ಮಂಡ್ಯ | ಮೈಕ್ರೋ ಫೈನಾನ್ಸ್ ಸಂಸ್ಥೆಯವರು ಆರ್‌ಬಿಐ ನಿಯಮಾವಳಿ ಸ್ಪಷ್ಟವಾಗಿ ಪಾಲಿಸಬೇಕು: ಜಿಲ್ಲಾಧಿಕಾರಿ ಎಚ್ಚರಿಕೆ

Date:

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿಯಮಾವಳಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಮತ್ತು ಸಭ್ಯ ರೀತಿಯಲ್ಲಿ ಸಾಲ ವಸೂಲಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ್ ಸ್ಪಷ್ಟ ಎಚ್ಚರಿಕೆ ನೀಡಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಸಭೆಯಲ್ಲಿ ಅವರು ಮಾತನಾಡಿದರು.

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ಸಾಲ ನೀಡಿದ ನಂತರ, ತಮ್ಮ ಸಿಬ್ಬಂದಿ ಕಂತು ವಸೂಲಿಗೆ ತೆರಳುವಾಗ ಅವರು ಉತ್ತಮವಾಗಿ ವರ್ತಿಸಬೇಕು. ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳನ್ನು ಬಳಸಿದರೆ, ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಡ ಕುಟುಂಬಗಳು ಸಾಮಾನ್ಯವಾಗಿ ಈ ಸಂಸ್ಥೆಗಳ ಮೂಲಕ ಸಾಲ ಪಡೆಯುತ್ತವೆ. ಅವರಿಗೆ ಸಾಲದ ಮೊತ್ತ ಸಾಮಾನ್ಯವಾಗಿ ಒಂದರಿಂದ ಎರಡು ಲಕ್ಷದ ಒಳಗೆ ಇರುತ್ತದೆ ಮತ್ತು ತಿಂಗಳ ಕಂತುಗಳು ಸಾವಿರದ ಒಳಗೆ. ಈ ಜನರನ್ನು ಅವಮಾನ ಮಾಡುವುದರಿಂದ, ಅವರಲ್ಲಿ ಮಾನಸಿಕ ಒತ್ತಡ ಹೆಚ್ಚಾಗಿ ಆತ್ಮಹತ್ಯೆಗೆ ತಳ್ಳುವಂತಹ ಪ್ರಕರಣಗಳು ನಡೆದಿವೆ. ಇಂತಹ ಘಟನೆಗಳು ಸಮಾಜದ ತಲೆ ತಗ್ಗಿಸುವಂಥವು ಎಂದು ಜಿಲ್ಲಾಧಿಕಾರಿ ಹೇಳಿದರು.

ಸಾಲ ವಸೂಲಿಗೆ ತೆರಳಿದಾಗ ಮನೆ ಪರಿಸ್ಥಿತಿಯನ್ನು ಗಮನಿಸಬೇಕು. ಮನೆಯಲ್ಲಿ ಬೇರೆಯವರು ಇದ್ದಾಗ, ಅಥವಾ ಮಕ್ಕಳ ಮುಂದೆ ಕಂತು ಪಾವತಿ ಒತ್ತಾಯಿಸುವುದು, ಅವರಿಗೊಂದು ಅವಮಾನವಾಗುತ್ತದೆ ಎಂಬ ಜ್ಞಾನ ಇರಬೇಕು. ಸಾಲದ ಮೇಲೆ ವಿಧಿಸುವ ಬಡ್ಡಿ, ಪ್ರೊಸೆಸಿಂಗ್ ಶುಲ್ಕ ಹಾಗೂ ಮರುಪಾವತಿ ಷರತ್ತುಗಳ ಬಗ್ಗೆ ಗ್ರಾಹಕರಿಗೆ ಕನ್ನಡದಲ್ಲಿ ಸ್ಪಷ್ಟವಾಗಿ ಮಾಹಿತಿ ನೀಡಬೇಕು. ಕಂತು ಮರುಪಾವತಿಯಲ್ಲಿ ತಡವಾದರೆ ಲಿಖಿತ ನೋಟಿಸ್ ನೀಡಬೇಕು ಹಾಗೂ ಅವರ ಸ್ಥಿತಿಯನ್ನು ತಿಳಿದು ಅವರಿಗೆ ಸಮಯಾವಕಾಶ ನೀಡಬೇಕು ಎಂದರು.

ಇದನ್ನು ಓದಿದ್ದೀರಾ? 2024ರ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಪ್ರೊ. ಜಿ.ಬಿ. ಶಿವರಾಜು ಆಯ್ಕೆ

ಜಿಲ್ಲಾಡಳಿತಕ್ಕೆ ಮೈಕ್ರೋ ಫೈನಾನ್ಸ್ ಕುರಿತಂತೆ ಹಲವು ದೂರುಗಳು ಬಂದಿವೆ. ಈ ದೂರುಗಳನ್ನು ಪರಿಶೀಲಿಸಲು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ದೂರು ಕೇಂದ್ರ ಮತ್ತು ನೋಡಲ್ ಅಧಿಕಾರಿಯನ್ನು ನೇಮಕ ಮಾಡಬೇಕು. ಅಲ್ಲದೆ, ಸಂಸ್ಥೆಗಳು ತಮ್ಮ ಸಿಬ್ಬಂದಿಗೆ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವ ತರಬೇತಿಯನ್ನು ನೀಡಬೇಕು. ಸಿಬ್ಬಂದಿಗೆ ಗುರುತಿನ ಚೀಟಿ ನೀಡಬೇಕು ಹಾಗೂ ಕಚೇರಿಗಳ ಮುಂದೆ ನಾಮಫಲಕಗಳನ್ನು ಅಳವಡಿಸಬೇಕು ಹಾಗೂ ಅದನ್ನು ಜಿಲ್ಲಾಡಳಿತಕ್ಕೆ ವರದಿ ಮಾಡಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಮಂಡ್ಯ ಲೀಡ್ ಬ್ಯಾಂಕ್ ಮ್ಯಾನೇಜ‌ರ್ ಅರುಣ್‌ ಕುಮಾ‌ರ್ ಎನ್, ಮುಖಂಡರಾದ ವೆಂಕಟಗಿರಿಯಯ್ಯ, ಮೈಕ್ರೋ ಫೈನಾನ್ಸ್ ಸಂಸ್ಥೆಯ ಸಹಾಯಕ ಉಪಾಧ್ಯಕ್ಷ ಮಂಜುನಾಥ್, ಹೆಗಡೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...