ಮಂಡ್ಯ‌ | ಕಾವೇರಿ ನದಿ ದಡದಲ್ಲಿ ಅಸ್ಥಿ ವಿಸರ್ಜನೆ ಕ್ರಿಯೆ ನಿರ್ಬಂಧಕ್ಕೆ ಪಾಪು ಆಗ್ರಹ

Date:

ಕಾವೇರಿ ನದಿ ದಡದಲ್ಲಿ ಅಸ್ಥಿ ವಿಸರ್ಜನೆ ಕ್ರಿಯೆ ನಿರ್ಬಂಧಕ್ಕೆ ಕರ್ನಾಟಕ ರಾಜ್ಯ ರೈತಸಂಘದ ಮುಖಂಡ ಕಿರಂಗೂರು ಪಾಪು ಆಗ್ರಹಿಸಿದ್ದಾರೆ.

ಮಂಡ್ಯ ಜಿಲ್ಲಾಧಿಕಾರಿ ಹಾಗೂ ಶ್ರೀರಂಗಪಟ್ಟಣ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ ಅವರು, “ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿತೀರದಲ್ಲಿ ಅಸ್ಥಿ ವಿಸರ್ಜನೆ ಮಾಡಲು ಜಿಲ್ಲಾಡಳಿತ ಮಾರ್ಗಸೂಚಿ ಮಾಡಿ, ಅದರ ಪ್ರಕಾರ ಅವಕಾಶ ಕಲ್ಪಿಸಲಿ. ಬೇರೆ ಸ್ಥಳಗಳಲ್ಲಿ ಸಂಪೂರ್ಣ ನಿಷೇಧಿಸಿ ಮಾಲಿನ್ಯಕಾರಕ ಚಟುವಟಿಕೆಗಳಿಗೆ ನಿರ್ಬಂಧ ಹೇರಬೇಕು” ಎಂದರು.

“ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯಲ್ಲಿ ಮೊದಲಿಂದಲೂ ಅಸ್ಥಿ ವಿಸರ್ಜನೆ ಮಾಡುತ್ತಿದ್ದರು. ಈಗ ಎಲ್ಲ ನದಿಯ ದಂಡೆಯಲ್ಲಿ ಅಸ್ಥಿ ವಿಸರ್ಜನೆ ಕ್ರಿಯೆಯನ್ನು ವ್ಯಾಪಕವಾಗಿ ನಡೆಸಲಾಗುತ್ತಿದೆ. ಕಾವೇರಿ ನದಿಯ ಎಲ್ಲ ಕಡೆ ಅಸ್ಥಿ ವಿಸರ್ಜನೆ ಕ್ರಿಯೆ ಮಾಡುವುದರಿಂದ ಅರೆಬೆಂದ ಮೂಳೆಗಳು, ಬಟ್ಟೆಗಳು, ಪ್ಲಾಸ್ಟಿಕ್‌ಗಳು, ಕೆಲವು ಹಾನಿಕಾರಕವಾದ ವಸ್ತುಗಳನ್ನು ಕಾವೇರಿ ನದಿಯಲ್ಲಿ ಚೆಲ್ಲುತ್ತಾರೆ. ಅದರಿಂದ ಕಾವೇರಿ ನದಿ ಮಲಿನವಾಗುತ್ತಿದೆ. ಮಾಲಿನ್ಯಕರವಾದ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲಕ್ಷಾಂತರ ಜನ-ಜಾನುವಾರುಗಳು, ಪಕ್ಷಿಗಳು, ಜಲಜಂತುಗಳು ಮಲಿನ ನೀರನ್ನು ಕುಡಿದು ಆರೋಗ್ಯ ಹದಗೆಡುತ್ತಿದೆ. ಕಾವೇರಿ ನದಿಯನ್ನು ಸಂರಕ್ಷಿಸಬೇಕಾದದ್ದು ನಮ್ಮೆಲ್ಲರ ಜವಾಬ್ದಾರಿ ಹಾಗೂ ಹೊಣೆಯಾಗಿದೆ. ಆದ್ದರಿಂದ ಜಿಲ್ಲಾಡಳಿತ, ತಾಲೂಕು ಆಡಳಿತ, ಜಲಸಂಪನ್ಮೂಲ ಇಲಾಖೆ ಈಗಲಾದರೂ ಎಚ್ಚೆತ್ತು ಅಸ್ಥಿ ವಿಸರ್ಜನೆ ಕಾರ್ಯವನ್ನು ಕಾನೂನಾತ್ಮಕವಾಗಿ ನಿರ್ಬಂಧಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಪ್ರತಿಯೊಬ್ಬರಿಗೂ ಕಾನೂನು ಅರಿವು ಅಗತ್ಯ: ನ್ಯಾ. ಎಂ ಭೃಂಗೇಶ್

“ಅಸ್ಥಿ ವಿಸರ್ಜನೆ ಕ್ರಿಯೆ ವೇಳೆ ಕಾವೇರಿ ನದಿಗೆ ಯಾವುದೇ ರೀತಿಯ ಮಾಲಿನ್ಯವಾಗದಂತೆ ಷರತ್ತುಗಳನ್ನು ವಿಧಿಸಬೇಕು. ಮೂಲ ಸ್ಥಳಗಳಲ್ಲಿ ಮಾತ್ರ ಅವಕಾಶ ಕಲ್ಪಿಸಬೇಕು. ಬೇರೆ ಬೇರೆ ಸ್ಥಳಗಳನ್ನು ನಿಷೇಧಿಸಬೇಕು. ನದಿಗೆ ಹಾನಿ ಹಾಗೂ ಮಾಲಿನ್ಯ ಮಾಡಿದವರ ವಿರುದ್ಧ ದಾವೆ ಹೂಡಲು ಅವಕಾಶ ಕಲ್ಪಿಸುವಂತೆ ಸರ್ಕಾರ ಕ್ರಮಕೈಗೊಳ್ಳಬೇಕು. ಸರ್ಕಾರ ಕಾನೂನಾತ್ಮಕವಾದ ಮಾರ್ಗಸೂಚಿಗಳನ್ನು ಶೀಘ್ರವೇ ರೂಪಿಸಬೇಕು” ಎಂದು ಆಗ್ರಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...