ಮಂಡ್ಯ | ನಗರಕೆರೆಯಲ್ಲಿ ಚಿರತೆ ಪ್ರತ್ಯಕ್ಷ; ಆತಂಕಗೊಂಡ ಕೃಷಿಕರು

Date:

ನಗರಕೆರೆ ಗ್ರಾಮದ ತೊರೆ ಮಾಲದಲ್ಲಿನ ಪ್ರದೇಶದಲ್ಲಿ ಚಿರತೆಯೊಂದು ತನ್ನ ಮರಿಯೊಂದಿಗಿರುವುದು ಕಂಡುಬಂದಿದೆ. ಚಿರತೆ ಪ್ರತ್ಯಕ್ಷವಾಗಿರುವುದನ್ನು ಕಂಡ ರೈತರು ಆತಂಕಗೊಂಡಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ನಗರಕೆರೆ ಗ್ರಾಮದಲ್ಲಿ ಕಳೆದ ಹದಿನೈದು ದಿನಗಳಿಂದ ಚಿರತೆ ಇರುವಿಕೆಯ ಸುದ್ದಿ ಹರಡಿತ್ತು. ಆದರೂ ಯಾವತ್ತಿಗೂ ಚಿರತೆ ಮುಖಾಮುಖಿಯಾಗಿರಲಿಲ್ಲ. ನಿನ್ನೆ ಮಧ್ಯಾಹ್ನ ರೈತ ಎನ್ ಎಲ್ ಬಲರಾಮು ಅವರ ಪುತ್ರ ಚಿರಾಗ್ ಅವರು ತೋಟದ ಕಡೆ ಹೋದಾಗ, ಚಿರತೆ ತನ್ನ ಮರಿಯೊಂದಿಗೆ ಇರುವುದನ್ನು ಅತಿ ಸನಿಹದಲ್ಲೇ ಕಂಡಿದ್ದಾರೆ

ಇತರೆ ರೈತರನ್ನು ಕರೆದು ಚಿರತೆ ಇರುವುದನ್ನ ತೋರಿಸಿದ್ದು, ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ. ಜತೆಗೆ ಮುಂಜಾಗೃತಾ ಕ್ರಮವಾಗಿ ಚಿರತೆ ಇರುವ ಕುರಿತು ಆರಣ್ಯ ಇಲಾಖೆ ಅಧಿಕಾರಿ ಗವಿಯಪ್ಪ ಅವರಿಗೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತರಿಂದ ಸುದ್ದಿ ತಿಳಿದ ಗವಿಯಪ್ಪ ಮಂಗಳವಾರ ಬೆಳಿಗ್ಗೆಯೇ ತಮ್ಮ ಸಿಬ್ಬಂದಿಯನ್ನು ನಗರಕೆರೆಯಲ್ಲಿನ ಚಿರತೆ ಕಂಡ ಸ್ಥಳಕ್ಕೆ ಕಳುಹಿಸಿಕೊಡುವುದಾಗಿ ಹೇಳಿದ್ದು, ರೈತರು ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಿದ್ದಾರೆ.

ಈ ಪ್ರದೇಶದಲ್ಲಿ ಕಾಡು ಹಂದಿ ಮುಳ್ಳು ಹಂದಿಗಳ ಹಾವಳಿ ವಿಪರೀತವಾಗಿದ್ದು, ಆಹಾರ ಹರಸಿ ಬಂದ ಚಿರತೆ
ಇಲ್ಲೇ ಬೀಡು ಬಿಟ್ಟಿರುವುದಾಗಿ ಇಲ್ಲಿನ ರೈತ ಮುಖಂಡರಾದ ಎನ್ ಎಸ್ ಪ್ರಸನ್ನಕುಮಾರ್, ಮಲ್ಲಿಕಾರ್ಜುನ ಧನಂಜಯ್ಯ ಕುಮಾರ್ ಸೇರಿದಂತೆ ಮತ್ತಿತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿದ್ದೀರಾ? ಶ್ರೀನಿವಾಸಪುರ ಮಾವಿನ ಮಾರುಕಟ್ಟೆ ಮತ್ತೆ ಸಜ್ಜು; ಮೇ 15ರಿಂದ ಆರಂಭ

ಚಿರತೆ ಇಲ್ಲಿ ನೆಲೆಸಿರುವುದರಿಂದ ಈ ಭಾಗದ ಕೃಷಿಕರು, ಕುರಿಗಾಹಿಗಳ ಸುರಕ್ಷತೆಗೆ ಧಕ್ಕೆ ಬಂದಿದೆ. ಈ ಮೊದಲು ಈ ಪ್ರದೇಶದಲ್ಲಿ ಜಮೀನಿನ ಕಾವಲಿಗೆ ಕಟ್ಟಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿತ್ತು. ಆಗ ಅರಣ್ಯ ಇಲಾಖೆಯವರು ಬೋನ್ ಇರಿಸಿ ಕಾರ್ಯಾಚರಣೆ ಮಾಡಿದ್ದರು. ಚಿರತೆ ಸೆರೆ ಸಿಕ್ಕಿರಲಿಲ್ಲ. ಇದೀಗ ಅರಣ್ಯ ಇಲಾಖೆ ಕಾರ್ಯಚರಣೆ ಯಶಸ್ವಿಯಾಗಿ ಈ ಭಾಗದ ರೈತರ ಆತಂಕ‌ ದೂರಾಗುವುದೇ ಕಾಯ್ದು ನೋಡಬೇಕು ಎನ್ನುತ್ತಿದ್ದಾರೆ ನಗೆಕೆರೆ ಗ್ರಾಮಸ್ಥರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...