ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

Date:

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ ಕೊಲೆ ಪ್ರಕರಣಕ್ಕೆ ಸಂಭಂದಿಸದಂತೆ ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಪ್ರಯತ್ನಪಟ್ಟಾಗ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.

ಆಗಸ್ಟ್. 17 ರಂದು ಬೆಳಗ್ಗಿನ ಜಾವ 3 ಗಂಟೆ ಸಮಯದಲ್ಲಿ ಕಿರುಗಾವಲು ಗ್ರಾಮದ ಮಹಾಲಕ್ಷ್ಮಿ ಜ್ಯುವಲರಿ ಶಾಪ್ ನ ಬಾಗಿಲನ್ನು ಗ್ಯಾಸ್ ಕಟರ್ ಬಳಸಿ ಶೆಟರ್ ಮುರಿದು 110 ಗ್ರಾಂ ಚಿನ್ನ, 2 ಕೆಜಿ ಬೆಳ್ಳಿ ಕಳ್ಳತನ ಮಾಡಿದ್ದ ಐವರ ತಂಡ. ಚಿನ್ನದಂಗಡಿ ಕಳ್ಳತನ ಮಾಡುವುದನ್ನು ಕಂಡ ಹೋಟೆಲ್ ಮಾಲೀಕ ಮಾದಪ್ಪರನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಪರಾರಿಯಾಗಿದ್ದರು.

ಖಚಿತ ಮಾಹಿತಿ ಮೇರೆಗೆ ಮಂಡ್ಯ ಜಿಲ್ಲೆ, ಮಳವಳ್ಳಿ ತಾಲ್ಲೂಕು ಭೀಮನಹಳ್ಳಿ ಗ್ರಾಮದಲ್ಲಿದ್ದ ಆರೋಪಿಗಳ ಬಂಧಿಸಲು ಪೊಲೀಸರು ದಾಳಿ ನಡೆಸಿದಾಗ ಆರೋಪಿ ಕಿರಣ್ ಎಂಬಾತ ಪೊಲೀಸ್ ಪೇದೆ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಇದೇ ವೇಳೆ ಸಿಪಿಐ ಶ್ರೀಧರ್ ಆರೋಪಿ ಕಾಲಿಗೆ ಗುಂಡು ಹಾರಿಸಿ ಪೇದೆ ನೆರವಿಗೆ ಧಾವಿಸಿದ್ದಾರೆಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಚಗೆರೆ ಕಿರಣ್ (24), ಕೊತ್ತತ್ತಿ ಗ್ರಾಮದ ಆನಂದ್, ಶರತ್, ಶ್ರೀನಿವಾಸ, ಕೃಷ್ಣಚಾರಿ ಬಂಧಿತ ಆರೋಪಿಗಳಾಗಿದ್ದಾರೆ. ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಶೇಷ ಸುದ್ದಿ ಓದಿದ್ದೀರಾ? ಮೈಸೂರು | ಅರಸು ಮರೆತ ಸರ್ಕಾರ; ಬೆಟ್ಟದತುಂಗ, ಕಲ್ಲಹಳ್ಳಿ ಗ್ರಾಮಗಳ ದತ್ತು ಪಡೆದಿದ್ದ ಸಿಎಂ ಸಿದ್ದರಾಮಯ್ಯ

ಮಂಡ್ಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದ ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಗಾಯಗೊಂಡಿರುವ ಸಿಬ್ಬಂದಿ ಹಾಗೂ ಆರೋಪಿ ಆರೋಗ್ಯ ವಿಚಾರಿಸಿ, ಘಟನೆ ಬಗ್ಗೆ ಮಾಹಿತಿ ಪಡೆದು, ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ಸಲಹೆ, ಸೂಚನೆ ನೀಡಿರುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...