ಮಂಡ್ಯ | ಬೀದಿ ನಾಯಿಗಳ ದಾಳಿಗೆ ಬಡರೈತನ ಮೇಕೆಗಳು ಬಲಿ

Date:

ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಮತ್ತಿಘಟ್ಟ ಗ್ರಾಮದಲ್ಲಿ ಬೀದಿ ನಾಯಿಗಳ ದಾಳಿಗೆ ಬಡರೈತನ ಮೇಕೆಗಳು ಬಲಿಯಾಗಿರುವ ಘಟನೆ ನಡೆದಿದೆ.

ಘಟನೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಬಡರೈತ ಕುಮಾರ್ ಸೂಕ್ತ ಪರಿಹಾರಕ್ಕಾಗಿ ಸರ್ಕಾರಕ್ಕೆ ಮನವಿ ಮಾಡಿದ್ದು, “ಬೀದಿ ನಾಯಿಗಳ ಹಾವಳಿ ಹೆಚ್ಚಿದ್ದು, ಇದರಿಂದ ದಿನೇ ದಿನೆ ತೊಂದರೆಯಾಗುತ್ತಿದೆ. ಕಷ್ಟಪಟ್ಟು ಸಾಕಿದ್ದ ಎಂಟು ಮೇಕೆ ಮರಿಗಳು ಬೀದಿ ನಾಯಿಗಳಿಂದ ಸತ್ತಿವೆ. ಈಗೇನು ಮಾಡಬೇಕೆಂದು ದಿಕ್ಕೇ ತೋಚುತ್ತಿಲ್ಲ” ಎಂದು ಅಳಲು ತೋಡಿಕೊಂಡರು.

ಸಮಾಜ ಸೇವಕ ಆರ್‌ಟಿಒ ಮಲ್ಲಿಕಾರ್ಜುನ್ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲಿಸಿ ರೈತ ಕುಮಾರ್ ಅವರಿಗೆ ಆರ್ಥಿಕ ಧನಸಹಾಯದ ಜತೆಗೆ ಆತ್ಮಸ್ಥೈರ್ಯ ತುಂಬುವ ಮೂಲಕ ಮಾನವೀಯತೆ ಮೆರೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮದ ಮುಖಂಡ ಬಸವೇಗೌಡ ಮಾತನಾಡಿ, “ಹಲವು ವರ್ಷಗಳಿಂದ ನಮ್ಮ ಗ್ರಾಮದ ಕುಮಾರ್ ಅವರು ಮೇಕೆ ಸಾಗಾಣಿಕೆ ಮಾಡುತ್ತ ಜೀವನ ಸಾಗಿಸುತ್ತಿದ್ದು, ಬೀದಿ ನಾಯಿಗಳ ಹಾವಳಿಯಿಂದ ಎಂಟು ಮೇಕೆಗಳು ಸಾವಿಗೀಡಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ರಾಮದಲ್ಲಿ ಪದೇಪದೆ ಬೀದಿ ನಾಯಿಗಳು, ಜನರ ಮೇಲೆ, ರಾಸುಗಳ ಮೇಲೆ ದಾಳಿಮಾಡುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳು ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಿ ಬಡ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆ ಈಡೇರಿಸುವಂತೆ‌ ಕಸವನಹಳ್ಳಿ ರಮೇಶ್ ಆಗ್ರಹ

ಗ್ರಾಮ ಪಂಚಾಯಿತಿ ಸದಸ್ಯೆ ರಮ್ಯ ಸುರೇಶ್, ಮಾಜಿ ಸದಸ್ಯೆ ಲತಾ ವಿಶ್ವನಾಥ್, ಕುಮಾರ್, ಬಸವೇಗೌಡ, ರಾಜೇಗೌಡ, ರಂಗೇಗೌಡ, ಕುಮಾರ್ ಗೌಡ, ಸತೀಶ್, ಗೌರಮ್ಮ, ರಾಜೇಗೌಡ, ಮಹೇಶ್, ರೈತ ಕುಮಾರ್, ಗಂಜಿಗೆರೆ ಮಹೇಶ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...