ಮಂಡ್ಯ | ಸಕ್ಕರೆ ಕಾರ್ಖಾನೆಗಳನ್ನು ಕೂಡಲೇ ಆರಂಭ ಮಾಡುವಂತೆ ಆಗ್ರಹಿಸಿ ರೈತ ಮುಖಂಡರಿಂದ ಮನವಿ

Date:

ಮಂಡ್ಯ ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳನ್ನು ಕೂಡಲೇ ಆರಂಭ ಮಾಡಿ, ಕಬ್ಬು ಅರೆಯುವ ಕೆಲಸ ಪ್ರಾರಂಭ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ತಮ್ಮ ಮನವಿಯಲ್ಲಿ, “ಈಗಾಗಲೇ ಬರದಿಂದ ತತ್ತರಿಸಿರುವ ರೈತರು ಅಲ್ಪಸ್ವಲ್ಪ ಉಳಿಸಿ ಬೆಳೆಸಿಕೊಂಡ ಕಬ್ಬು ಸತ್ವ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಕಳೆದ ಹಂಗಾಮಿನಲ್ಲಿ ಕಾರ್ಖಾನೆಗಳು ಜನವರಿ ತಿಂಗಳಲ್ಲಿ ಕಬ್ಬು ಅರೆಯುವ ಕೆಲಸ ಸ್ಥಗಿತಗೊಳಿಸಿದ್ದವು. ನಾಲಾ ಅಚ್ಚುಕಟ್ಟು ಪ್ರದೇಶದ ಕಬ್ಬು, ನಿರೀಕ್ಷೆಗೆ ಮೀರಿ ಒಣಗಿದ ಪರಿಣಾಮ ಇಳುವರಿ ಕುಂಠಿತವಾಗುತ್ತಿದೆ” ಎಂದು ತಿಳಿಸಿದ್ದಾರೆ.

“ಕೊಳವೆ ಬಾವಿಗಳು ಬತ್ತಿದ್ದು, ಕೆರೆಗಳು ಒಣಗಿ ಹೋಗಿರುವುದರಿಂದ ಕಬ್ಬು ಬೆಳೆಗಾರರ ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ಹೀಗಿರುವಾಗ ಇನ್ನೂ ತಡಮಾಡಿ ಕಾರ್ಖಾನೆ ಪ್ರಾರಂಭಿಸಿದರೆ ಗಾಯದ ಮೇಲೆ ಬರೆ ಹಾಕಿದಂತೆ ಆಗುತ್ತದೆ. ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ನಾಲೆ ನೀರು ಬಿಡಲು ಸಿದ್ದತೆ ಆಗಿದೆ. ಕಾರ್ಖಾನೆಗಳಿಗೆ ನೀರು ಸೌಲಭ್ಯ ದೊರೆಯುತ್ತದೆ ಮತ್ತು ಇಳುವರಿ ಇಲ್ಲದ ಕಬ್ಬು ಕಟಾವು ಮಾಡಿ ಮುಂಗಾರು ಸಿದ್ದತೆ ಮಾಡಿಕೊಳ್ಳುವ ರೈತರಿಗೆ ಅನುಕೂಲ ಆಗುವಂತೆ ಎಲ್ಲ ಅಂಶಗಳನ್ನು ಗಮನಿಸಿಕೊಂಡು ಸಕ್ಕರೆ ಕಾರ್ಖಾನೆಗಳನ್ನು ಪ್ರಾರಂಭ ಮಾಡಲು ಜಿಲ್ಲಾಡಳಿತ ಅನುವು ಮಾಡಿಕೊಡಬೇಕು” ಎಂದು ರೈತ ಸಂಘ ಮನವಿಯಲ್ಲಿ ಆಗ್ರಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾಧಿಕಾರಿ ಪರವಾಗಿ ರೈತರ ಮನವಿಯನ್ನು ಅಪಾರ ಜಿಲ್ಲಾಧಿಕಾರಿ ಡಾ.ಹೆಚ್ ಹೆಲ್ ನಾಗರಾಜು ಅವರು ಸ್ವೀಕರಿಸಿದರು.

ರಸಗೊಬ್ಬರಗಳನ್ನು ಪೂರೈಸುವಂತೆ ಮನವಿ

ಮಂಡ್ಯ ಜಿಲ್ಲೆಯಲ್ಲಿ ಮುಂಗಾರು ಬೆಳೆ ಸಿದ್ದತೆ ಈಗಾಗಲೇ ಪ್ರಾರಂಭವಾಗಿದ್ದು, ನಾಲೆಗಳಲ್ಲಿ ನೀರಿನ ನಿರೀಕ್ಷೆ ಇದೆ. ಹೀಗಾಗಿ ರೈತರು ಆಶಾದಾಯಕವಾಗಿದ್ದಾರೆ. ಆದ್ದರಿಂದ ಕೃಷಿಪರಿಕರಗಳು ರೈತರಿಗೆ ಸಿಗುವಂತೆ ಮತ್ತು ಈ ಬಾರಿ ಉಚಿತ ಬಿತ್ತನೆ ಬೀಜಗಳನ್ನು ಕೊಡುವಂತೆ ಮತ್ತು ರಸಗೊಬ್ಬರಗಳನ್ನು ಪೂರೈಸುವಂತೆ ಗುಣಮಟ್ಟದ ಔಷಧಿಗಳನ್ನು ಕೊಡುವಂತೆ ಮಂಡ್ಯ ಜಿಲ್ಲೆಯ ಕೃಷಿ ಜಂಟಿ ನಿರ್ದೇಶಕರಾದ ಅಶೋಕ್ ಅವರಿಗೆ ರೈತ ಮುಖಂಡರು ಮನವಿ ಸಲ್ಲಿಸಿದರು.

ರೈತ ಸಂಘ 1 1

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...