ಮಂಡ್ಯ | ಮಹಿಳಾ ಮುನ್ನಡೆ, ಕರ್ನಾಟಕ ಜನಶಕ್ತಿಯಿಂದ ಹೆಣ್ಣು ಭ್ರೂಣ ಹತ್ಯೆ ವಿರೋಧಿ ಅಭಿಯಾನಕ್ಕೆ ಚಾಲನೆ

Date:

ಮಂಡ್ಯ ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆಗಳು ನಿರಂತರವಾಗಿ ಹೆಚ್ಚಳವಾಗುತ್ತಿದ್ದು, ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಹೆಣ್ಣು ಭ್ರೂಣ ಹತ್ಯೆಯಲ್ಲಿ ಮಂಡ್ಯ ಮೊದಲ ಸ್ಥಾನ ಪಡೆಯಲು ಪೈಪೋಟಿಗೆ ಬಿದ್ದಂತಾಗಿದೆ. ಹೆಣ್ಣಿನ ಶೋಷಣೆ ಭ್ರೂಣದಲ್ಲಿಯೇ ಪ್ರಾರಂಭವಾಗುತ್ತದೆ. ಕೊನೆಗೆ ಭ್ರೂಣ ಹತ್ಯೆ, ಅತ್ಯಾಚಾರ, ದೌರ್ಜನ್ಯಗಳು ಕೊಲೆಗಳಲ್ಲಿ ಕೊನೆಗೊಳ್ಳುತ್ತದೆ, ಇತ್ತೀಚಿನ ದಿನಗಳಲ್ಲಿ ಇವು ಹೆಗ್ಗಿಲ್ಲದೆ ನಡೆಯುತ್ತಿದೆ ಎಂದು ಮಹಿಳಾ ಮುನ್ನಡೆ ಮತ್ತು ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಪೂರ್ಣಿಮಾ ಆತಂಕ ವ್ಯಕ್ತಪಡಿಸಿದರು.

ಅವರು ಮಂಡ್ಯ ಪಟ್ಟಣದ ಗಾಂಧಿ ಪ್ರತಿಮೆಯ ಮುಂದೆ ಮಹಿಳಾ ಮುನ್ನಡೆ ಮತ್ತು ಕರ್ನಾಟಕ ಜನಶಕ್ತಿಯ ವತಿಯಿಂದ ಹೆಣ್ಣು ಭ್ರೂಣ ಹತ್ಯೆ ವಿರೋಧಿ ಅಭಿಯಾನಕ್ಕೆ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದ ಬಳಿಕ ಮಾತನಾಡಿದರು.

ಮಂಡ್ಯದ ಹಾಡ್ಯದ ಆಲೆಮನೆ ಪ್ರಕರಣ, ಕರ್ನಾಟಕದ ಜನರೆದುರು ಮಂಡ್ಯ ಜಿಲ್ಲೆಯ ಜನರು ತಲೆತಗ್ಗಿಸುವ ಸಂಗತಿ. ಹೆಚ್ಚುತ್ತಿರುವ ಈ ಅನಿಷ್ಟ ಪಿಡುಗು ಮತ್ತು ಹೆಣ್ಣು ಭ್ರೂಣ ಹತ್ಯೆಗಳಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರೆ ಹೆಚ್ಚು ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದು ನಾಚಿಕೇಡಿನ ಸಂಗತಿ. ಹೆಣ್ಣು ಭ್ರೂಣ ಹತ್ಯೆಯ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಗಳು ಮತ್ತೆ ಜಾಮೀನಿನ ಮೇಲೆ ಹೊರ ಬಂದು ಮತ್ತದೇ ಕೆಲಸಗಳಲ್ಲಿ ಭಾಗಿಯಾಗುತ್ತಿರುವುದು, ನಮ್ಮ ಕಾನೂನಿನ ದೌರ್ಬಲ್ಯವನ್ನು ಎತ್ತಿ ತೋರುತ್ತದೆ. ಈ ಅನಿಷ್ಟ ಪಿಡುಗನ್ನು ತಡೆಗಟ್ಟಲು ಜೊತೆಯಾಗಿ ಶ್ರಮಿಸೋಣ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಜನಶಕ್ತಿಯ ಜಿಲ್ಲಾ ಕಾರ್ಯದರ್ಶಿ ಸಿದ್ದರಾಜು ಮಾತನಾಡಿ, ಈ ನೆಲದಲ್ಲಿ ಪುರುಷ ಪ್ರಾಧಾನ್ಯತೆಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಾ ಹೆಣ್ಣನ್ನು ಕೀಳು, ಕನಿಷ್ಠ, ಹೊರೆ ಎಂಬ ಮನೋಭಾವದಿಂದಾಗಿ ಹೆಣ್ಣು ಭ್ರೂಣ ಹತ್ಯೆಗಳು ಹೆಚ್ಚುತ್ತಿವೆ. ಹೆಣ್ಣು ತಾಯಿಯಾಗಿ, ಹೆಂಡತಿಯಾಗಿ ಮತ್ತು ಸೊಸೆಯಾಗಿ ಬೇಕು. ಆದರೆ ಮಗಳಾಗಿ ಮಾತ್ರ ಬೇಡ ಎನ್ನುವುದು ನೀಚ ಮನಸ್ಥಿತಿ. ಈ ಮನಸ್ಥಿತಿಗಳ ವಿರುದ್ದ ಹೋರಾಟ ನಡೆಸಬೇಕು. ಹೆಣ್ಣಿನ ಘನತೆ ನಮ್ಮೆಲ್ಲರ ಆದ್ಯತೆ ಆಗಬೇಕು ಎಂದು ತಿಳಿಸಿದರು.

ಸಿಐಟಿಯುನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ ಕುಮಾರಿ ಮಾತನಾಡಿ, ಗಾಂಧಿ ಜಯಂತಿಯಂದು ಈ ಹೆಣ್ಣು ಭ್ರೂಣ ಹತ್ಯೆ ವಿರೋಧಿ ಅಭಿಯಾನಕ್ಕೆ ಚಾಲನೆಕೊಟ್ಟಿರುವ ಮಹಿಳಾ ಮುನ್ನಡೆಯ ಜೊತೆಗೆ ಸಿಐಟಿಯು ಸಂಘಟನೆ ಕೂಡಾ ಬೆಂಬಲವಾಗಿ ನಿಲ್ಲುತ್ತದೆ. ಮಂಡ್ಯದಲ್ಲಿ ಹೆಚ್ಚುತ್ತಿರುವ ಅನಿಷ್ಟ ಪಿಡುಗನ್ನು ತಡೆಗಟ್ಟಲು ನಾವೆಲ್ಲರೂ ಜೊತೆಯಾಗಿ ನಿಂತು ಶ್ರಮವಹಿಸಬೇಕಿದೆ. ಹೆಣ್ಣೆಂದರೆ ಹೊರೆ ಹೆಣ್ಣೆಂದರೆ ಕೀಳು, ಕನಿಷ್ಠ ಎನ್ನುವ ಮನಸ್ಥಿತಿ ಹಾಗೂ ಪುತ್ರ ವ್ಯಾಮೋಹದಿಂದ ಹೆಣ್ಣನ್ನು ಭ್ರೂಣದಲ್ಲಿಯೇ ಕೊಲ್ಲಲಾಗುತ್ತಿದೆ. ಸಂಘ ಸಂಸ್ಥೆಗಳಾದ ನಾವು ಕೂಡಾ ಈ ಅನಿಷ್ಟ ಪಿಡುಗಿನ ವಿರುದ್ಧ ದುಡಿಯುವ ಪಣತೊಡೋಣ. ಈ ಅಭಿಯಾನ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ಲತಾ ಶಂಕರ್, ಮಹಿಳಾ ಮುನ್ನಡೆಯ ಶಿಲ್ಪ, ಜ್ಯೋತಿ, ಸೌಮ್ಯ, ಶಾಂತ, ರೇವತಿ ಮಮತ, ಶೃತಿ,ಶ್ರಮಿಕ ನಗರ ನಿವಾಸಿಗಳ ಒಕ್ಕೂಟದ ಮುಖಂಡರಾದ ಚಂದ್ರು, ರವಿ ಅರುಣ, ಅಭಿಷೇಕ್ ವಿದ್ಯಾರ್ಥಿ ಸಂಘಟನೆಯ ಉದಯ್, ನಿತ್ಯಾ ಹಲವರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...