ದುಬೈನಲ್ಲಿ ರಾಮನಗರದ ಸಾಮಾಜಿಕ ಹೋರಾಟಗಾರ ಕುಮಾರಸ್ವಾಮಿಗೆ ಸನ್ಮಾನ

Date:

ಅಂತಾರಾಷ್ಟ್ರೀಯ ಸಂಘಟನೆ ಹಿಂದೂ ಮುಸ್ಲಿಂ ಕ್ರಿಶ್ಚಿಯನ್ ಯುನೈಟೆಡ್ ಇದರ ಹದಿನೈದನೇ ವರ್ಷದ ವಾರ್ಷಿಕೋತ್ಸವವು‌ ಯುನೈಟೆಡ್ ಅರಬ್ ಎಮಿರೇಟ್ಸ್ ದೇಶದ ರಾಜಧಾನಿ ದುಬೈನಲ್ಲಿ ಜರುಗಿತು.

ಈ ಕಾರ್ಯಕ್ರಮದಲ್ಲಿ ರಾಮನಗರದ ಸಮಾಜಸೇವಕ ಹಾಗೂ ಜಯಕರ್ನಾಟಕ ಜನಪರ ವೇದಿಕೆ ಸಂಘಟನೆಯ ರಾಜ್ಯ ಸಲಹೆಗಾರರಾದ ಕುಮಾರಸ್ವಾಮಿ, ಹಾಗೂ ಚಿತ್ರಸಾಹಿತಿ, ಕವಿ, ನಿರ್ಮಾಪಕ ನಾಗೇಂದ್ರ ಪ್ರಸಾದ್ , ಮತ್ತು ದಲಿತಪರ ಹೋರಾಟಗಾರರಾದ ಎಂ ಎನ್ ಆರ್ ರವೇಶ್ ಅವರಿಗೆ ಅಂತಾರಾಷ್ಟ್ರೀಯ ಶಾಂತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ದುಬೈಯ ಕರಾಮಾದಲ್ಲಿನ ಪಂಚತಾರಾ ಹೋಟೆಲ್ ಪಾರ್ಕ್ ರೆಜಿಸ್‌ನಲ್ಲಿ ಜರಗಿದ ವರ್ಣರಂಜಿತ ಸಮಾರಂಭದಲ್ಲಿ ಇಪ್ಪತ್ತೆರಡು ದೇಶಗಳ ವಿವಿಧ ಪ್ರತಿನಿಧಿಗಳೊಂದಿಗೆ ಭಾರತದ ನಾಲ್ವರಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದುಬೈ ದೇಶದ ರಾಜಮನೆತನದ ಹಿಸ್ ಎಕ್ಸೆಲೆನ್ಸಿ ಮುಹಮ್ಮದ್ ಬಿನ್ ಅಬ್ದುಲ್ಲಾ ಅಲ್ ಮಝರೂಕಿ , ಹಿಸ್ ಎಕ್ಸೆಲೆನ್ಸಿ ಜುಮಾ ಅಲ್ ಮದನಿ , ಹರ್ ಎಕ್ಸೆಲೆನ್ಸಿ ಮುನೀರಾ ಅಲ್ ಬಲೂಷಿ, ಬೀದರ್ ಶಾಹೀನ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಅಬ್ದುಲ್ ಖದೀರ್ ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಂಡಿದ್ದರು.

ಹಿಂದೂ ಮುಸ್ಲಿಂ ಕ್ರಿಶ್ಚಿಯನ್ ಯುನೈಟೆಡ್ ಸಂಘಟನೆಯ ಸ್ಥಾಪಕ ಹಾಗೂ ಅಂತಾರಾಷ್ಟ್ರೀಯ ಅಧ್ಯಕ್ಷರಾದ ಶಕೀಲ್ ಹಸನ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘಟನೆಯನ್ನು ಹದಿನೈದು ವರ್ಷಗಳ ಹಿಂದೆ ಸ್ಥಾಪಿಸಿದ ಬಗ್ಗೆ ವಿವರ ನೀಡಿದರು.

“ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತರೆಲ್ಲರೂ ಒಂದೇ ತಾಯಿಯ ಮಕ್ಕಳಾಗಿದ್ದು ಶಾಂತಿ ಸೌಹಾರ್ದತೆಯಿಂದ ಜೀವನ ನಡೆಸಿ ಸಮಾಜಕ್ಕೆ ಉತ್ತಮ ಸಂದೇಶ ನೀಡಬೇಕಾಗಿದ್ದು ಇಂದಿನ ಆದ್ಯ ಕರ್ತವ್ಯಗಳಲ್ಲೊಂದು” ಎಂದು ತಿಳಿ ಹೇಳಿದರು.

ಕಾರ್ಯಕ್ರಮದಲ್ಲಿ ಸಂಘಟನೆಯ ಮುಖಂಡರಾದ ದಾನಿಶ್ ಮುಹಮ್ಮದ್ , ಹಮೀದ್ ಸಾಗರ , ಸಯ್ಯದ್ ಅಹಮದ್ ಬಸ್ರುರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...