ಮಂಡ್ಯ | ನಿಯಮ ಪಾಲಿಸದೆ ಖಾಸಗಿ ವ್ಯಕ್ತಿಗೆ ಸರಕಾರಿ ಭೂಮಿ; ಮದ್ದೂರು ನಾಗರಿಕರಿಂದ ಪ್ರತಿಭಟನೆ

Date:

ಗ್ರಾಮದಲ್ಲಿರುವ ಸರಕಾರಿ ಜಾಗವನ್ನು ನಿಯಮಬಾಹಿರವಾಗಿ ಖಾತೆ ಮಾಡಿಕೊಟ್ಟಿರುವುದನ್ನು ರದ್ದುಗೊಳಿಸಲು ಒತ್ತಾಯಿಸಿ ಮಂಡ್ಯ ಜಿಲ್ಲೆಯ ಮದ್ದೂರಿನ ನಾಗರಿಕರು ತಹಶೀಲ್ದಾರಿಗೆ ಹಾಗೂ ಪುರಸಭೆಯ ಮುಖ್ಯಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.

ಮದ್ದೂರು ಪಟ್ಟಣದ ಹಳೆಯ ಬಸ್ ನಿಲ್ದಾಣದ ಪಕ್ಕದಲ್ಲಿ ಇರುವ ಸರ್ವೆ ನಂಬರ್ 864/5 ಮತ್ತು 6ನೇ ಜಮೀನಿನ ನಡುವೆ 5 ಗುಂಟೆ ಸರಕಾರಿ ಜಾಗವನ್ನು ಖಾಸಗಿ ವ್ಯಕ್ತಿ ಎಮ್.ಟಿ.ಮಂಜುನಾಥ್ ಎಂಬುವರಿಗೆ, ಮದ್ದೂರು ಪುರಸಭೆ ಮುಖ್ಯಾಧಿಕಾರಿಗಳು ನಿಯಮ ಬಾಹಿರವಾಗಿ ಖಾತೆ ಮಾಡಿರುವುದನ್ನು ರದ್ದುಪಡಿಸುವಂತೆ ಆಗ್ರಹಿಸಿದರು.

ಗ್ರಾಮ ಠಾಣಾ ಜಾಗವನ್ನು ವ್ಯಕ್ತಿಯೊಬ್ಬರಿಗೆ ಮಂಜೂರು ಮಾಡಿ, ಇ-ಖಾತೆ ಮಾಡುವ ಮುನ್ನ ನಿಯಮಗಳನ್ನು ಪಾಲಿಸಿಲ್ಲ. ಪುರಸಭೆಯ ಸಾಮಾನ್ಯ ಸಭೆಯಲ್ಲಿ ಖಾತೆ ಮಾಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿಲ್ಲ. ಆಡಳಿತಾಧಿಕಾರಿ ಹಾಗು ಉಪವಿಭಾಗಾಧಿಕಾರಿಗಳ ಮುಂದೆ ಕಡತ ಮಂಡಿಸಿಲ್ಲ, ಸರ್ಕಾರದ ನಿಯಾಮಾವಳಿಗಳನ್ನು ಪಾಲಿಸದೆ ಇ-ಖಾತೆ ಮಾಡಬೇಕಾದ ಕ್ರಮವನ್ನು ಗಾಳಿಗೆ ತೂರಿ ಗ್ರಾಮಠಾಣಾ ಜಾಗದ ಮೂಲ ದಾಖಲಾತಿ ಮತ್ತು ಇದರ ಸ್ಥಳ ಐತಿಹ್ಯ ಗಮನಿಸದೆ ಅಕ್ರಮವಾಗಿ ಮಂಜೂರು ಮಾಡಿರುತ್ತಾರೆ ಎಂದು ನಾಗರಿಕರು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಮಂಡ್ಯ ಮನವಿ

ಅಲಿನೇಷನ್ ನಕ್ಷೆಗೆ ಯೋಜನಾ ಪ್ರಾಧಿಕಾರದ ಒಪ್ಪಿಗೆ ಇಲ್ಲ. ಜಿಲ್ಲಾಧಿಕಾರಿಗಳಿಂದ ಅಲಿನೇಷನ್ ಆಗಿ ಬಂದಿಲ್ಲ. ಜಮೀನಿನ ಮೌಲ್ಯಕ್ಕೆ ಅನುಗುಣವಾಗಿ ಕಿಮ್ಮತ್ತು ಪಡೆಯದೆ ಖಾತೆ ಮಾಡಿರುತ್ತಾರೆ. ಆದ್ದರಿಂದ ಈ ಪ್ರಕರಣದಲ್ಲಿ ಭಾಗಿಯಾಗಿರುವ ಪುರಸಭಾ ಅಧಿಕಾರಿಗಳು, ಸಿಬ್ಬಂದಿಯನ್ನು ಈ ಕೂಡಲೆ ಅಮಾನರು ಮಾಡಬೇಕು. ಅಕ್ರಮವಾಗಿ, ನಿಯಮಬಾಹಿರವಾಗಿ ಖಾತೆ ಮಾಡಿರುವ ಈ ಆಸ್ತಿಯ ಖಾತೆಯನ್ನು ರದ್ದುಗೊಳಿಸಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಸದರಿ ಆಸ್ತಿಯನ್ನು ಪುರಸಭಾ ವಶಕ್ಕೆ ಪಡೆದು ಈ ಜಾಗದ ಪಕ್ಕದಲ್ಲೆ ಪುರಾತನ ಹೊಂಬಾಳಮ್ಮನ ದೇವಾಲಯದ ಜಾಗವಿದ್ದು, ಮುಂದಿನ ದಿನಗಳಲ್ಲಿ ಮದ್ದೂರು ತಾಲ್ಲೂಕಿನ ಗ್ರಾಮಸ್ಥರು ಗುಡಿಯ ನಿರ್ಮಾಣ ಕಾರ್ಯ ಕೈಗೊಳ್ಳುತ್ತಿದ್ದು, ಗುಡಿಗೆ ಬರುವ ನಾಗರಿಕರ ಉಪಯೋಗಕ್ಕೆ ಈ ಆಸ್ತಿಯನ್ನು ಮೀಸಲಿಡುವಂತೆ ಮನವಿಯಲ್ಲಿ ತಿಳಿಸಿದರು.

ಮದ್ದೂರು 1 1
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...