ಮಂಡ್ಯ | ಸಂವಿಧಾನ ಉಳಿಯಬೇಕಾದರೆ ಮನು ಸಿದ್ಧಾಂತ ಸಂಪೂರ್ಣ ನಶಿಸಬೇಕು: ‘ಮನುಸ್ಮೃತಿ’ ಸುಟ್ಟು ಪ್ರತಿಭಟನೆ

Date:

ಇಂದು ಮನುಸ್ಮೃತಿ ಸುಟ್ಟ ಐತಿಹಾಸಿಕ ದಿನ. ಮನುವಾದಿ ಬಗೆಗೆ ಪೆಟ್ಟು ಕೊಟ್ಟ ದಿನವೂ ಹೌದು. ಅಸ್ಪೃಶ್ಯತೆ, ಜಾತೀಯತೆ, ಲಿಂಗ ತಾರತಮ್ಯ, ಅಸಮಾನತೆಯ ಸಾರುವ ಮನುಸ್ಮೃತಿ ಕೃತಿಯನ್ನು ಡಾ.ಬಿ.ಆರ್. ಅಂಬೇಡ್ಕರ್ ಅವರು 1927ರ ಡಿ.25ರಂದು ಸುಟ್ಟ ಐತಿಹಾಸಿಕ ದಿನದ ಅಂಗವಾಗಿ ಮಂಡ್ಯದಲ್ಲಿಯೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಕರ್ನಾಟಕ ಜನಶಕ್ತಿ ಮುಂದಾಳತ್ವದಲ್ಲಿ ಮನುಸ್ಮೃತಿಯನ್ನು ಸುಟ್ಟು ಬುಧವಾರ ಪ್ರತಿಭಟನೆ ನಡೆಸಲಾಯಿತು.

ಮಂಡ್ಯ ನಗರದ ಸಂಜಯ್ ವೃತ್ತದಲ್ಲಿ ಸೇರಿದ ದಸಂಸ, ಕರ್ನಾಟಕ ಜನಶಕ್ತಿ ಹಾಗೂ ಜಾಗೃತ ಕರ್ನಾಟಕದ ಕಾರ್ಯಕರ್ತರು ಮನುಸ್ಮೃತಿಗೆ ಬೆಂಕಿಯಿಟ್ಟು ಸುಟ್ಟು ಹಾಕಿದರು.

ಅಂಬೇಡ್ಕರ್ ಅವರ ನೇತೃತ್ವದಲ್ಲಿ ನಡೆದ ತಳ ಸಮುದಾಯಗಳ ಬಂಡಾಯಕ್ಕೀಗ 97 ವರ್ಷಗಳು ಸಂದಿವೆ. ಸ್ವಾತಂತ್ರ್ಯಾ ನಂತರವೂ ಪರಿಸ್ಥಿತಿ ಬದಲಾಗಿಲ್ಲ, ಇಂತಹ ಸಂದರ್ಭದಲ್ಲಿ ಅಂಬೇಡ್ಕರ್ ಮತ್ತು ಸಂವಿಧಾನವನ್ನು ಎದೆಗಪ್ಪಿಕೊಳ್ಳೋಣ ಮನುಸ್ಮೃತಿಗೆ ಕೊಳ್ಳಿ ಇಟ್ಟು ಸಮತೆಯ ಜ್ಯೋತಿಯನ್ನು ಬೆಳಗಿಸೋಣ ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20241225 WA0020

ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು ಮಾತನಾಡಿ, “ಜಾತಿ ಅಸಮಾನತೆ, ಲಿಂಗ ತಾರತಮ್ಯ ದಲಿತರು – ಮಹಿಳೆಯರ ಮೇಲಿನ ದಬ್ಬಾಳಿಕೆ, ಬಹುಜನರ ಮೇಲೆ ದೌರ್ಜನ್ಯ ಸತಿ ಸಹಗಮನ ಪದ್ಧತಿ, ದೇವದಾಸಿ ಪದ್ಧತಿ, ಬೆತ್ತಲೆ ಸೇವೆ, ಬಾಲ್ಯ ವಿವಾಹ ಮೊದಲಾದ ಅನಿಷ್ಟಗಳು ಶತಮಾನಗಳ ಕಾಲ ಮುಂದುವರಿಯಲು ಕಾರಣವಾದ ಮನುಸ್ಮೃತಿಯನ್ನು ಡಾ.ಅಂಬೇಡ್ಕರ್ 1927ರ ಡಿಸೆಂಬರ್ 25ರಂದು ಸಾರ್ವಜನಿಕವಾಗಿ ಸುಟ್ಟು ಹಾಕಿದ್ದರು. ಸ್ವಾತಂತ್ರ್ಯ ಭಾರತಕ್ಕೆ ಸಂವಿಧಾನವನ್ನು ರೂಪಿಸುವ ಸಂದರ್ಭದಲ್ಲಿ ಸಮ ಸಮಾಜದ ನಿರ್ಮಾಣದ ಕನಸು ಹೊತ್ತು ಸಮಾನತೆ ಸಹೋದರತೆ, ಭ್ರಾತೃತ್ವದ ಆಶಯದೊಂದಿಗೆ ಸಂವಿಧಾನವನ್ನು ರೂಪಿಸಿಕೊಂಡೆವು. ಈ ಸಂವಿಧಾನ ರಚನೆಗೆ ಬಾಬಾ ಸಾಹೇಬರ ಕೊಡುಗೆ ಅಗಾಧವಾದದ್ದು” ಎಂದು ಸ್ಮರಿಸಿದರು.

ಇದನ್ನು ಓದಿದ್ದೀರಾ? ಸಜ್ಜನರ ಸಲ್ಲಾಪ – 3: ತಿಂಗಳ ಅತಿಥಿಯಾಗಿ ಬಿ.ಟಿ.ಲಲಿತಾನಾಯಕ್

ಸಂವಿಧಾನ ಸಮರ್ಪಣೆಯಾದ ಸಂದರ್ಭದಲ್ಲಿ ಆರ್‌ಎಸ್‌ಎಸ್ ಮುಖವಾಣಿ ‘ಆರ್ಗನೈಸರ್’ ಪತ್ರಿಕೆಯು ನಮ್ಮ ಸಂವಿಧಾನದ ಮೇಲೆ ಅಸಹನೆಯನ್ನು ಹೊರಹಾಕಿತ್ತು. ‘ಈ ಸಂವಿಧಾನದಲ್ಲಿ ಭಾರತೀಯತೆ ಇಲ್ಲ. ಸಂವಿಧಾನ ರಚನಾಕಾರರು ಮನುಸ್ಮೃತಿಯನ್ನು ಗಣನೆಗೆ ತೆಗೆದುಕೊಂಡಿಲ್ಲ’ ಎಂದು ಮೂದಲಿಸಲಾಗಿತ್ತು. ಅಂದಿನಿಂದ ಇಂದಿನವರೆಗೂ ಆಂತರಿಕವಾಗಿಯೂ ಬಹಿರಂಗವಾಗಿಯೂ ಡಾ.ಅಂಬೇಡ್ಕರ್ ಮೇಲೆ, ಸಂವಿಧಾನದ ಮೇಲೆ ಅಸಹಿಷ್ಣುತೆಯನ್ನು ಆರ್‌ಎಸ್‌ಎಸ್ – ಬಿಜೆಪಿ ಸಂಘ ಪರಿವಾರ ಹೊರಹಾಕುತ್ತಲೇ ಬಂದಿದೆ. ಮನು ಪ್ರಣೀತ ಭಾರತವನ್ನು ಬದಿಗೆ ಸರಿಸಿ, ಸಮಾನತೆ ಸಾರಿದ ಬೌದ್ಧತತ್ವ ಪ್ರಣೀತ, ಪ್ರಜಾತಾಂತ್ರಿಕ ಸಂವಿಧಾನವನ್ನು ಅಂಬೇಡ್ಕರ್ ಈ ದೇಶಕ್ಕೆ ರೂಪಿಸಿಕೊಟ್ಟಿದ್ದನ್ನು ಸಹಿಸಿಕೊಳ್ಳದ ಶಕ್ತಿಗಳು ಇಂದು ಬಲವಾಗಿವೆ ಬಲವಾಗುತ್ತಿವೆ. ಜನರ ದಿಕ್ಕು ತಪ್ಪಿಸಿ, ಸುಳ್ಳು ಹಬ್ಬಿಸುವ ಕಾರ್ಯದಲ್ಲಿ ಸಕ್ರಿಯವಾಗಿವೆ, ಇದರ ವಿರುದ್ದ ಬಹುಜನರು ಜಾಗೃತರಾಗಬೇಕು” ಎಂದು ಕರೆ ನೀಡಿದರು.

ಮನುಸ್ಮೃತಿಯನ್ನು ಒಪ್ಪಿಕೊಳ್ಳುವುದೆಂದರೆ ಭಾರತವನ್ನು ಶತಮಾನಗಳ ಕಾಲ ಹಿಂದಕ್ಕೆ ಕರೆದೊಯ್ದಂತೆ. ಇದನ್ನು ಸ್ಪಷ್ಟವಾಗಿ ಆರ್‌ಎಸ್‌ಎಸ್‌ನ ಗೋಳ್ವಾಲ್ಕರ್ ಹೀಗೆ ಹೇಳಿದ್ದರು. “ಜಾತಿ ವ್ಯವಸ್ಥೆ ಸ್ಥಿರವಾಗಿ ಉಳಿಯಬೇಕು. ಹೀಗಾಗಿ ನಮ್ಮ ಉದ್ದೇಶವೇ ಭಾರತವನ್ನು ನೂರಿನ್ನೂರು ವರ್ಷ ಹಿಂದಕ್ಕೆ ಕರೆದೊಯ್ಯುವುದಲ್ಲ, ಬದಲಾಗಿ ಸಾವಿರ ವರ್ಷ ಹಿಂದಕ್ಕೆ ಕರೆದೊಯ್ಯುವುದು” ಎಂದಿದ್ದರು. ಈ ಮಾತುಗಳನ್ನು ನಾವು ಸದಾ ನೆನಪಿನಲ್ಲಿಡಬೇಕು. ಸಂವಿಧಾನ ಉಳಿಯಬೇಕಾದರೆ ಮನು ಸಿದ್ಧಾಂತ ಸಂಪೂರ್ಣ ನಶಿಸಿ ಹೋಗಬೇಕು. ಬಾಬಾ ಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಒಂದು ಚಾರಿತ್ರಿಕ ವಿದ್ಯಮಾನ. ಈ ಪ್ರಕ್ರಿಯೆಯನ್ನು ನಾವು ಮುಂದುವರಿಸಬೇಕಿದೆ ಎಂದರು.

ಇದನ್ನು ನೋಡಿದ್ದೀರಾ? ಮಂಡ್ಯ | ‘ರಸ್ತೆ ಮೇಲೆ ಓಡಾಡಲು ನಿರ್ಬಂಧ; ಸಂಕಷ್ಟಕ್ಕೆ ಸಿಲುಕಿದ ಕುಟುಂಬ!

ಈ ಸಂದರ್ಭದಲ್ಲಿ ಕರ್ನಾಟಕ ಜನಶಕ್ತಿ ಸಿದ್ದರಾಜು, ಸಿಐಟಿಯುನ ಸಿ.ಕುಮಾರಿ, ನ್ಯಾಯವಾದಿಗಳಾದ ಬಿ.ಟಿ.ವಿಶ್ವನಾಥ್, ಕರ್ನಾಟಕ ರಾಜ್ಯ ರೈತ ಸಂಘದ ಪಾಂಡು, ಲಕ್ಷ್ಮಣ್ ಚೀರನಹಳ್ಳಿ, ವೈಜ್ಞಾನಿಕ ಪರಿಷತ್ತಿನ ಜಿಲ್ಲಾಧ್ಯಕ್ಷ ಶಿವಲಿಂಗಯ್ಯ, ಜಾಗೃತ ಕರ್ನಾಟಕದ ನಾಗೇಶ್, ಮಹಿಳಾ ಮುನ್ನಡೆಯ ಶಿಲ್ಪ, ಹುರುಗಲವಾಡಿ ರಾಮಯ್ಯ, ಗಂಜಾಂ ರವಿಚಂದ್ರ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...