ಮಂಡ್ಯ | ಮೇಕೆದಾಟು ಯೋಜನೆಗೆ ಪಕ್ಷಾತೀತ ಹೋರಾಟ ಅಗತ್ಯ: ರೈತ ಸಂಘದ ಮುಖಂಡ ಪಾಪು ಆಗ್ರಹ

Date:

ಲಕ್ಷಾಂತರ ಕ್ಯೂಸೆಕ್ ಕಾವೇರಿ ನೀರು ಸುಮ್ಮನೆ ವ್ಯರ್ಥವಾಗಿ ಸಮುದ್ರದ ಒಡಲು ಸೇರುತ್ತಿರುವುರಿಂದ ಮೇಕೆದಾಟು ಯೋಜನೆಯನ್ನು ಶೀಘ್ರವಾಗಿ ರೂಪಿಸಲು ರಾಜ್ಯದ ಎಲ್ಲ ಜನಪ್ರತಿನಿಧಿಗಳು ಕೇಂದ್ರದೊಂದಿಗೆ ಚರ್ಚೆ ನಡೆಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡ ಮೋಹನ್‌ಕುಮಾರ್ ಪಾಪು ಆಗ್ರಹಿಸಿದ್ದಾರೆ.

ಮೇಕೆದಾಟು ಯೋಜನೆಗೆ ಅನುಮತಿ ಪಡೆಯಲು ರಾಜ್ಯದ ಮುಖ್ಯಮಂತ್ರಿಗಳು, ಜಲಸಂಪನ್ಮೂಲ ಸಚಿವರು, ಮಂಡ್ಯ ಸಂಸದರೂ ಆದ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರು, ಪಕ್ಷಾತೀತವಾಗಿ ಎಲ್ಲಾ ಪಕ್ಷದ ಸಂಸದರು, ಕೇಂದ್ರ ಸಚಿವರುಗಳು, ಶಾಸಕರುಗಳನ್ನು ಒಳಗೊಂಡಂತೆ ಪ್ರಧಾನಮಂತ್ರಿ ಮೋದಿಯವರ ಜೊತೆ ಸುದೀರ್ಘವಾಗಿ ಚರ್ಚಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ಮೋಹನ್‌ಕುಮಾರ್ ಉ.ಕಿರಂಗೂರು ಪಾಪು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಅತಿಹೆಚ್ಚು ಬಿಜೆಪಿ ಸಂಸದರು ಆಯ್ಕೆಯಾಗಿದ್ದು, ರಾಜ್ಯದ ಹಿತ ಕಾಪಾಡಬೇಕಾದ ಸರ್ಕಾರಗಳು ಕಾವೇರಿ ಉಳಿವಿಗಾಗಿ ಕೆಆರ್‌ಎಸ್ ಅಣೆಕಟ್ಟಿನ ಜಲಾಶಯ ತುಂಬಿ ಲಕ್ಷಾಂತರ ಕ್ಯೂಸೆಕ್ ನೀರು ಕಾವೇರಿ ನದಿಯಿಂದ ಹೊರಹೋಗುತ್ತಿದೆ. ಆ ನೀರು ಪೋಲಾಗದಂತೆ ತಡೆಯಲು ಮೇಕೆದಾಟು ಯೋಜನೆ ತುಂಬಾ ಅನಿವಾರ್ಯವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮಿಳುನಾಡು ಸರ್ಕಾರ ಜಲಾಶಯದಲ್ಲಿ ನೀರು ಇಲ್ಲದಿದ್ದರೂ ನೀರು ಬಿಡಿ ಬಿಡಿ ಎಂದು ಕ್ಯಾತೆ ತೆಗೆದು ರಾಜ್ಯಕ್ಕೆ ಅನ್ಯಾಯ ಮಾಡುತ್ತಾ ಬಂದಿದೆ. ಈಗಲಾದರೂ ಮೇಕೆದಾಟು ಯೋಜನೆಯನ್ನು ರೂಪಿಸಿ ಲಕ್ಷಾಂತರ ಕ್ಯೂಸೆಕ್ ನೀರು ಪೋಲಾಗುತ್ತಿರುವುದನ್ನು ತಡೆಗಟ್ಟಿ ಅದನ್ನು ರೈತರ ಹಿತಕ್ಕಾಗಿ, ಪ್ರಾಣಿಪಕ್ಷಿಗಳು, ಜನಸಾಮಾನ್ಯರ ಕುಡಿಯುವ ನೀರಿಗಾಗಿ ಸಂಕಷ್ಟದ ಸಮಯದಲ್ಲಿ ಅಮೂಲ್ಯವಾದ ಜಲ ಬಳಕೆಯಾಗುತ್ತದೆ. ಆದ್ದರಿಂದ ತುಂಬಿ ಹರಿಯುತ್ತಿರುವ ಕಾವೇರಿ ನೀರು ಸಮುದ್ರದ ಪಾಲಾಗುತ್ತಿರುವುದು ಬೇಸರದ ಸಂಗತಿ ಎಂದು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯ ಸಮಯದಲ್ಲಿ ಕಾವೇರಿ ನೀರಿನ ಸಮಸ್ಯೆ ಹಾಗೂ ಮೇಕೆದಾಟು ಯೋಜನೆ ಬಗ್ಗೆ ಭರವಸೆ ನೀಡಿದ್ದ ಕಾವೇರಿ ಕೊಳ್ಳದ ಸಂಸದರೂ, ಕೇಂದ್ರ ಸಚಿವರಾಗಿರುವ ಎಚ್.ಡಿ.ಕುಮಾರಸ್ವಾಮಿರವರು ಕೊಟ್ಟ ಮಾತನ್ನು ಮೋದಿಯವರನ್ನು ಮನವೊಲಿಸಿ ಮಂಡ್ಯ ಜಿಲ್ಲೆಯ ರೈತರ, ಜನಸಾಮಾನ್ಯರ ಹಿತ ಕಾಪಾಡಲು ಮುಂದಾಗುತ್ತಾರಾ ಎಂಬುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಚಿತ್ರದುರ್ಗ | ಹಣ ದುರುಪಯೋಗ : ನನ್ನಿವಾಳ ಗ್ರಾ.ಪಂ. ಪಿಡಿಒ ಅಮಾನತು

ಸಮಸ್ಯೆ ಇತ್ಯರ್ಥಪಡಿಸಲು ಮುಂದಾದರೆ ರಾಜ್ಯದ ರೈತರು ಅವರ ಪರ ನಿಲ್ಲುತ್ತಾರೆ. ಇಂಥ ಸಮಯದಲ್ಲಿ ಮೇಲ್ಕಂಡವರು ಯಾವುದೇ ತಾರತಮ್ಯ ಮಾಡದೆ ರಾಜ್ಯದ ರೈತರ ಹಿತಕ್ಕಾಗಿ ಹಾಗೂ ಕಾವೇರಿ ಉಳಿವಿಗಾಗಿ ಒಗ್ಗೂಡಿ ಶ್ರಮಿಸುವಂತೆ ಪಾಪು ಮತ್ತೊಮ್ಮೆ ಪಾಪು ಕಳಕಳಿ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...