ಮಂಡ್ಯ | ಅತಿಥಿ ಶಿಕ್ಷಕರಿಂದ ಪತ್ರ ಚಳವಳಿ; ಅಂಚೆ ಮೂಲಕ ಸಿಎಂಗೆ ಪತ್ರ

Date:

ಅತಿಥಿ ಶಿಕ್ಷಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಅತಿಥಿ ಶಿಕ್ಷಕರ ಸಂಘದಿಂದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಅಂಚೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಅಂಚೆ ಕಚೇರಿಯಲ್ಲಿ ಅಂಚೆ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಪತ್ರಗಳನ್ನು ಕಳುಹಿಸುತ್ತ ಪತ್ರಚಳವಳಿ ನಡೆಸಿದರು. ಇದೇ ವೇಳೆ ತಾಲೂಕು ಅತಿಥಿ ಶಿಕ್ಷಕರ ಸಂಘದ ಅಧ್ಯಕ್ಷ ಬಿ ಎಸ್ ಮಹೇಶ್ ಕುಮಾರ್ ಮಾತನಾಡಿ, “ಈ ಶೈಕ್ಷಣಿಕ ವರ್ಷ ಆರಂಭವಾಗಿ ನಾಲ್ಕು ತಿಂಗಳಾಗುತ್ತಿದೆ. ಆದರೆ ಈವರೆಗೂ ಗೌರವ ಧನ ಬಿಡುಗಡೆ ಮಾಡಿಲ್ಲ. ಇದರಿಂದ ಅತಿಥಿ ಶಿಕ್ಷಕರ ಜೀವನ ತುಂಬಾ ಕಷ್ಟಕರವಾಗಿದೆ. ಗೌರವಧನ ಹೆಚ್ಚಿಸಲು ಆರ್ಥಿಕ ಇಲಾಖೆಗೆ ಕಡತವನ್ನು ಕಳುಹಿಸಲಾಗಿದೆ. ಆದರೆ ಈವರೆಗೂ ಗೌರವಧನ ಹೆಚ್ಚು ಮಾಡಲಿಲ್ಲ, ನೀಡಬೇಕಾಗಿದ್ದ ಹಣವನ್ನೂ ನೀಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಇಂದಿನ ಕಾಂಗ್ರೆಸ್ ಸರ್ಕಾರವು ಚುನಾವಣಾ ಪೂರ್ವದಲ್ಲಿ ತನ್ನ ಪ್ರಣಾಳಿಕೆಯಲ್ಲಿ ಅತಿಥಿ ಶಿಕ್ಷಕರಿಗೆ ನ್ಯಾಯ ದೊರಕಿಸಿಕೊಡುವುದಾಗಿ ಭರವಸೆ ನೀಡಿತ್ತು. ಆದರೆ ಈಗ ಸರ್ಕಾರ ನಡೆಸುತ್ತಿದ್ದರೂ ಸಹ ನುಡಿದಂತೆ ನಡೆದಿಲ್ಲ. ಈ ಎಲ್ಲ ಸಾಧಕ ಬಾಧಕಗಳನ್ನು ಗಮನಿಸಿ ರಾಜ್ಯದ ಸಮಸ್ತ ಅತಿಥಿ ಶಿಕ್ಷಕರಿಗೆ ನ್ಯಾಯ ದೊರಕಿಸಿ ಕೊಡಬೇಕು” ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಕ್ಕೊತ್ತಾಯಗಳು ಹಾಗೂ ಬೇಡಿಕೆಗಳು

ಸುಪ್ರೀಂ ಕೋರ್ಟ್‌ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಸೇವಾ ಭದ್ರತೆ ನೀಡಬೇಕು. ಕನಿಷ್ಠ ವೇತನ ₹25,000 ನೀಡಬೇಕು. ವರ್ಷಕ್ಕೆ ಶೇ.5ರಷ್ಟು ಕೃಪಾಂಕ ನೀಡಿ ಸೇವಾ ದೃಢೀಕರಣ ಪತ್ರ ನೀಡಬೇಕು‌ ಎಂದು ಆಗ್ರೆಹಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಚಿಟ್ ಫಂಡ್ ಕಂಪೆನಿ ವಂಚನೆ; ಸಂತ್ರಸ್ತ ಠೇವಣಿದಾರರ ಹೋರಾಟಕ್ಕೆ ಡಿಎಸ್ಎಸ್ ಬೆಂಬಲ

ಈ ಸಂಧರ್ಭದಲ್ಲಿ ಉಪಾಧ್ಯಕ್ಷ ಚುಂಚಣ್ಣ, ಪ್ರಧಾನ ಕಾರ್ಯದರ್ಶಿಗಳಾದ ಶಿವಕುಮಾರ್, ಕೆಂಪರಾಜು, ಸಹಕಾರ್ಯದರ್ಶಿಗಳಾದ ವಿಷಕಂಠ ಮೂರ್ತಿ‌, ಖಜಾಂಚಿ ಪುಟ್ಟರಾಜು, ನಂಜುಂಡಸ್ವಾಮಿ, ಹನುಮಯ್ಯ, ಮಹದೇವ ಸ್ವಾಮಿ, ಮಹದೇವು ಮಹಿಳಾ ಶಿಕ್ಷಕಿಯರಾದ ಸುಮಿತ್ರ, ಸುಮ, ನಳಿನಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...