ಮಂಡ್ಯ | ಇಂಡುವಾಳು ಗ್ರಾಮ ಪಂ.ಯಲ್ಲಿ ಅಕ್ರಮ; ಇಬ್ಬರು ಪಿಡಿಒ ಸೇರಿ ನಾಲ್ವರ ಅಮಾನತು

Date:

ಮಂಡ್ಯ ಜಿಲ್ಲೆಯ ಇಂಡುವಾಳು ಗ್ರಾಮ ಪಂಚಾಯತಿಯಲ್ಲಿ1,281 ಕಡತ ನಾಪತ್ತೆ ಮತ್ತು 1,881 ಅಕ್ರಮ ಇ-ಖಾತೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪಿಡಿಒಗಳು ಸೇರಿ ನಾಲ್ವರು ಅಧಿಕಾರಿಗಳು ಅಮಾನತುಗೊಳಿಸಲಾಗಿದೆ. ನಾಲ್ವರನ್ನೂ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಅಮಾನತು ಮಾಡಿರುವುದಾಗಿ ಮಂಡ್ಯ ಜಿಲ್ಲಾ ಪಂಚಾಯತಿ ಸಿಇಓ ಕೆ.ಆ‌ರ್ ನಂದಿನಿ ತಿಳಿಸಿದ್ದಾರೆ.

ಈ ಹಿಂದೆ ಇಂಡುವಾಳು ಗ್ರಾಮ ಪಂಚಾಯತಿಯ ಪಿಡಿಒ ಆಗಿದ್ದ ಸಿದ್ಧರಾಜು, ಹಾಲಿ ಪಿಡಿಒ ದಯಾನಂದ, ಕಾರ್ಯದರ್ಶಿ ಮರಿಲಿಂಗಯ್ಯ ಹಾಗೂ ದ್ವಿತೀಯ ದರ್ಜೆ ಸಹಾಯಕಿ ರಾಣಿ – ಅಮಾನತುಗೊಂಡ ಅಧಿಕಾರಿಗಳು. ಈ ನಾಲ್ವರ ವಿರುದ್ಧ ತನಿಖೆ ನಡೆಸಲಾಇದ್ದು, ನಾಲ್ವರೂ ಇ-ಸ್ವತ್ತು ನಮೂನೆ 9/11ಎ ವಿತರಿಸುವಲ್ಲಿ ಕರ್ತವ್ಯಲೋಪ ಎಸಗಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.

ನಾಲ್ವರ ಅಮಾನತಿಗೂ ಮುನ್ನವೇ, ಈ ಹಿಂದೆ ಇಂಡುವಾಳು ಗ್ರಾಮ ಪಂಚಾಯತಿಯಲ್ಲಿ ಪಿಡಿಒಗಳಾಗಿ ಕೆಲಸ ಮಾಡಿದ್ದ ಯೋಗೇಶ್ ಮತ್ತು ವಿಶಾಲಮೂರ್ತಿ ಎಂಬುವರನ್ನೂ ಅಮಾನತು ಮಾಡಲಾಗಿತ್ತು. ಮತ್ತೊಬ್ಬ ಪಿಡಿಒ ಬಿ.ವಿ ಸೋಮು ಎಂಬವರು ನಿವೃತ್ತರಾಗಿದ್ದಾರೆ. ಈ ಎಲ್ಲರ ವಿರುದ್ಧವೂ ಇಲಾಖಾ ವಿಚಾರಣೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...