ಮಂಡ್ಯ | ಕೆಆರ್‌ಎಸ್ ನೀರಿನ ಮಟ್ಟ‌ ಕುಸಿತ; 74 ಅಡಿಗೆ ಇಳಿದರೆ ಬೆಳೆಗೆ ನೀರಿಲ್ಲ

Date:

ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಕೆಆರ್‌ಎಸ್‌ ಅಣೆಕಟ್ಟೆಯಲ್ಲಿನ ನೀರಿನ ಮಟ್ಟ ಕಡಿಮೆಯಾಗಿರುವುದು ಬೆಂಗಳೂರು, ಮಂಡ್ಯ, ರಾಮನಗರ ಮತ್ತು ಮೈಸೂರು ಭಾಗದ ರೈತರಲ್ಲಿ ಆತಂಕ ಸೃಷ್ಟಿಸಿದೆ.

“ಅಣೆಕಟ್ಟಿನ ನೀರಿನ ಮಟ್ಟವು 74 ಅಡಿಗೆ ಬಂದಿಳಿದರೆ, ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಾತ್ರವೇ ಬಳಸಲಾಗುವುದು” ಎಂದು ಅಣೆಕಟ್ಟಿನ ಅಧಿಕಾರಿಗಳು ಮಾಹಿತಿ ನೀಡಿದರು.

“ಜೂನ್ ಒಳಗೆ ಅಣೆಕಟ್ಟೆಗೆ ಒಳಹರಿವು ಹೆಚ್ಚಾಗದಿದ್ದರೆ ಕಬ್ಬು ಬೆಳೆಗಾರರು ಸಮಸ್ಯೆ ಎದುರಿಸಬೇಕಾಗುತ್ತದೆ” ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕೆಆರ್‌ಎಸ್‌ ಡ್ಯಾಮ್
ಕೆಆರ್‌ಎಸ್‌ ಡ್ಯಾಮ್‌ನ ನೀರಿನ ಮಟ್ಟ ಇಳಿಕೆ

“ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಗುರುವಾರ 85.84 ಅಡಿ ಇತ್ತು. ವಿಶ್ವೇಶ್ವರಯ್ಯ ನಾಲೆಯಲ್ಲಿ 1,252 ಕ್ಯೂಸೆಕ್ ನೀರು ಸೇರಿದಂತೆ ಒಳಹರಿವು 629 ಕ್ಯೂಸೆಕ್, ಹೊರಹರಿವು 2,336 ಕ್ಯೂಸೆಕ್ ಇತ್ತು. ನೀರಿನ ಮಟ್ಟ 74 ಅಡಿ ತಲುಪಿದರೆ ಮಾತ್ರ ಕುಡಿಯುವ ಉದ್ದೇಶಕ್ಕಾಗಿ ನೀರನ್ನು ಸಂರಕ್ಷಿಸಲಾಗುವುದು” ಎಂದು ಕೆಆರ್‌ಎಸ್ ಅಣೆಕಟ್ಟಿನ ಅಧೀಕ್ಷಕ ಆನಂದ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಕಾಲಿಕ ಮಳೆಗೆ ಈರುಳ್ಳಿ ಬೆಳೆ ಹಾನಿ; ಕಂಗಾಲಾದ ರೈತರು

“ಮಾರ್ಚ್ 1 ರಿಂದ ಮೇ 17ರ ನಡುವೆ ಕಾವೇರಿ ನದಿಯ ಮುಖ್ಯ ಜಲಾನಯನ ಪ್ರದೇಶವಾದ ಕೊಡಗಿನಲ್ಲಿ ಶೇ.45ರಷ್ಟು ಮಳೆ ಕೊರತೆಯಾಗಿದೆ. ಕಾವೇರಿಯ ಮುಖ್ಯ ಉಪನದಿ ಹೇಮಾವತಿ ಉಗಮ ಸ್ಥಾನ ಚಿಕ್ಕಮಗಳೂರಿನಲ್ಲಿ ಶೇ.20ರಷ್ಟು ಮಳೆ ಕೊರತೆಯಾಗಿದೆ” ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರದ (ಕೆಎಸ್ಎನ್‌ಡಿಎಂಸಿ) ಅಂಕಿಅಂಶಗಳ ಪ್ರಕಾರ ತಿಳಿದುಬಂದಿದೆ.

“ನೀರಿನ ಮಟ್ಟ 74 ಅಡಿಗಿಂತ ಕಡಿಮೆಯಾದರೆ ಕೃಷಿಗೆ ನೀರು ಸಿಗುವುದಿಲ್ಲ ಎಂಬುದು ರೈತರಿಗೆ ತಿಳಿದಿದೆ. ಮುಂದಿನ ಕೆಲವು ದಿನಗಳಲ್ಲಿ ಕೊಯ್ಲು ಪ್ರಾರಂಭವಾಗುವ ಸಾಧ್ಯತೆ ಇರುವುದರಿಂದ ಭತ್ತಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಜೂನ್‌ನಲ್ಲಿ ನೀರು ಬಿಡದಿದ್ದರೆ ಕಬ್ಬಿನ ಬೆಳೆಗೆ ತೊಂದರೆಯಾಗುತ್ತದೆ. ಜೂನ್‌ನಲ್ಲಿ ಅಣೆಕಟ್ಟಿನ ನೀರು ನಿರ್ಣಾಯಕವಾಗಿದೆ” ಎಂದು ಕರ್ನಾಟಕ ರಾಜ್ಯ ರೈತ ಸಂಘದ ಮಂಡ್ಯ ಜಿಲ್ಲಾ ಘಟಕದ ಅಧ್ಯಕ್ಷ ಎ.ಎಲ್.ಕೆಂಪೂಗೌಡ ಹೇಳಿದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...