ಮಂಡ್ಯ | ದಕ್ಷಿಣ ಭಾರತಕ್ಕೆ ಸುಪ್ರೀಂ ಕೋರ್ಟ್ ಬೆಂಚ್ ಬೇಕು: ಅಭಿಗೌಡ

Date:

ದಕ್ಷಿಣ ಭಾರತಕ್ಕೆ ಸುಪ್ರೀಂ ಕೋರ್ಟ್ ಬೆಂಚ್ ಬೇಕು. ಒಡನಾಡಿಗಳೇ ನಾವಿರುವ ಇಂಡಿಯಾ ಒಕ್ಕೂಟ ವ್ಯವಸ್ಥೆಯಲ್ಲಿ ನ್ಯಾಯಾಂಗ ವ್ಯವಸ್ಥೆ ಬಹಳ ಬಲಿಷ್ಠವಾದದ್ದು. ಇಂತಹ ನ್ಯಾಯಾಂಗ ವ್ಯವಸ್ಥೆಯ ಸುಪ್ರೀಂ ಕೋರ್ಟ್ ನಮಗೆ ಎರಡೂವರೆ ಸಾವಿರ ಕಿಲೋಮಿಟರ್ ದೂರದ ದೆಹಲಿಯಲ್ಲಿರುವುದರಿಂದ ಜನಸಾಮಾನ್ಯರು ನ್ಯಾಯ ಪಡೆಯಲಾಗುತ್ತಿಲ್ಲ. ಹಾಗಾಗಿ ಸುಪ್ರೀಂ ಕೋರ್ಟ್ ಪೀಠವನ್ನು ದಕ್ಷಿಣ ಭಾರತದಲ್ಲಿ(ಸೌತ್ ಇಂಡಿಯಾ) ಸ್ಥಾಪಿಸಬೇಕೆಂದು ಜನಾಭಿಪ್ರಾಯ ಮೂಡಿಸಿ, ಜನಪ್ರತಿನಿಧಿಗಳ ಮೂಲಕ ಒತ್ತಾಯಿಸುತ್ತಿದ್ದೇವೆ ಎಂದು ನಾವು ದ್ರಾವಿಡ ಕನ್ನಡಿಗರು ಚಳವಳಿಯ ಹನಕೆರೆ ಅಭಿಗೌಡ ತಿಳಿಸಿದರು.

ಮಂಡ್ಯ ಜಿಲ್ಲೆಯ ಮಳವಳ್ಳಿ ನಗರದ ಪ್ರವಾಸಿ ಮಂದಿರದಲ್ಲಿ ನಾವು ದ್ರಾವಿಡ ಕನ್ನಡಿಗರ ಸಂಘಟನೆ ಆಯೋಜಿಸಿದ್ದ “ಸೌತ್ ಇಂಡಿಯಾಗೆ ಸುಪ್ರೀಂ ಕೋರ್ಟ್ ಬೆಂಚ್ ಬೇಕು” ಸಾರ್ವಜನಿಕರೊಂದಿಗಿನ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು.

“ಕನ್ನಡಿಗರಲ್ಲಿ ದ್ರಾವಿಡ ಅಂದರೆ ಬರೀ ತಮಿಳರು ಎಂಬ ಭಾವನೆ ಬಿತ್ತಿದ್ದಾರೆ. ನಮ್ಮ ಸುಪ್ರೀಂ ಕೋರ್ಟ್ ಪೀಠ ಏಕೆ ಬೇಕೆಂದು ತಿಳಿಯುವ ಮೊದಲು, ಸುಪ್ರೀಂ ಕೋರ್ಟ್ ಇಲ್ಲಿ ಸುಪ್ರೀಂ ಪದ ಬಳಕೆಯೇ ತಪ್ಪು. ಅದು ಯೂನಿಯನ್ ಇಲ್ಲವೇ ಫೆಡರಲ್ ಕೋರ್ಟ್ ಎಂದು ಆಗಬೇಕಿತ್ತು” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“1956ರಲ್ಲಿ ಜನರ ಹೋರಾಟಕ್ಕೆ ಮಣಿದು ಒಕ್ಕೂಟ ಸರ್ಕಾರ ಭಾಷಾವಾರು ಪ್ರಾಂತ್ಯಗಳನ್ನು ರಚಿಸಿತು. ಕನ್ನಡಕ್ಕೆ ಕರ್ನಾಟಕ ರಾಜ್ಯ, ಪಂಜಾಬಿಗೆ ಪಂಜಾಬ್ ರಾಜ್ಯ ಹೀಗೆ ರಚನೆಯಾದವು. ಹಿಂದಿ ಒಂದು ಭಾಷೆಯಾಗಿದ್ದರೆ ಅದಕ್ಕೆ ಒಂದು ರಾಜ್ಯ ಏಕೆ ರಚನೆಯಾಗಲಿಲ್ಲ. ಅದು ಒಂದು ಭಾಷೆಯೇ ಅಲ್ಲ. ದ್ರಾವಿಡರನ್ನು ವಂಚಿಸಲು ಇರುವ ಅಸ್ತ್ರ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದ್ರಾವಿಡ ನುಡಿಗಳಿಗೆ ಮಹಾಪ್ರಾಣ ಸೇರಿಸಿ ಸಂಸ್ಕೃತ ಭಾಷೆ ಮಾಡಿಕೊಂಡಿದ್ದಾರೆ. ಕನ್ನಡ ಭಾಷೆಗೆ ಹಕಾರ ಸೇರಿಸಿ ಇತರ ದ್ರಾವಿಡ ಭಾಷೆಗಳಿಂದ ಬೇರೆ ಮಾಡಿದ್ದಾರೆ. ಇದರ ಹಿಂದೆ ಬಹಳ ದೊಡ್ಡ ಹುನ್ನಾರ ಅಡಗಿದೆ. ಇದೆಲ್ಲವನ್ನು ದ್ರಾವಿಡರಾದ ನಾವು ಅರಿತುಕೊಂಡು ಒಗ್ಗಟ್ಟಾಗಬೇಕಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಸಂಘಟನೆಗಳು ಮಡಿವಂತಿಕೆ ಬಿಟ್ಟು ಹೋರಾಟ ಮಾಡಬೇಕಿದೆ: ಕೆಂಪೂಗೌಡ

ಮಾದರಹಳ್ಳಿ ನವೀನ್ ಮಾತನಾಡಿ, “ಒಕ್ಕೂಟ ಸರ್ಕಾರವನ್ನು ಕೇಂದ್ರ ಸರ್ಕಾರವೆಂದು ಕರೆಯುವುದರಿಂದ ಎಲ್ಲ ಅಧಿಕಾರಗಳು ಅದರ ಬಳಿಯೇ ಇದೆಯೆಂಬುದು ಜನಸಾಮಾನ್ಯರಲ್ಲಿ ಭಾವನೆ ಮೂಡುತ್ತದೆ. ಒಕ್ಕೂಟ ಸರ್ಕಾರ ಪದ ಬಳಸಿದಾಗ ನಾವೂ ಕೂಡ ಅಧಿಕಾರದಲ್ಲಿ ಭಾಗಸ್ಥರು ಅನಿಸುತ್ತದೆ. ಎರಡೂವರೆ ಸಾವಿರ ಕಿಲೋಮೀಟರ್ ದೂರದಲ್ಲಿರುವ ಸುಪ್ರೀಂ ಕೋರ್ಟಿಗೆ ಹೋಗಬೇಕೆಂದರೆ ಹಣಕಾಸಿನ ತೊಂದರೆ, ಸಮಯದ ಅಭಾವದಿಂದಾಗಿ ನ್ಯಾಯ ಪಡೆಯುವುದು ಕಷ್ಟವಾಗುತ್ತಿದೆ. ಇದಕ್ಕೆ ಪರಿಹಾರವೆಂದರೆ ಡೀಸೆಂಟ್ರಲೈಸ್ ಮಾಡುವುದು. ನ್ಯಾಯಾಲಯ ಹತ್ತಿರದಲ್ಲಿದ್ದರೆ ಹೋರಾಟ ಮಾಡಿ ನ್ಯಾಯಪಡೆಯುತ್ತಾರೆ. ದೂರದಲ್ಲಿದ್ದರೆ ನ್ಯಾಯ ಹೋರಾಟವನ್ನೇ ಕೈಬಿಡುತ್ತಾರೆ” ಎಂದು ತಮ್ಮ ಅನಿಸಿಕೆ ಹಂಚಿಕೊಂಡರು.

ಈ ಸಾರ್ವಜನಿಕ ಸಮಾಲೋಚನಾ ಸಭೆಯಲ್ಲಿ ಎಂ ವಿ ಕೃಷ್ಣ, ಕೆಂಬೂತಗೆರೆ ಶಿವಲಿಂಗಯ್ಯ, ಗೂಳಘಟ್ಟ ಉಜನಿಗೌಡ, ಕಾಗೆಪುರ ಚೇತನ್, ನಾವು ದ್ರಾವಿಡ ಕನ್ನಡಿಗರು ಸಂಘಟನೆಯ ಮನುಗೌಡ, ದಡದಪುರ ದರ್ಶನ, ಬಸವರಾಜು, ಉಪನ್ಯಾಸಕ ಮುನಿರಾಜು, ಶಿವಕೀರ್ತನ್ ಮಂಚನಹಳ್ಳಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...