ಮಂಡ್ಯ | ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ರೈತಸಂಘದಿಂದ ಪ್ರತಿಭಟನೆ

Date:

ಮಂಡ್ಯ ಪಟ್ಟಣದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಜನಪರ ಸಂಘಟನೆಗಳು ಕೆ.ಆರ್.ಎಸ್ ಅಣೆಕಟ್ಟೆಯ ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಮುಖಂಡ ಹುಲ್ಲೇಗೆರೆ ಹರೀಶ್, “ಟ್ರಯಲ್ ಬ್ಲಾಸ್ಟಿನ ಉದ್ದೇಶ ಸರ್ಕಾರ ಹೇಳುವಂತೆ ಮೇಲ್ನೋಟಕ್ಕೆ ಗಣಿಗಾರಿಕೆಗೆ ಬಗ್ಗೆ ತೀರ್ಮಾನ ಮಾಡಲು ಅಲ್ಲ. ಡಿಸ್ನಿಲ್ಯಾಂಡ್ ಯೋಜನೆಯನ್ನು ಜಾರಿ ಮಾಡಲು ತೆರೆಮರೆಯಲ್ಲಿ ಸಿದ್ದತೆ ನಡೆಸುವಂತೆ ಕಾಣುತ್ತಿದೆ” ಎಂದು ಆರೋಪಿಸಿದರು.

ಅಣೆಕಟ್ಟು ಸುರಕ್ಷತಾ ಕಾಯಿದೆ ಜಾರಿ ಮಾಡುವಂತೆ ಬೋರಾಪುರ ಶಂಕರೇಗೌಡ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

IMG 20240705 WA0615

ಕೆ.ಆರ್.ಎಸ್.ಅಣೆಕಟ್ಟೆಯ 20.ಕಿ.ಮೀ.ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಷೇಧಿಸಬೇಕು ಹಾಗೂ 2021ರ ಅಣೆಕಟ್ಟು ಸುರಕ್ಷತಾ ಮಸೂದೆ ಅನ್ವಯ ತಾಂತ್ರಿಕ ಪರಿಣಿತರ ಸಮಿತಿ ರಚಿಸಬೇಕು ಎಂದು ರೈತರು ಒತ್ತಾಯಿಸಿದರು.

ಅಕ್ರಮ ಗಣಿಗಾರಿಕೆಯ ಲಾಭಗಳ ಮೇಲೆ ಕಣ್ಣಿಟ್ಟಿರುವ ಗಣಿ ಮಾಲೀಕರು ಪರವಾನಗಿಯಲ್ಲಿ ವಿಧಿಸಿರುವ ನಿಯಮಗಳನ್ನು ಉಲ್ಲಂಘಿಸಿ, ಕಳ್ಳತನದಿಂದ ಗಣಿಗಾರಿಕೆ ಚಟುವಟಿಕೆಗಳನ್ನು ಮುಂದುವರೆಸಿದ್ದಾರೆ ಹಾಗೂ ತಮ್ಮ ಗಣಿಗಾರಿಕೆಯನ್ನು ತಡೆ ಇಲ್ಲದೆ ನಡೆಸಲು ನ್ಯಾಯಾಲಯದ ನೆರವು ಪಡೆಯುವ ದುಸ್ಸಾಹಸ ಮಾಡುತ್ತಿದ್ದಾರೆ. ಇದರ ಪರಿಣಾಮವಾಗಿ ಟ್ರಯಲ್ ಬ್ಲಾಸ್ಟ್ ನಡೆಸಲು ಜಿಲ್ಲಾಡಳಿತ ಮುಂದಾಗಿರುವುದು ಖಂಡನೀಯ ವಿಚಾರ ಎಂದು ಪ್ರತಿಭಟನಾ ನಿರತ ರೈತ ಮುಖಂಡರು ತಿಳಿಸಿದರು.

ಮಂಡ್ಯ ಜಿಲ್ಲೆ ಹಾಗೂ ಕರ್ನಾಟಕದ ಕೋಟ್ಯಾಂತರ ಜನರ ಜೀವನಾಡಿ ಆಗಿರುವ ಕೆ ಆರ್ ಎಸ್ ರಕ್ಷಣೆಗಾಗಿ ಅಕ್ರಮ ಗಣಿಗಾರಿಕೆ ಚಟುವಟಿಕೆಗಳನ್ನು ಶಾಶ್ವತವಾಗಿ ನಿಷೇಧಿಸಬೇಕು. ನಿರಂತರ ಹೋರಾಟಗಳನ್ನು ನಡೆಸುತ್ತಿದ್ದರೂ ಸರ್ಕಾರ ಮತ್ತು ಜಿಲ್ಲಾಡಳಿತ ಕೋಟ್ಯಂತರ ಜನರ ಆತಂಕವನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿದರು.

ರಾಜ್ಯ ಕರ್ನಾಟಕ ರೈತ ಸಂಘದ ಬಡಗಲಪುರ ನಾಗೇಂದ್ರ, ಸುನೀತಾ ಪುಟ್ಟಣಯ್ಯ, ಎ.ಎಲ್.ಕೆಂಪೇಗೌಡ, ಆಣಿಗೆರೆ ಮಲ್ಲಯ್ಯ, ಶಂಕರಯ್ಯ ತುಮಕೂರು, ಪ್ರಸನ್ನಗೌಡ, ಬೋರಾಪುರ ಶಂಕರೇಗೌಡ, ಕೆ.ಟಿ.ಗೋವಿಂದೇಗೌಡ, ಕೆ ಆರ್ ಪೇಟೆ ಜಯರಾಮಣ್ಣ, ರವೀಂದ್ರ, ಗೆಜ್ಜಲಗೆರೆ ಶಂಕರಯ್ಯ, ಸಿಐ‌ಟಿಯುವಿನ ಕುಮಾರಿ, ಮಹಿಳಾ ಮುನ್ನಡೆಯ ಪೂರ್ಣಿಮಾ, ಕೋಕಿಲ ಪಾಂಡವಪುರ, ಪ್ರಿಯಾ ರಮೇಶ್, ಕನ್ನಡ ಪರ ಸಂಘಟನೆಗಳ ಮುಖಂಡರು ಹಾಜರಿದ್ದರು.

ರೈತ ಸಂಘದ ಒತ್ತಾಯ ಹೀಗಿದೆ;

1. ಅಣೆಕಟ್ಟು ಸುರಕ್ಷತಾ ಮಸೂದೆ 2021 ರ ಪ್ರಕಾರ ಕೂಡಲೇ ಅಣೆಕಟ್ಟು ಸುರಕ್ಷತಾ ಸಮಿತಿ ರಚಿಸುವುದು.

2. ಪಾರಂಪರಿಕ ಹಾಗೂ ಹಳೆಯ ಕಟ್ಟಡವಾದ ಕೆ ಆರ್ ಎಸ್ ರಕ್ಷಣೆಗಾಗಿ ಟ್ರಯಲ್ ಬ್ಲಾಸ್ಟ್ ನಡೆಸುವುದನ್ನು ಸ್ಥಗಿತಗೊಳಿಸುವುದು.

3.ಅರಣ್ಯ, ಪರಿಸರ, ಸ್ಪೋಟಕ ಕಾಯ್ದೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ನಡೆಸಲಾಗಿರುವ ಗಣಿಗಾರಿಕೆ ಚಟುವಟಿಕೆಗಳಿಗೆ ಗಣಿ ಮಾಲೀಕರಿಂದ ಬಾಕಿ ಇರುವ ರಾಜಧನವನ್ನು ಕೂಡಲೇ ವಸೂಲಿ ಮಾಡುವಂತೆ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...