ಲಿಂಗಾನುಪಾತದಲ್ಲಿ ಮಂಡ್ಯಕ್ಕೆ ಕಡೆಯ ಸ್ಥಾನ; ಹೆಣ್ಣು ಭ್ರೂಣ ಹತ್ಯೆ ಕಾರಣ?

Date:

ಲಿಂಗಾನುಪಾತದಲ್ಲಿ ಮಂಡ್ಯವು ಅತೀ ಹಿಂದುಳಿದಿದೆ. ಮಂಡ್ಯದಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಸಂಖ್ಯೆಯಲ್ಲಿ ಭಾರೀ ವ್ಯತ್ಯಾಸವಿದೆ ಎಂಬುದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಕೆಎಸ್‌ಸಿಪಿಸಿಆರ್) ಬಿಡುಗಡೆ ಮಾಡಿರುವ ವರದಿಯಿಂದ ಬಹಿರಂಗವಾಗಿದೆ. 2023ನೇ ವರ್ಷಕ್ಕೆ ಸಂಬಂಧಿಸಿದ ಅಂಕಿಅಂಶದಲ್ಲಿ ಜಿಲ್ಲೆಯಲ್ಲಿ 1,000 ಪುರುಷರಿಗೆ 887 ಮಹಿಳೆಯರಿದ್ದಾರೆ ಎಂದು ವರದಿ ವಿವರಿಸಿದೆ.

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆಯ ಎಸ್ ಮಾದೇಶ್ವರನ್ ಮತ್ತು ಬಿಪಿ ವಾಣಿ ಅವರು ಕರ್ನಾಟಕದಲ್ಲಿ ಲಿಂಗಾನುಪಾತದ ಅಧ್ಯಯನ ನಡೆಸಿದ್ದಾರೆ. ಅವರ ಅಧ್ಯಯನ ವರದಿಯನ್ನು ಕೆಎಸ್‌ಸಿಪಿಸಿಆರ್‌ ಬಿಡುಗಡೆ ಮಾಡಿದೆ. “ಮಂಡ್ಯ, ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ ಹಾಗೂ ಕಲಬುರಗಿ ಸೇರಿದಂತೆ ಹಲವಾರು ಜಿಲ್ಲೆಗಳು ಕಡಿಮೆ ಲಿಂಗಾನುಪಾತವನ್ನು ಹೊಂದಿವೆ. ಈ ಜಿಲ್ಲೆಗಳು ಜನನದ ಸಮಯದಲ್ಲಿ 900ಕ್ಕಿಂತ ಕಡಿಮೆ ಲಿಂಗಾನುಪಾತವನ್ನು ಹೊಂದಿರುವ ಜಿಲ್ಲೆಗಳಾಗಿವೆ” ಎಂದು ವರದಿ ಹೇಳಿದೆ.

ಮಂಡ್ಯ ಜಿಲ್ಲೆಯಲ್ಲಿ 2023ರಲ್ಲಿ ಲಿಂಗಾನುಪಾತವು 887 ಆಗಿತ್ತು. ಅದಕ್ಕೂ ಹಿಂದಿನ – 2020ರಲ್ಲಿ 884, 2021ರಲ್ಲಿ 873 ಹಾಗೂ 2022ರಲ್ಲಿ 877 ಆಗಿತ್ತು ಎಂಬುದನ್ನು ವರದಿ ವಿವರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2023ರಲ್ಲಿ ಬಾಗಲಕೋಟೆ 919, ಬೀದರ್‌ 920, ಕಲಬುರಗಿ 910 ಹಾಗೂ ಚಿಕ್ಕಬಳ್ಳಾಪುರ 937 ಲಿಂಗಾನುಪಾತವನ್ನು ಹೊಂದಿವೆ. ಈ ಜಿಲ್ಲೆಗಳಲ್ಲಿಯೂ 2022ರಲ್ಲಿ ಲಿಂಗಾನುಪಾತವು 900ಕ್ಕಿಂತ ಕಡಿಮೆಯಾಗಿತ್ತು” ಎಂದು ವರದಿ ತಿಳಿಸಿದೆ.

ಭಾರತದ ಲಿಂಗಾನುಪಾತವು ಜನನದ ಸಮಯದಲ್ಲಿ 1,000 ಪುರುಷರಿಗೆ 950 ಮಹಿಳೆಯರನ್ನು ಹೊಂದಿರಬೇಕೆಂಬ ಗುರಿಯನ್ನು ಹೊಂದಿದೆ. ಆದಾಗ್ಯೂ, ಈ ಪ್ರಮಾಣದ ಲಿಂಗಾನುಪಾತವನ್ನು ಸಾಧಿಸಲಾಗಿಲ್ಲ. ಕೇರಳ ಮಾತ್ರವೇ ಲಿಂಗಾನುಪಾತದಲ್ಲಿ ಪ್ರಗತಿ ಸಾಧಿಸಿದೆ. ಅಲ್ಲಿ, 1,000 ಪುರುಷರಿಗೆ 1,080 ಮಹಿಳೆಯರಿದ್ದಾರೆ.

ಲಿಂಗಾನುಪಾತದಲ್ಲಿನ ಭಾರೀ ವ್ಯತ್ಯಾಸಕ್ಕೆ ಹೆಣ್ಣು ಭ್ರೂಣ ಹತ್ಯೆ ಪ್ರಮುಖ ಕಾರಣವೆಂದು ಹೇಳಲಾಗಿದೆ. ಇತ್ತೀಚೆಗೆ, ಮಂಡ್ಯದಲ್ಲಿ ಹೆಣ್ಣು ಭ್ರೂಣ ಪತ್ತೆಯ ಜಾಲ ಬೆಳಕಿಗೆ ಬಂದಿತ್ತು. ಇಂತಹ ಜಾಲಗಳಿಂದ ಹೆಣ್ಣು ಭ್ರೂಣ ಹತ್ಯೆಗಳು ಹೆಚ್ಚಾಗಿ ನಡೆದಿವೆ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...