ಮಂಡ್ಯ | 5 ತಿಂಗಳಲ್ಲಿ 3ನೇ ಬಾರಿ ವಿದೇಶ ಪ್ರವಾಸ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ ವಿರುದ್ಧ ಆಕ್ರೋಶ

Date:

ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಬರದ ನಡುವೆಯೂ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಗೆದ್ದ 5 ತಿಂಗಳಲ್ಲಿ ಮೂರನೇ ಬಾರಿ ಅಮೆರಿಕಕ್ಕೆ ಹಾರಿದ್ದು, ಕ್ಷೇತ್ರದ ಜನರ ಸಮಸ್ಯೆ ಕೇಳುವವರಿಲ್ಲದಂತಾಗಿದೆ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವರು ಅಮೆರಿಕಾದಲ್ಲಿನ ತಮ್ಮ ಕಂಪನಿ ಮಾರಿ ಹುಟ್ಟೂರಲ್ಲೇ ಇರುವುದಾಗಿ ಚುನಾವಣೆ ವೇಳೆ ಭರವಸೆ ನೀಡಿದ್ದರು. ಈ ಹಿಂದೆ ಹೋಗಿ ವಾಪಸ್ ಬಂದ ಬಳಿಕ ಕ್ಷೇತ್ರದ ಜನರ ಬಳಿ ಕ್ಷಮೆಯಾಚಿಸಿ ಮತ್ತೆ ವಿದೇಶಕ್ಕೆ ಹೋಗಲ್ಲ‌ ಎಂದಿದ್ದರು. ಆದರೆ ಮತ್ತೆ ಕೆಲವೇ ದಿನಗಳಲ್ಲಿ ಅಮೆರಿಕಾಕ್ಕೆ ತೆರಳಿದ್ದಾರೆಂಬ ಆರೋಪ ವ್ಯಕ್ತವಾಗಿದೆ.

ಕಳೆದ ಆಗಸ್ಟ್‌ ತಿಂಗಳಲ್ಲೂ ವಿದೇಶಕ್ಕೆ ತೆರಳಿ ಸ್ವಾತಂತ್ರ್ಯ ದಿನಾಚರಣೆಗೆ ಗೈರಾಗಿದ್ದರು. ಶಾಸಕರ ಅನುಪಸ್ಥಿತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆದಿತ್ತು. ಈಗ ಮತ್ತೆ ಒಂದು ವಾರದ ಹಿಂದೆ ಅಮೆರಿಕಾಕ್ಕೆ ಹೋಗಿರುವ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕನ್ನಡ ರಾಜ್ಯೋತ್ಸವಕ್ಕೂ ಗೈರಾಗಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಾರವಾರ | ಶೈಕ್ಷಣಿಕ ಸಹಾಯಧ ಬಿಡುಗಡೆಗೆ ಒತ್ತಾಯಿಸಿ ಮಕ್ಕಳ ಪತ್ರ

“ಕಾವೇರಿ ಸಮಸ್ಯೆ, ಬರ, ವಿದ್ಯುತ್‌ ಸಮಸ್ಯೆ ಸೇರಿದಂತೆ ರೈತರು ಸಾಲು ಸಾಲು ಸಮಸ್ಯೆಗಳನ್ನು  ಎದುರಿಸುತ್ತಿದ್ದರೂ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತ್ರ ಅವಕ್ಕೂ ತಮಗೂ ಸಂಬಂಧವಿಲ್ಲದಂತೆ ತಿರುಗುತ್ತಿದ್ದಾರೆ. ಒಮ್ಮೆ ವಿದೇಶಕ್ಕೆ ಹೋದರೆ ತಿಂಗಳುಗಟ್ಟಲೆ ಕ್ಷೇತ್ರಕ್ಕೆ ಬರುವುದಿಲ್ಲ. ಇಲ್ಲೇ ಇದ್ದು ಜನರ ಸಮಸ್ಯೆಗೆ ಸ್ಪಂದಿಸಲು ಅವರನ್ನು ಗೆಲ್ಲಿಸಿದ್ದೇವೆ. ಆದರೆ, ವೈಯಕ್ತಿಕ ಕಾರಣಗಳನ್ನು ನೀಡಿ ಶಾಸಕರು ಪದೇ ಪದೆ ವಿದೇಶಕ್ಕೆ ಹೋಗುತ್ತಿದ್ದಾರೆ. ಸಮಸ್ಯೆಗಳನ್ನು ಯಾರ ಬಳಿಯೂ ಹೇಳಿಕೊಳ್ಳಲಾಗದೆ ರೈತರು ಕಂಗಾಲಾಗಿದ್ದಾರೆ‌. ಶಾಸಕರು ವಿದೇಶ ಮರೆತು ಕ್ಷೇತ್ರದಲ್ಲಿ ಉಳಿದುಕೊಂಡು ಜನಪರ ಕೆಲಸಗಳನ್ನು ಮಾಡಬೇಕು” ಎಂದು ಕ್ಷೇತ್ರದ ಜನರು ಪಟ್ಟುಹಿಡಿದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...