ಮಂಡ್ಯ | ಒಳಮೀಸಲಾತಿ ಜಾರಿಗೆ ಆಗ್ರಹ: ಮಾದಿಗ ಸಮುದಾಯದಿಂದ ಪ್ರತಿಭಟನೆ

Date:

ಮಂಡ್ಯ ನಗರದಲ್ಲಿ ಮಾದಿಗ ಸಮುದಾಯದ ಸಹಸ್ರಾರು ಜನರು ಅ.16ರ ಬುಧವಾರ ಬೀದಿಗಿಳಿದು ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದರು.

2023ರ ಕರ್ನಾಟಕ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿರುವ ಆರು ಗ್ಯಾರಂಟಿಗಳಲ್ಲಿ 6ನೇ ಗ್ಯಾರಂಟಿಯಾಗಿ ಒಳಮೀಸಲಾತಿಯನ್ನು ಜಾರಿಗೆ ತರಬೇಕೆಂದು ಸಮುದಾಯದವರು ಒತ್ತಾಯಿಸಿದರು.

ಪ್ರತಿಭಟನೆಯ ಮೆರವಣಿಗೆ ಮಂಡ್ಯ ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕಿನಿಂದ ಆರಂಭವಾಯಿತು. ಸಾವಿರಾರು ಜನ ತಮಟೆ, ನಗಾರಿಗಳೊಂದಿಗೆ ನೀಲಿ ಬಾವುಟಗಳನ್ನು ಹಿಡಿದು, ಘೋಷಣೆಗಳನ್ನು ಮೊಳಗಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರತಿಭಟನೆಯಲ್ಲಿ ಮಂಡ್ಯ ಜಿಲ್ಲೆಯ ಎಲ್ಲಾ ಏಳು ತಾಲೂಕುಗಳಿಂದ ಜನರು ಭಾಗವಹಿಸಿದ್ದರು. ಪ್ರತಿಭಟನಾಕಾರರು 6ನೇ ಗ್ಯಾರಂಟಿಯನ್ನು ಜಾರಿಗೆ ತರಬೇಕೆಂದು ಆಗ್ರಹಿಸುತ್ತಾ, ರಾಜ್ಯದಲ್ಲಿ ಆಗಲೇ ಬಾಕಿಯಿರುವ ಮೀಸಲಾತಿ ಹುದ್ದೆಗಳನ್ನು ಹಾಗು ಇತರೆ ನೇಮಕಾತಿಗಳನ್ನು ಕೂಡಲೇ ರದ್ದುಪಡಿಸಲು ಸರ್ಕಾರಕ್ಕೆ ಒತ್ತಾಯ ಮಾಡಿದರು.

ಮಂಡ್ಯ 25

ಜಾತಿ ಜನಗಣತಿ ವರದಿಯನ್ನು ಮುನ್ನೆಲೆಗೆ ತಂದು ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಗೊಂದಲ ಸೃಷ್ಟಿಸುತ್ತಿರುವುದು ಸಂವಿಧಾನದ ವಿರುದ್ಧ ನಡೆಯುತ್ತಿರುವ ಅಪಚಾರವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಜಾತಿ ಜನಗಣತಿ ವರದಿಯು ಎಸ್ ಸಿ ಒಳಮೀಸಲಾತಿ ವರ್ಗೀಕರಣಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂಬಂಧ, ಎಸ್ ಸಿ ಮತ್ತು ಎಸ್ ಟಿ ಸಮುದಾಯಗಳಿಗೆ ಸಂಬಂಧಿಸಿದ ಮೂರು ಆಯೋಗಗಳ ವರದಿ ಮತ್ತು ಇತರ ಕಾನೂನಾತ್ಮಕ ದತ್ತಾಂಶಗಳು ಸರಕಾರದ ಕೈಯಲ್ಲಿವೆ. ಇವುಗಳ ಆಧಾರದ ಮೇಲೆ ಸುಪ್ರೀಂ ಕೋರ್ಟ್ ಏಳು ನ್ಯಾಯಮೂರ್ತಿಗಳ ಪೂರ್ಣ ಪೀಠ ತೀರ್ಪನ್ನು ಅನುಸರಿಸಿ ಒಳಮೀಸಲಾತಿಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಲಾಯಿತು.

ಪ್ರತಿಭಟನೆಯಲ್ಲಿ ನಿವೃತ್ತ ನ್ಯಾಯಾಧೀಶರಾದ ಶ್ಯಾಮ್ ಪ್ರಸಾದ್ ಹೆಚ್.ಸಿ, ಮುಖಂಡರಾದ ಅನ್ನದಾನಿ ಸಿ, ಎನ್.ಆರ್. ಚಂದ್ರಶೇಖರ್, ಸಿ.ಕೆ. ಪಾಪಯ್ಯ, ಕನ್ನಲಿ ಕೆಂಪಣ್ಣ, ನಂಜುಂಡ ಮೌರ್ಯ, ಅರಕೆರೆ ಸಿದ್ದರಾಜು, ಎಲೆಚಾಕನಹಳ್ಳಿ ಸ್ವಾಮಿ, ಕೃಷ್ಣ, ರಾಜು, ಶ್ರೀನಿವಾಸ್ ಬಸರಾಳು, ಅಂಬೂಜೀ, ಮಾರಸಿಂಗನಹಳ್ಳಿ ಬಸವರಾಜು, ಶಿವಕುಮಾರ್ ಹುನುಗನಹಳ್ಳಿ, ಸ್ವಾಮಿ ಹಟ್ನ್, ಎಲೆಚಾಲಕನಹಳ್ಳಿ ಗವಿ ಮತ್ತಿತರರು ಭಾಗವಹಿಸಿದ್ದರು.

ಮಂಡ್ಯ1 4
ಮಂಡ್ಯ2
ಮಂಡ್ಯ4
Irshad Venoor
Website |  + posts

ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಇರ್ಷಾದ್ ವೇಣೂರು
ಇರ್ಷಾದ್ ವೇಣೂರುhttps://eedina.com
ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...