ಮಂಡ್ಯ | ಮಹರ್ಷಿ ವಾಲ್ಮೀಕಿ ಒಂದು ಸಮುದಾಯಕ್ಕೆ ಸೀಮಿತರಲ್ಲ: ಜಿಲ್ಲಾಧಿಕಾರಿ ಡಾ. ಕುಮಾರ

Date:

ಭಾರತದ ಸಂಸ್ಕೃತಿಯನ್ನು ಉಳಿಸಿರುವ ಮಹರ್ಷಿ ವಾಲ್ಮೀಕಿಯವರು ಜಗತ್ತು ಕಂಡ ಮಹಾನ್ ಚೇತನ. ವಾಲ್ಮೀಕಿಯವರು ಕೇವಲ ಒಂದು ಸಮುದಾಯದವರಿಗೆ ಸೀಮಿತವಾದವರಲ್ಲ. ಅವರ ತತ್ವ, ಆದರ್ಶ ಮತ್ತು ಚಿಂತನೆಗಳನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಅಭಿಪ್ರಾಯಪಟ್ಟರು.

ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಂಡ್ಯ ನಗರದ ಕಲಾಮಂದಿರದಲ್ಲಿ ನಡೆದ ಮಹರ್ಷಿ ವಾಲ್ಮೀಕಿಯವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ವಾಲ್ಮೀಕಿಯವರು ಸಾಮಾನ್ಯರಾಗಿ ಜನಿಸಿ ಅಸಾಮಾನ್ಯವಾಗಿ ಸಾಧನೆ ಮಾಡಿದವರು. ಅವರು ರಚಿಸಿರುವ ಬೃಹತ್ ವಾಲ್ಮೀಕಿ ರಾಮಾಯಣ ಗ್ರಂಥ ಇಂದಿಗೂ ಎಲ್ಲರ ಮನೆ ಹಾಗೂ ಮನಗಳಲ್ಲಿ ಚಿರಪರಿಚಿತ. ಅವರು ಶ್ಲೋಕ ಮತ್ತು ಕೃತಿಗಳನ್ನು ರಚಿಸುವ ಮೂಲಕ ಸಂಸ್ಕೃತಿ, ಸಂಸ್ಕಾರ, ಪರಂಪರೆ, ಜೀವನದ ಮೌಲ್ಯ ಮತ್ತು ಮಾನವೀಯತೆಯನ್ನು ಜಗತ್ತಿಗೆ ಸಾರಿದ್ದಾರೆ. ಭಾರತದ ಬೃಹತ್ ಮಹಾಕಾವ್ಯಗಳಾದ ಮಹಾಭಾರತ ಮತ್ತು ರಾಮಾಯಣ ಸೂರ್ಯ-ಚಂದ್ರ ಇರುವವರೆಗೂ ಶಾಶ್ವತ. ವಾಲ್ಮೀಕಿಯವರು ತಮ್ಮ ಕೃತಿಯಲ್ಲಿ ಮಾನವೀಯತೆ, ರಾಮರಾಜ್ಯ ಮತ್ತು ಪ್ರಜಾರಾಜ್ಯ ಕುರಿತಂತೆ ಪ್ರತಿಯೊಂದು ವಿಷಯಗಳ ಬಗ್ಗೆಯೂ ತಿಳಿಸಿದ್ದಾರೆ ಎಂದರೆ ತಪ್ಪಾಗುವುದಿಲ್ಲ. ಹಿರಿಯರು ಇಂದಿನ ನಮ್ಮ ಮಕ್ಕಳಿಗೆ ಮತ್ತು ಯುವ ಪೀಳಿಗೆಗೆ ರಾಮಾಯಣದ ಮಹತ್ವವನ್ನು ತಿಳಿಸಿ” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ ಮಾತನಾಡಿ, “ಅಕ್ಷರ ಜ್ಞಾನವಿದ್ದರೆ ಯಾರು ಯಾವ ಸಾಧನೆ ಬೇಕಾದರೂ ಸಾಧಿಸಬಹುದು ಹಾಗೂ ಸಮಾಜಕ್ಕೆ ಮಾದರಿಯಾಗಿ ಎಂದಿಗೂ ಅಳಿಯದ ಹೆಸರಾಗಿ ಉಳಿಯಬಹುದು ಎಂಬುವುದಕ್ಕೆ ಮಹರ್ಷಿ ವಾಲ್ಮೀಕಿಯವರು ನಿದರ್ಶನ. ವಾಲ್ಮೀಕಿ ಜಯಂತಿ ಅಂಗವಾಗಿ ಜಿಲ್ಲೆಯಲ್ಲಿನ ಪ್ರತಿ ಮಕ್ಕಳಿಗೂ ವಿದ್ಯಾಭ್ಯಾಸವನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲೆಯ ಪ್ರತಿಯೊಬ್ಬರು ಹೆಚ್ಚಿನ ಪಾತ್ರ ನಿಭಾಯಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: ಮಂಡ್ಯ | ಶಿಕಾರಿಪುರ ಅಲೆಮಾರಿ ಹಕ್ಕಿಪಿಕ್ಕಿ ಸಮುದಾಯ ಜನರ ಬದುಕು ಅತಂತ್ರ

ಶ್ರೀರಂಗಪಟ್ಟಣದ ವಿದ್ಯಾಭಾರತಿ ಶಾಲೆಯ ದೈಹಿಕ ಶಿಕ್ಷಕ ಉಮೇಶ್ ಎಂ ಆರ್ ಮಾತನಾಡಿ, “ಪ್ರಸ್ತುತ ನಾವು ವಿದ್ಯಾವಂತರಾಗಿ ಸಮಾಜದಲ್ಲಿ ಜೀವನ ಸಾಗಿಸುತ್ತಿದ್ದು ಮಹರ್ಷಿ ವಾಲ್ಮೀಕಿಯವರನ್ನು ಒಂದು ಸಮುದಾಯಕ್ಕೆ ಸೀಮಿತ ಪಡಿಸುತ್ತಿರುವುದು ವಿಪರ್ಯಾಸದ ಸಂಗತಿ, ದೇಶದ ಮಹಾನ್ ವ್ಯಕ್ತಿಗಳನ್ನು ಕೇವಲ ಒಂದು ಜನಾಂಗ ಮತ್ತು ಸಮುದಾಯಕ್ಕೆ ಸೀಮಿತ ಪಡಿಸದೆ, ಅವರ ಆದರ್ಶ, ತತ್ವ ಹಾಗೂ ಪರೀತ್ಯಾಗಳನ್ನು ಪ್ರತಿಯೊಬ್ಬರೂ ತಮ್ಮ ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಎಂ ವಿ ಪ್ರಕಾಶ್, ಉಪವಿಭಾಗಾಧಿಕಾರಿ ಶಿವಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೆ ಶ್ರೀನಿವಾಸ್, ನಗರಸಭೆ ಸದಸ್ಯ ಶ್ರೀಧರ್, ಹರೀಶ್, ಶಿವಲಿಂಗು, ಡಿ ದೇವರಾಜು ಅರಸ್ ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಸಂದೇಶ್, ಸಮುದಾಯ ಮುಖಂಡರುಗಳಾದ ಚಂದ್ರನಾಯಕ್, ವೆಂಕಟೇಶ್ ನಾಯಕ್ ಸೇರಿದಂತೆ ಸಂಘ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...