ಮಂಡ್ಯ | ಸೆ.8ರಂದು ಪೂರ್ಣಚಂದ್ರ ತೇಜಸ್ವಿ-86 ರ ‘ಕಾಡು ಹಕ್ಕಿಯ ನೆನಪಲ್ಲಿ ಒಂದು ದಿನ’ ಕಾರ್ಯಕ್ರಮ

Date:

ಚಿತ್ರಕೂಟ ಬಳಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ‘ಪೂರ್ಣಚಂದ್ರ ತೇಜಸ್ವಿ-86’ ರ ಅಂಗವಾಗಿ ‘ಕಾಡು ಹಕ್ಕಿಯ ನೆನಪಲ್ಲಿ ಒಂದು ದಿನ ಕಾರ್ಯಕ್ರಮ’ವನ್ನು ಸೆಪ್ಟೆಂಬರ್ 8ರಂದು ಮಂಡ್ಯದ ಅಂತರಂಗ ಅಡಿಟೋರಿಯಂನಲ್ಲಿ ಆಯೋಜಿಸಲಾಗಿದೆ.

ಭಾನುವಾರ ಮಧ್ಯಾಹ್ನ 2ರಿಂದ ಸಂಜೆ 7.30ರವರೆಗೆ ನಗರದ ವಿ.ವಿ.ರಸ್ತೆಯ ಜನತಾ ಬಜಾ‌ರ್ ಕಾಂಪ್ಲೆಕ್ಸ್‌ನ ಅಂತರಂಗ ಆಡಿಟೋರಿಯಂನಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ, ವಿಜ್ಞಾನ ವಿಸ್ಮಯಗಳಿಂದ ಪರಿಸರ ಫೋಟೋಗ್ರಫಿಯ ತನಕ ಮಾತುಕತೆ’ ಎಂಬ ಹೊಸ ಬಗೆಯ ಸಂವಾದ ಕೂಡ ಆಯೋಜಿಸಲಾಗಿದೆ. ಲೀಲಾ ಅಪ್ಪಾಜಿ ಸಂಗ್ರಹಿಸಿರುವ ತೇಜಸ್ವಿ ಫೋಟೋ ಪ್ರದರ್ಶನದ ಉದ್ಘಾಟನೆಯನ್ನು ರವೀಂದ್ರ ಭಟ್ ನೆರವೇರಿಸಲಿದ್ದಾರೆ.

ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜು, ಎಚ್‌.ಎಸ್.ರೋಹಿಣಿ ಅವರ ಹೊಸ ಕೃತಿ ‘ವಿಸ್ಮಯ ತೇಜಸ್ವಿ’ ಪುಸ್ತಕ ಬಿಡುಗಡೆ ಮಾಡಲಿದ್ದು, ಜಿಲ್ಲಾಧಿಕಾರಿ ಕುಮಾರ್, ಕಸಾಪದ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪ್ರಕಾಶ ಮೂರ್ತಿ ಪಾಲ್ಗೊಳ್ಳಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 09 07 at 3.05.56 PM

‘ತೇಜಸ್ವಿ ಮತ್ತು ತಂತ್ರಾಂಶ’ ಕನ್ನಡ ಕಟ್ಟುವ ಹೊಸ ಬಗೆಯ ಮೊದಲ ಸಂವಾದದ ವಿಷಯವನ್ನು ಮಧ್ಯಾಹ್ನ 2.30 ರಿಂದ 3.20 ರವರೆಗೆ ಭಾಷಾ ವಿಜ್ಞಾನಿ ಮಿಥುನ್ ಮಂಡಿಸುವರು. ಶಿಕ್ಷಕಿ ಸಿ.ಎಚ್.ಮೇಘನಾ ಮತ್ತು ತಂತ್ರಾಂಶ ತಜ್ಞ ಹೆಗ್ಗೆರೆ ರಾಜ್ ಸಂವಾದ ನಡೆಸಿಕೊಡಲಿದ್ದಾರೆ.

‘ಕೃಷಿ: ಇಂದಿನ ಸಂಘರ್ಷ ನಾಳೆಯ ಭರವಸೆ’ ಎಂಬ ವಿಷಯವನ್ನು ಮಧ್ಯಾಹ್ನ 3.30 ರಿಂದ ಸಂಜೆ 4.20 ರವರೆಗೆ ಸಹಜ ಕೃಷಿಕ ಪ್ರಶಾಂತ್ ಜಯರಾಮ್ ಮಂಡಿಸಲಿದ್ದಾರೆ. ‘ಪರಿಸರದ ಕತೆ ನಾಗೇಶ ಹೆಗಡೆ ಜೊತೆ’ ಜೀವಸಂಕುಲದ ಉಳಿವಿಗೆ ಬೇಕು ವಿವೇಕ ಮಾರ್ಗ ವಿಷಯದಲ್ಲಿ ಸಂಜೆ 4.30 ರಿಂದ 5.30 ರವರೆಗೆ ಸಂವಾದಕರಾಗಿ ಕತ್ತರಘಟ್ಟ ವಾಸು, ಸೋಮವರದ ಹಾಗೂ ರೋಹಿತ್ ಅಗಸರಹಳ್ಳಿ ಭಾಗವಹಿಸುತ್ತಾರೆ.

ಈ ಸುದ್ಧಿ ಓದಿದ್ದೀರಾ? ಗೌರಿ ಲಂಕೇಶ್‌ ಹತ್ಯೆಯಾಗಿ ಏಳು ವರ್ಷ: ಕುಂಟುತ್ತ ಸಾಗಿದೆ ಆರೋಪಿಗಳ ವಿಚಾರಣೆ – ಈ ದಿನ.ಕಾಮ್

ಸಂಜೆ 5.45ರಿಂದ 6.30 ರವರೆಗೆ ‘ತಬರನ ಕಥೆ ಅಂದು-ಇಂದು’ ರವೀಂದ್ರ ಭಟ್ ಒಳನೋಟಗಳು ಹಾಗೂ ಸಂಜೆ 6.30 ರಿಂದ 7 ರವರೆಗೆ ಪೂಚಂತೇ ನಾನು ಕಂಡಂತೆ- ಬಿ.ಚಂದ್ರೇಗೌಡರೊಂದಿಗೆ ಮಾತುಕತೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಲೇಖಕ ಎಂ.ವಿ.ಕೃಷ್ಣ, ಹರವು ದೇವೇಗೌಡ, ಪತ್ರಕರ್ತ ಭುಜವಳ್ಳಿ ರಾಮಚಂದ್ರು ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...