ಮಂಡ್ಯ | ಪಟಾಕಿಗೆ ಹೆಚ್ಚು ಮಹತ್ವ ನೀಡದೆ ಪರಿಸರ ಉಳಿಸಿ: ಜಯ ಕರ್ನಾಟಕ ಪರಿಷತ್‌ ಮುಖಂಡ ನಾರಾಯಣ್‌

Date:

ಪಟಾಕಿ ಸಿಡಿಸುವುದರಿಂದ ಪರಿಸರಕ್ಕೆ ಹಾನಿ ಉಂಟಾಗುತ್ತದೆ. ಜನರು ಜಾಗೃತರಾಗಿ ಮಣ್ಣಿನ ಹಣತೆಯನ್ನು ಹಚ್ಚುವ ಮೂಲಕ ದೀಪಾವಳಿ ಹಬ್ಬ ಆಚರಿಸಿ ಪರಿಸರ ಉಳಿಸೋಣ ಎಂದು ಜಯ ಕರ್ನಾಟಕ ಪರಿಷತ್‌ ರಾಜ್ಯಾಧ್ಯಕ್ಷ ನಾರಾಯಣ್ ಕರೆ ನೀಡಿದರು.

ಅವರು ಗುರುವಾರ ನಗರದ ಬಾಲ ಭವನದಲ್ಲಿ ಜಯ ಕರ್ನಾಟಕ ಪರಿಷತ್‌‌ ವತಿಯಿಂದ ನಡೆದ ಮಣ್ಣಿನ ಹಣತೆ ಹಚ್ಚಿ ಜಾಗೃತಿ ಮೂಡಿಸುವ ಪಟಾಕಿ- ಬಿಟ್ಹಾಕಿ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಪಟಾಕಿ ಸಿಡಿಸುವುದರಿಂದ ಶಬ್ಧ ಮಾಲಿನ್ಯ, ವಾಯು ಮಾಲಿನ್ಯ ಉಂಟಾಗುತ್ತದೆ. ರಾಸಾಯನಿಕ ವಸ್ತು ಬಳಕೆಯಿಂದ ಭೂಮಿಗೂ ಹಾನಿ ಉಂಟಾಗುತ್ತದೆ. ಶಬ್ದ ಮಾಲಿನ್ಯದಿಂದ ಪಕ್ಷಿಗಳಿಗೆ ತಮ್ಮ ಗೂಡಿನಲ್ಲಿ ಮೊಟ್ಟೆ ಮರಿಗಳನ್ನು ಬಿಟ್ಟು ಬೇರೆ ಕಡೆ ಅನಿವಾರ್ಯವಾಗಿ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರಿ ಅಧಿಕಾರಿಗಳು ನೆಪ ಮಾತ್ರಕ್ಕೆ ಹಸಿರು ಪಟಾಕಿ ಸಿಡಿಸಿ ಎನ್ನುತ್ತಾರೆ. ಮಾರುಕಟ್ಟೆಯಲ್ಲಿ ರಾಸಾಯನಿಕ ವಸ್ತು ಬಳಸಿದ ಪಟಾಕಿ ಮಾರಾಟವಾಗುತ್ತಿದೆ. ಇದಕ್ಕೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ವಾಯು ಮಾಲಿನ್ಯದಿಂದ ಉಸಿರಾಟದ ಸಮಸ್ಯೆಗಳಿಗೆ ವಯಸ್ಸಿನ ಅಂತರವಿಲ್ಲದೆ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಪಟಾಕಿ ಸಿಡಿತದಿಂದ ಹಲವು ಜನರ ಕಣ್ಣುಗಳಿಗೆ ಹಾನಿ ಉಂಟಾಗುತ್ತಿದೆ. ಜನರು ಜಾಗೃತರಾಗಿ ಮುಂದಾಗುವ ಅನಾಹುತವನ್ನು ತಪ್ಪಿಸಬಹುದಾಗಿದೆ ಎಂದು ಜನರಿಗೆ ಜಾಗೃತಿ ಮೂಡಿಸಿದರು.

ಇದನ್ನು ಓದಿದ್ದೀರಾ? ಉಡುಪಿ | ಡಿಕ್ಕಿ ಹೊಡೆದು ದ್ವಿಚಕ್ರ ವಾಹನದ ಮೇಲೆಯೇ ಬಿದ್ದ ಮಣ್ಣು ತುಂಬಿದ್ದ ಲಾರಿ: ಸ್ಕೂಟಿಯಲ್ಲಿದ್ದ ಮಹಿಳೆಯ ರಕ್ಷಣೆ

ಇದೇ ಸಂದರ್ಭದಲ್ಲಿ ಬಾಲ ಭವನದ ಆವರಣದಲ್ಲಿ ಜೈ ಕರ್ನಾಟಕ ಪರಿಷತ್ ಕಾರ್ಯಕರ್ತರು ಹೂವಿನ ಅಲಂಕಾರ ಮಾಡಿ ಮಣ್ಣಿನ ಹಣತೆ ಹಚ್ಚುವ ಮೂಲಕ ದೀಪಾವಳಿ ಜಾಗೃತಿ ಕಾರ್ಯಕ್ರಮ ಆಚರಿಸಿದರು.

ಕಾರ್ಯಕ್ರಮದಲ್ಲಿ ಜಯ ಕರ್ನಾಟಕ ಪರಿಷತ್ತಿನ ಇಂದಿರಾ, ಸವಿತಾ, ಮಂಜುಳಾ, ತನುಜಾ, ಸುಶೀಲಮ್ಮ, ವಿಜಯಲಕ್ಷ್ಮಿ, ಕೆಂಪೇಗೌಡ, ಪ್ರಸಾದ್, ನಾರಾಯಣಸ್ವಾಮಿ, ಸತೀಶ್, ಪುಟ್ಟಸ್ವಾಮಿ, ರಾಜು, ಲಲಿತ ರಾಜಕುಮಾರ್, ಬಸವರಾಜ್ ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...