಲ್ಲಂಘನೆಯಾಗದಂತೆ ಎಚ್ಚರಿಸಬೇಕು. ನಗರಸಭೆಯ ಕರ ವಸೂಲಿಗಾರರು, ಕಂದಾಯ ಅಧಿಕಾರಿಗಳು, ಎಂಜಿನಿಯರುಗಳು ಈ ಬಗ್ಗೆ ನಿಗಾ ಇಟ್ಟಿರಬೇಕು. ಆದರೆ ನಗರಸಭೆ ಅಧಿಕಾರಿಗಳು ಪರವಾನಗಿ ಕೊಟ್ಟ ಮೇಲೆ ಅತ್ತ ತಲೆ ಹಾಕುವುದೇ ಇಲ್ಲ.

ನಕ್ಷೆ ಉಲ್ಲಂಘನೆ ಮಾತ್ರವಲ್ಲದೆ, ಕಿಟಕಿಗಳ ಸಜ್ಜಾವನ್ನು ರಸ್ತೆ ಕಡೆಗೆ ಹೆಚ್ಚುವರಿಯಾಗಿ ವಿಸ್ತರಿಸುವುದು. ಚರಂಡಿಯನ್ನು ಆಕ್ರಮಿಸಿ ಕಟ್ಟಡ ನಿರ್ಮಿಸುವುದು, ಸೆಟ್ ಬ್ಯಾಕ್ ಬಿಡದಿರುವುದು ಸಾಮಾನ್ಯ ಸಂಗತಿಯಾಗಿದೆ. ಕೆಲವೊಮ್ಮೆ ನಾಗರೀಕರು ಅಕ್ರಮ ನಿರ್ಮಾಣದ ವಿರುದ್ಧ ದನಿ ಎತ್ತಿದರೂ ಅಕ್ರಮ ಕಟ್ಟಡಗಳ ನಿರ್ಮಾತೃಗಳು ಆ ದನಿಯನ್ನು ಹತ್ತಿಕ್ಕುತ್ತಾರೆ. ಇದರ ಪರಿಣಾಮ ರಸ್ತೆಗಳಲ್ಲಿ ವಾಹನಗಳ ದಟ್ಟಣೆಯಾಗಿ ಜನಸಾಮಾನ್ಯರು ಬಡಾವಣೆಗಳಲ್ಲಿ ವಾಸಿಸಲು ಆಗದ ಪರಿಸ್ಥಿತಿ ಸೃಷ್ಟಿಯಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Mandya 3 1 edited

ಕಟ್ಟಡ ನಿರ್ಮಾಣದ ಮೂಲ ವಿನ್ಯಾಸದಲ್ಲಿ ಪಾರ್ಕಿಂಗ್ ಸ್ಥಳ ತೋರಿಸಿದ್ದರು ವಾಸ್ತವದಲ್ಲಿ ಅದು ಅನ್ಯ ಉದ್ದೇಶಕ್ಕೆ ಬಳಕೆಯಾಗುತ್ತದೆ. ನಾಗರೀಕರು ವಾಸಿಸುವ ಬಡಾವಣೆಗಳಲ್ಲಿ ವಾಣಿಜ್ಯ ಉದ್ದೇಶಕ್ಕೆ ಅನುಮತಿ ನೀಡುವಾಗ ಸಾರ್ವಜನಿಕ ಅಹವಾಲು ಆಲಿಸುವ ಪರಿಪಾಠ ಇಲ್ಲದರ ಪರಿಣಾಮ ನಾಗರೀಕ ಬಡಾವಣೆಗಳಲ್ಲಿ ನರ್ಸಿಂಗ್ ಹೋಂಗಳು, ವಾಣಿಜ್ಯ ಸಂಕೀರ್ಣಗಳು ಎಗ್ಗಿಲ್ಲದೆ ನಿರ್ಮಾಣಗೊಳ್ಳುತ್ತಿವೆ. ಇದರಿಂದಾಗಿ ಸಂಚಾರ ದಟ್ಟಣೆ, ಟ್ರಾಫಿಕ್ ಸಮಸ್ಯೆ ನಿತ್ಯ ಸಂತೆಯಾಗಿದೆ.

ನಗರಸಭೆ ಸದಸ್ಯರು ಇವುಗಳ ಕುರಿತು ದನಿ ಎತ್ತುವ ಉಮೇದು ಇದ್ದರು ಮತ ಕಳೆದುಕೊಳ್ಳುವ ಭೀತಿಯಲ್ಲಿ ಮೌನಕ್ಕೆ ಶರಣಾಗಿದ್ದಾರೆ. ದಶಕಗಳಿಂದ ಇಲ್ಲಿಯೇ ಬೇರು ಬಿಟ್ಟಿರುವ ಸಿಬ್ಬಂದಿ ಸ್ಥಳೀಯ ಅರಾಜಕತೆಗೆ ಒಗ್ಗಿಹೋಗಿದ್ದಾರೆ. ಕೆಲವೊಮ್ಮೆ ನಗರಸಭಾ ಸದಸ್ಯರೆ ಈ ಅಕ್ರಮ ನಿರ್ಮಾಣಗಳ ಪರ ವಕಾಲತ್ತು ವಹಿಸುವ ಉದಾಹರಣೆಗಳು ಇವೆ. ಸದ್ಯ ಮಂಡ್ಯ ನಗರಸಭೆಯಲ್ಲಿ ಸಿಬ್ಬಂದಿ ಕೊರತೆಯಿದ್ದು ಇರುವ ಏಕೈಕ ಇಂಜಿನಿಯರ್ 35 ವಾರ್ಡುಗಳನ್ಮು ನಿಭಾಯಿಸಬೇಕಿದೆ. ಅಕ್ರಮ ಕಟ್ಟಡಗಳ ನಕ್ಷೆ ಉಲ್ಲಂಘನೆಗೆ ಬ್ರೇಕ್ ಹಾಕದಿದ್ದರೆ ಮಂಡ್ಯ ನಗರ ಕೆಲವೆ ವರ್ಷಗಳಲ್ಲಿ ಸ್ಲಂ ಆಗಿ ಪರಿವರ್ತನೆಯಾಗುವುದರಲ್ಲಿ ಯಾವುದೇ ಆಶ್ಚರ್ಯವಿಲ್ಲ.

Mandya 4 1 edited

ಕಟ್ಟಡ ನಕ್ಷೆ ಉಲ್ಲಂಘನೆ ಬಗ್ಗೆ ಹೇಳಿಕೆ ಪಡೆಯಲು ಮಂಡ್ಯ ನಗರಸಭೆ ಆಯುಕ್ತ ಎಂ ಪಿ ಕೃಷ್ಣಕುಮಾರ್ ಅವರಿಗೆ ಕರೆ ಮಾಡಲಾಗಿ ಕರೆ ಸ್ವೀಕರಿಸಲಿಲ್ಲ. ನಗರಸಭೆ ಇಂಜಿನಿಯರ್ ರಾಜುಗೌಡ ಹೇಳಿಕೆ ನೀಡಲು ನಿರಾಕರಿಸಿದರು.

ಎಇಇ ರವಿಕುಮಾರ್ ಈದಿನ.ಕಾಮ್ ಜೊತೆ ಮಾತನಾಡಿ, ಅಕ್ರಮ ಕಟ್ಟಡ ನಿರ್ಮಾಣದ ಬಗ್ಗೆ ನಮಗೆ ಅರಿವಿದೆ. ಯಾರಾದರೂ ದೂರು ಕೊಟ್ಟಲ್ಲಿ ಮಾತ್ರ ಮೂರು ನೋಟೀಸ್ ನೀಡಿ ಕಾನೂನಾತ್ಮಕ ಕ್ರಮಕೈಗೊಳ್ಳುತ್ತೇವೆ. ಆದರೆ ಶೇ.99ರಷ್ಟು ಯಾರೊಬ್ಬರೂ ದೂರು ಕೊಡುವುದಿಲ್ಲ. ಅಕ್ರಮ ನಿರ್ಮಾಣ ನಮಗೆ ಕಂಡು ಬಂದಲ್ಲಿ ಎರಡು ಪಟ್ಟು ಕಂದಾಯ ವಸೂಲಿ ಮಾಡುತ್ತೇವೆ ಎಂದು ಹೇಳಿದರು.

Mandya 2 1 edited

ಇದನ್ನೂ ಓದಿ : ಈದಿನ ಸಂಪಾದಕೀಯ | ಮಳೆ ನಿರ್ವಹಣೆಗೆ ಬೇಕು 500 ವರ್ಷಗಳ ದೂರದೃಷ್ಟಿ

ಇನ್ನೂ ಮಂಡ್ಯ ನಗರಸಭೆಯ ಅಧ್ಯಕ್ಷರಾದ ನಾಗೇಶ್ ಮಾತನಾಡಿ, ಈ ವಿಚಾರವನ್ನು ಪರಿಶೀಲಿಸಿ ಅಧಿಕಾರಿಗಳ ಜೊತೆ ಮಾತನಾಡಿ ಅಗತ್ಯ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

ಒಟ್ಟಾರೆಯಾಗಿ, ನೂತನ ಅಧ್ಯಕ್ಷರು ನಗರಸಭೆಯ ಆಡಳಿತಕ್ಕೆ ಚುರುಕು ಮುಟ್ಟಿಸಿ ಅಕ್ರಮ ನಿರ್ಮಾಣಕ್ಕೆ ತಡೆಯೊಡ್ಡುವರೆ ಎಂಬುದನ್ನು ಕಾದು ನೋಡಬೇಕಿದೆ. ಮಂಡ್ಯ ನೂತನ ಶಾಸಕ ಗಣಿಗ ರವಿಕುಮಾರ್ ನಗರಸಭೆಗೆ ಅಗತ್ಯ ಸಿಬ್ಬಂದಿ ನಿಯೋಜಿಸಲು ಪ್ರಯತ್ನಿಸಿದರೆ ಮಂಡ್ಯ ನಗರವನ್ನು ಚಂದಗಾಣಿಸುವುದು ಕಷ್ಟವೇನಲ್ಲ. ನಗರದ ಅಭಿವೃದ್ದಿ ಕನಸು ಕಾಣುತ್ತಿರುವ ಶಾಸಕ ಗಣಿಗ ರವಿಕುಮಾರ್ ನಗರಸಭೆಯ ಆಡಳಿತ ವರ್ಗವನ್ನು ಹಿಡಿತಕ್ಕೆ ತಂದು ನಗರದ ಅಭಿವೃದ್ದಿಯನ್ನು ಸಾಧಿಸುವುದು ಈಗ ಆದ್ಯತೆಯ ವಿಷಯ ಆಗಬೇಕಿದೆ.

Untitled 24
ನಗರಕೆರೆ ಜಗದೀಶ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...