ಮಂಡ್ಯ | ಆತಂಕವಾದ ಸೋಲಿಸಿ, ಶಾಂತಿ, ಸೌಹಾರ್ದತೆ ಬೆಳೆಸಬೇಕಿದೆ: ಅಪರ ಜಿಲ್ಲಾಧಿಕಾರಿ ಹೆಚ್ ಎಲ್ ನಾಗರಾಜು

Date:

ದೇಶದಲ್ಲಿಂದು ನಮ್ಮನ್ನೆಲ್ಲ ಆತಂಕವಾದ ಬೆಂಬಿಡದೆ ಕಾಡುತ್ತಿದೆ. ಈ ಆತಂಕವಾದವನ್ನು ಸೋಲಿಸಿ, ಶಾಂತಿ, ಸೌಹಾರ್ದತೆಯನ್ನು ಬೆಳೆಸಬೇಕಿದೆ. ಆಗ ಮಾತ್ರ ದೇಶದಲ್ಲಿ ಐಕ್ಯತೆ ಸಾಧ್ಯ ಎಂದು ಮಂಡ್ಯ ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗರಾಜು ನುಡಿದರು.

ಅವರು ಕಲಾವಿದೆ ಮಂಜುಳ ಆಲದಹಳ್ಳಿ ಮುಂದಾಳತ್ವದ ಅರುಣೋದಯ ಕಲಾತಂಡ, ಹುಲುಗಪ್ಪ ಕಟ್ಟಿಮನಿಯವರ ಸಂಕಲ್ಪ ಮೈಸೂರು ತಂಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ‘ಜತೆಗಿರುವನು ಚಂದಿರ’ ಸಾಮಾಜಿಕ ನಾಟಕ ಪ್ರದರ್ಶನವು ಮಂಡ್ಯದ ಪಿಇಎಸ್ ಕಾಲೇಜಿನ ಸ್ವಾಮಿ ವಿವೇಕಾನಂದ ರಂಗಮಂದಿರದಲ್ಲಿ ಜರುಗಿತು. ನಾಟಕ ಪ್ರದರ್ಶನಕ್ಕೆ ತಬಲ ಬಾರಿಸುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, “ಸರ್ವರೂ ಸಮನ್ವಯತೆಯಿಂದ ಬದುಕಲು ಸಾಧ್ಯ. ಸರ್ವ ಜನಾಂಗದ ಮನಸ್ಸುಗಳನ್ನು ಗಟ್ಟಿಗೊಳಿಸಿದರೆ ಮಾತ್ರ ದೇಶ ಏನಾದರೂ ಸಾಧಿಸಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಮತ್ತೊಮ್ಮೆ ಪ್ರಚೋದನಾಕಾರಿಗಳೇ ಪ್ರಜ್ವಲಿಸುತ್ತವೆ ದೇಶದಲ್ಲಿ ಅಶಾಂತಿ ಮೂಡುತ್ತದೆ ಎಂದು ಅಭಿಪ್ರಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 08 13 at 9.56.36 AM 1

“ಅಶಾಂತಿ ಮೂಡಿದಾಗ ವ್ಯಕ್ತಿಗಳಾಗಲಿ ಕುಟುಂಬಗಳಾಗಲಿ, ಸಮಾಜವಾಗಲಿ ನೆಮ್ಮದಿಯಿಂದ ಬದುಕಲಿಕ್ಕೆ ಸಾಧ್ಯವಿಲ್ಲ. ಆತಂಕಗಳು ಹೆಚ್ಚಾಗುತ್ತಾ ಹೋಗುತ್ತವೆ. ಆತಂಕವಾದಿಗಳ ಕೈಗೆ ನಮ್ಮ ಅತಂಕ ಸಿಗುತ್ತದೆ. ಆಗ ಅವರು ಮತ್ತಷ್ಟು ಪ್ರಬಲರಾಗುತ್ತಾರೆ. ಸಮಾಜವನ್ನು ಸರ್ವನಾಶ ಮಾಡುತ್ತಾರೆ. ಮನುಕುಲದ ನಾಶವಾಗುವ ಆತಂಕಗಳು ಹೆಚ್ಚಾಗುತ್ತಾ ಹೋಗುತ್ತವೆ. ಇಂತಹ ಸನ್ನಿವೇಶಗಳ ನಡುವೆ ಸರ್ವಜನಾಂಗದ ಪ್ರೀತಿ, ಸಹಬಾಳ್ವೆ, ನೆಮ್ಮದಿಯ ಸಂದೇಶವನ್ನು ಸಾರುವ ಜತೆಗಿರುವನು ಚಂದಿರ ನಾಟಕದಂತ ಪ್ರದರ್ಶನಗಳು ಹೆಚ್ಚೆಚ್ಚು ನಡೆಯಲಿ, ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಲಿ” ಎಂದರು.

ರೈತನಾಯಕಿ ಸುನಂದ ಜಯರಾಂ ಮಾತನಾಡಿ, “ದೇಶದಲ್ಲಿ ಐಕ್ಯತೆಯನ್ನು ಸಾಧಿಸಲು ಧರ್ಮ, ಜಾತಿ, ಮತ ಬಿಟ್ಟು ಒಗ್ಗಟ್ಟಿನಿಂದ ಹೋರಾಡುವ ಮನೋಭಾವ ಬೆಳೆಸಿಕೊಳ್ಳಬೇಕು” ಎಂದು ಕರೆ ನೀಡಿದರು.

ರಂಗನಿರ್ದೇಶಕಿ ಕೆ.ಆರ್ .ಸುಮತಿ ಮಾತನಾಡಿ, ತಾಯಿಗೆ ಅತ್ಯುತ್ತಮ ಸ್ಥಾನಮಾನವನ್ನು ನೀಡುತ್ತೇವೆ. ಆದರೆ ಈ ವ್ಯವಸ್ಥೆ ಭ್ರೂಣದಲ್ಲೇ ಹೆಣ್ಣು ಮಗುವಿನ ವಿರುದ್ದ ನಿಲ್ಲುವಷ್ಟು ಕ್ರೂರವಾಗಿದೆ. ಮಹಿಳೆಯರ ಸಮಾನತೆಯ ಬಗ್ಗೆ ಮಾತನಾಡುತ್ತೇವೆ. ಆದರೆ ನಮ್ಮ ನುಡಿಯನ್ನು ನಡೆಯ ಜೊತೆ ಸಮನ್ವಯ ಮಾಡುವುದನ್ನು ಮರೆತು ಬಿಡುತ್ತೇವೆ. ನಮ್ಮ ನಡೆ-ನುಡಿಯ ಜೊತೆ ಸಮನ್ವಯತೆ ಇರಬೇಕು” ಎಂದರು.

ಹುಲುಗಪ್ಪ ಕಟ್ಟಿಮನಿ ಅವರ ರಂಗವಿನ್ಯಾಸ, ನಿರ್ದೇಶನದಲ್ಲಿ ಮೂಡಿಬಂದ `ಜತೆಗಿರುವನು ಚಂದಿರ’ ನಾಟಕ ಪ್ರೇಕ್ಷಕರ ಮನಗೆದ್ದಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರುಣೋದಯ ಕಲಾತಂಡದ ಗೌರವಾಧ್ಯಕ್ಷ ಜೆ ಡಿ ಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ಅರುಣೋದಯ ಕಲಾತಂಡದ ಅಧ್ಯಕ್ಷೆ ಆಲದಹಳ್ಳಿ ಮಂಜುಳಾ, ಪ್ರಗತಿಪರ ಚಿಂತಕ ಬಿ ಟಿ ವಿಶ್ವನಾಥ್, ಸಿಐಟಿಯುನ ಸಿ.ಕುಮಾರಿ, ರೈತಸಂಘದ ಲತಾಶಂಕರ್, ನಿವೃತ್ತ ಶಿಕ್ಷಕಿ ರತ್ನಜೈನ್ ಉಪಸ್ಥಿತರಿದ್ದರು. ಕ್ರಾಂತಿಗೀತೆಗಾಯಕ, ಜನಕಲಾರಂಗದ ಅಧ್ಯಕ್ಷ ಹುರುಗಲವಾಡಿ ರಾಮಯ್ಯ ನಿರೂಪಿಸಿದರು.

WhatsApp Image 2024 08 13 at 9.56.37 AM 2
WhatsApp Image 2024 08 13 at 9.56.37 AM 1
WhatsApp Image 2024 08 13 at 9.56.37 AM
WhatsApp Image 2024 08 13 at 9.56.36 AM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...