ಮಂಡ್ಯ | ‘ಗಗನಚುಕ್ಕಿ’ ಅಭಿವೃದ್ಧಿಪಡಿಸಿ ಶೀಘ್ರದಲ್ಲಿ ಜಲಪಾತೋತ್ಸವ: ಶಾಸಕ ಪಿ ಎಂ ನರೇಂದ್ರಸ್ವಾಮಿ

Date:

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶಿವನಸಮುದ್ರದ ಬಳಿಯ ಗಗನಚುಕ್ಕಿ ಜಲಪಾತ ಪ್ರವಾಸಿ ತಾಣವನ್ನು ಅಭಿವೃದ್ಧಿ ಮಾಡಿ, ಇದೇ ತಿಂಗಳಲ್ಲಿ ಜಲಪಾತೋತ್ಸವ ನಡೆಸಲಾಗುವುದು ಎಂದು ಶಾಸಕ ಪಿ ಎಂ ನರೇಂದ್ರಸ್ವಾಮಿ ತಿಳಿಸಿದ್ದಾರೆ.

ನಗರದ ಬೆಳಕವಾಡಿ ಸಮೀಪದ ಲಕ್ಷದ್ವೀಪ ಹೋಟೆಲ್‌ನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, “ಗಗನಚುಕ್ಕಿ ಜಲಪಾತೋತ್ಸವವು ಎರಡು ದಿನ ನಡೆಯಲಿದೆ. ಈ ಸಂದರ್ಭದಲ್ಲಿ ವೇದಿಕೆ ಕಾರ್ಯಕ್ರಮಗಳು, ಜಾನಪದ ಕಲೆಗಳು, ರಸಮಂಜರಿ, ಹಾಸ್ಯ ಮತ್ತು ಕಾಮಿಡಿ ಕಿಲಾಡಿಗಳು ಸೇರಿದಂತೆ ವಿವಿಧ ಸಾಂಸ್ಕೃತಿಕ ಮತ್ತು ಮನೋರಂಜನಾ ಕಾರ್ಯಕ್ರಮಗಳು ಸಾರ್ವಜನಿಕರಿಗಾಗಿ ಆಯೋಜಿಸಲಾಗುವುದು. ಜಲಪಾತೋತ್ಸವದ ದಿನಾಂಕವನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು” ಎಂದರು.

“ಮಳೆಯಿಂದ ಹಾನಿಗೊಳಗಾದ ರಸ್ತೆ ಗುಂಡಿಗಳನ್ನು ಮುಚ್ಚಿ, ವಾಹನ ಸಂಚಾರಕ್ಕೆ ಅನುಕೂಲವಾಗುವಂತೆ ಏರ್ಪಾಟು ಮಾಡಲಾಗುವುದು. ಪಾರ್ಕಿಂಗ್ ಏರ್ಪಾಡು ಬೆಳಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಊಟ, ನೀರಿನ ವ್ಯವಸ್ಥೆ, ವಿದ್ಯುತ್ ದೀಪಾಲಂಕಾರ, ಲೇಸರ್ ಶೋ ಸೇರಿದಂತೆ ವಿವಿಧ ಸೌಕರ್ಯಗಳನ್ನು ಒದಗಿಸಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವೇದಿಕೆಯಿಂದ ರೊಟ್ಟಿ ಕಟ್ಟೆಯವರೆಗೆ ರಸ್ತೆ ಬದಿಯಲ್ಲಿ ಜಾನಪದ ಸೊಗಡನ್ನು ತೋರುವ ಚಿತ್ರಗಳನ್ನು ಹಾಕಿ, ಪ್ರವಾಸಿಗರನ್ನು ಸ್ವಾಗತಿಸಲು ವಿಶಿಷ್ಟ ಫಲಕಗಳನ್ನು ನಿರ್ಮಿಸಲಾಗುವುದು” ಎಂದು ಶಾಸಕರು ಹೇಳಿದರು.

ಜಿಲ್ಲಾಧಿಕಾರಿ ಡಾ.ಕುಮಾರ್ ಮಾತನಾಡಿ, “ಈ ವರ್ಷ ಚೆನ್ನಾಗಿ ಮಳೆಯಾಗಿರುವುದರಿಂದ ಕನ್ನಂಬಾಡಿ ಜಲಾಶಯ ತುಂಬಿದೆ. ಇದು ಜಲಪಾತೋತ್ಸವ ನಡೆಸಲು ಸರಿಯಾದ ಹೊತ್ತಾಗಿದೆ. ಮಳೆಯ ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು, ಹಬ್ಬದ ದಿನಾಂಕವನ್ನು ಶೀಘ್ರದಲ್ಲೇ ನಿಗದಿ ಮಾಡಲಾಗುವುದು” ಎಂದು ತಿಳಿಸಿದರು.

“ಕೆಆರ್‌ಎಸ್‌ ಜಲಾಶಯ ತುಂಬಿದ್ದರೂ ಕೊನೆಯ ಭಾಗಕ್ಕೆ ಇನ್ನೂ ಸರಿಯಾಗಿ ನೀರು ಬಂದಿಲ್ಲ. ಅದರ ಕಡೆಗೆ ಗಮನಕೊಡದ ಚುನಾಯಿತ ಜನಪ್ರತಿನಿಧಿ ಹಾಗೂ ಅಧಿಕಾರಿಗಳು ಜಲಪಾತೋತ್ಸವ ಮಾಡಲು ಹೊರಟಿದ್ದಾರೆ. ಇದು ಏನನ್ನು ಸೂಚಿಸುತ್ತದೆ ಈ ನಡೆ ಸರಿಯಲ್ಲ. ಬೆಳೆಗೆ ನೀರು ಹರಿಸುವ ಬಗ್ಗೆ ಸ್ಪಷ್ಟ ನಿರ್ದೇಶನವಿಲ್ಲ. ಆದರೆ ಜಲಪಾತೋತ್ಸವಕ್ಕೆ ನೀರು ಹರಿಸಲಾಗುತ್ತಿದೆ” ಎಂದು ರೈತರು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ತುಂಗಭದ್ರಾ ಜಲಾಶಯ ಭರ್ತಿಗೆ 1.94 ಅಡಿ ಬಾಕಿ; ನೀರು ಹೊರಬಿಡುವ ಸೂಚನೆ ಕೊಟ್ಟ ಮಂಡಳಿ

ಈ ಸಭೆಯಲ್ಲಿ, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಸಿಇಒ ಶೇಕ್ ತನ್ವೀರ್ ಆಸೀಫ್, ಎಸಿ ಶಿವಮೂರ್ತಿ, ತಹಶೀಲ್ದಾರ್ ಎನ್ ಕೆ ಲೋಕೇಶ್, ತಾ.ಪಂ.ಇಒ ಶ್ರೀನಿವಾಸ್, ಗ್ರಾ.ಪಂ.ಅಧ್ಯಕ್ಷೆ ಮಹದೇವಮ್ಮ ಸೇರಿದಂತೆ ಹಲವು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...