ಮಂಡ್ಯ | ಅಂಬೇಡ್ಕರ್ ಪುತ್ಥಳಿ ಎದುರು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರೇಮಿಗಳು

Date:

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಯುವ ಪ್ರೇಮಿಗಳು, ಪ್ರಜ್ಞಾವಂತರ ವೇದಿಕೆ, ದಸಂಸ, ಬೌದ್ಧ ಮಹಾ ಸಭಾ ಮುಖಂಡರ ನೆರವಿನೊಂದಿಗೆ ಶ್ರೀರಂಗಪಟ್ಟಣದ ಅಂಬೇಡ್ಕರ್ ಪುತ್ಥಳಿ ಎದುರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಸಕಲೇಶಪುರ ತಾಲೂಕಿನ ಯುವ ಪ್ರೇಮಿಗಳು ಅಂತರ್ಜಾತಿ ವಿವಾಹವಾಗಿದ್ದು, ಪೋಷಕರ ಭಯಕ್ಕೆ ಊರು ಬಿಟ್ಟು ಬಂದಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣಕ್ಕೆ ಬಂದು ಸೇರಿದ್ದಾರೆ.

ಸಕಲೇಶಪುರ ಪಟ್ಟಣದ ಕುಶಾಲ್‌ ನಗರ, ಟಿಎಂಸಿ ಕಾಲೊನಿಯ ಯುವಕ ಪ್ರಜ್ವಲ್‌ ದಲಿತ ಸಮುದಾಯದವರಾಗಿದ್ದು, ಸೇರಿದ್ದು, ತಾಲೂಕಿನ ಮಾಗಡಿ ಹಲಸುಲಿಗೆ ಗ್ರಾಮದ ಯುವತಿ ಸಂಜನಾ ಒಕ್ಕಲಿಗ ಸಮುದಾಯದವರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ರಿಜಿಸ್ಟರ್‌ ಮ್ಯಾರೇಜ್

ಯುವ ಪ್ರೇಮಿಗಳು ಪರಸ್ಪರ ಒಬ್ಬರನ್ನೊಬ್ಬರು ಪ್ರೀತಿಸಿದ್ದರು. ಆದರೆ, ಮದುವೆಯಾಗಲು ತಮ್ಮ ಊರಿನಲ್ಲಿ ಜಾತಿ ಅಡ್ಡ ಬರುವ ಭಯದಿಂದ ಊರು ಬಿಟ್ಟು ಬಂದು ಕೆಅರ್‌ಎಸ್ ಬಳಿಯ ಅಕ್ಕನ ಮನೆಯಲ್ಲಿದ್ದರು. ಸಂಘಟನೆಗಳ ಸಹಾಯ ಪಡೆದು, ವಯಸ್ಕರರಾಗಿರುವ ಹಿನ್ನಲೆಯಲ್ಲಿ ಸ್ಥಳೀಯ ಮುಖಂಡರೆಲ್ಲರೂ ಸೇರಿ ಇಬ್ಬರಿಗೂ ಮದುವೆ ಮಾಡಿಸಿರುತ್ತಾರೆ. ಕಾನೂನು ಬದ್ದವಾಗಿ ವಿವಾಹ ನೋಂದಣಿಯೂ ಆಗಿದೆ.

ನವ ವಿವಾಹಿತ ಪ್ರಜ್ವಲ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ನಾನು ದಲಿತ ಸಮುದಾಯದವನಾಗಿದ್ದು, ಹುಡುಗಿ ಒಕ್ಕಲಿಗ ಸಮುದಾಯದವರು. ಹಾಗಾಗಿ ಅವರ ಮನೆಯವರು ಸಕಲೇಶಪುರ ಠಾಣೆಯಲ್ಲಿ ದೂರು ನೀಡಿದ್ದಾರೆ. ನಮಗೆ ಪ್ರಾಣ ಭಯವಿದೆ. ನಮಗೆ ರಕ್ಷಣೆ ಬೇಕು. ನಾವು ಮರಳಿ ಸಕಲೇಶಪುರಕ್ಕೆ ತೆರಳಿ ಜೀವನ ನಡೆಸುತ್ತೇವೆ. ಯಾರಿಂದಲೂ ನಮಗೆ ತೊಂದರೆ ಆಗದಂತೆ ರಕ್ಷಣೆ ಕೊಡಿಸಿ” ಎಂದು ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗದಗ | ನೂಲಿ‌ ಚಂದಯ್ಯ ಜಯಂತಿ ಆಚರಣೆ

ಬೌದ್ಧ ಬಿಕ್ಕು ಬಂತಾಜೆ ಅವರ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತದಲ್ಲಿ ನಡೆದ ಸರಳ ವಿವಾಹದಲ್ಲಿ ದಸಂಸ
ನಂಜುಂಡ ಮೌರ್ಯ, ವಕೀಲ ಸಿ ಎಸ್ ವೆಂಕಟೇಶ್, ಬೌದ್ಧ ಮಹಾಸಭಾ ರಂಗಪ್ಪ, ಬಾಬು ಜಗಜೀವನ್ ರಾಂ
ಸಂಘಟನೆ ಅದ್ಯಕ್ಷ ಸಿದ್ದರಾಜು, ಜನವಾದಿ ಮಹಿಳಾ ಸಂಘಟನೆ ತಾಲೂಕು ಅಧ್ಯಕ್ಷೆ ಜಯಮ್ಮ ಸೇರಿದಂತೆ ಹಲವು ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...