ಮಂಡ್ಯ | ಮಹಿಳೆಯರಿಗೆ ಸಮಾನತೆ ನೀಡಿದ ನಾಡುಗಳು ಮುಂಚೂಣಿಯಲ್ಲಿವೆ: ನ್ಯಾ. ಬಿ ಟಿ ವಿಶ್ವನಾಥ್‌

Date:

“ಹೆಣ್ಣೊಂದು ಕಲಿತರೆ, ಶಾಲೆಯೊಂದು ತೆರೆದಂತೆ” ಎಂಬ ನಾಣ್ಣುಡಿಯಂತೆ ಎಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ನೀಡಲಾಗಿದೆಯೋ ಆ ನಾಡುಗಳು ಪ್ರಗತಿಯತ್ತ ದಾಪುಗಾಲು ಹಾಕುತ್ತಿವೆ ಎಂದು ನ್ಯಾ. ಬಿ ಟಿ ವಿಶ್ವನಾಥ್ ಅಭಿಪ್ರಾಯಪಟ್ಟರು.

ಮೈಸೂರಿನ ಬನ್ನೂರು ಹೋಬಳಿಯ ಯಾಚೇನಹಳ್ಳಿಯಲ್ಲಿ ರಾಮಕೃಷ್ಣ ಸೇವಾ ಕೇಂದ್ರ ಟ್ರಸ್ಟ್‌ ಆಯೋಜಿಸಿದ್ದ ‘ವಿಶ್ವಮಾನವ ಮೌಲ್ಯ ಚಿಂತನ ಸತ್ಸಂಗ-15’ ಕಾರ್ಯಕ್ರಮದಲ್ಲಿ “ಮಹಿಳಾ ಪಾತ್ರ” ಕುರಿತ ವಿಚಾರ ಮಂಡನೆ ಮಾಡಿ ಮಾತನಾಡಿದರು.

“ಮಹಿಳೆಯರಿಗೆ ಪುರುಷರಷ್ಟೇ ರಾಜಕೀಯ, ಹಣಕಾಸು ಹಾಗೂ ಸಾಮಾಜಿಕ ಸಮಾನತೆ ದೊರೆತರೆ ಮಾತ್ರ ವಿಶ್ವಮಾನವ ಧರ್ಮ ಸ್ಥಾಪನೆ ಸಾಧ್ಯ. ಉದಾಹರಣೆಗೆ, ಸ್ವೀಡನ್‌ನಿಂದ ಶೇ.45ರಷ್ಟು ಮಂದಿ ಮಹಿಳೆಯ ಪರವಾಗಿದ್ದು, ಅಲ್ಲಿ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ನೀಡಲಾಗಿದೆ. ಇದರಿಂದ ಆ ನಾಡು ಪ್ರಗತಿಯತ್ತ ಸಾಗಲು ಸಾಧ್ಯವಾಯಿತು” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಡೀ ನೆಲದಲ್ಲಿ ಯಹೂದಿ ಸಮುದಾಯದವರು ಶೇ.20ರಷ್ಟು ನೊಬೆಲ್‌ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಆದರೆ ಅವರ ಜನ ಎಣಿಕೆ ಕೇವಲ ಶೇ.1ರಷ್ಟು ಮಾತ್ರ. ಆದರೂ ನೊಬೆಲ್‌ ಪ್ರಶಸ್ತಿಗಳಲ್ಲಿ ಅತಿಹೆಚ್ಚು ಸಾಧನೆ ಮಾಡಿದ್ದಾರೆ. ಇದಕ್ಕೆ ಕಾರಣ, ಯಹೂದಿ ಸಮುದಾಯದಲ್ಲಿ ಮಹಿಳೆಯರಿಗೆ ಪುರುಷರಷ್ಟೇ ಸಮಾನ ಅವಕಾಶಗಳನ್ನು ನೀಡಲಾಗಿರುವುದು” ಎಂದು ಮಾಹಿತಿ ನೀಡಿದರು.

“ಇಡೀ ವಿಶ್ವದಲ್ಲಿ ಡೆನ್ಮಾರ್ಕ್, ಇಟಲಿ, ಆಸ್ಟ್ರೇಲಿಯಾ, ಯುನೈಟೆಡ್ ಸ್ಟೇಟ್ಸ್, ಟರ್ಕಿ, ಮೆಕ್ಸಿಕೋ ಹಾಗೂ ಜರ್ಮನಿಯಂತಹ 10 ನಾಡುಗಳಲ್ಲಿ ಮಹಿಳೆಯರಿಗೆ ಹೆಚ್ಚು ಸಮಾನತೆ ನೀಡಲಾಗಿದೆ. ಇದರಿಂದಾಗಿ ಈ ನಾಡುಗಳು ಪ್ರಗತಿ ಸಾಧಿಸಲು ಸಾಧ್ಯವಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಜಾತಿಯ ಗೋಡೆಗಳನ್ನು ಕೆಡವಿ, ಸೇತುವೆ ಕಟ್ಟುವ ಕೆಲಸ ಆಗಬೇಕಿದೆ: ಸಾಣೇಹಳ್ಳಿ ಸ್ವಾಮೀಜಿ

ಶ್ರೀರಾಮಕೃಷ್ಣ ಸೇವಾ ಕೇಂದ್ರ ಟ್ರಸ್ಟಿನ ಶ್ರೀನಾದಾನಂದನಾಥ ಅಧ್ಯಕ್ಷತೆ ವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಡಾ. ಎಚ್ ಎಲ್ ನಾಗರಾಜ್, ಕೆ ಜಿ ವಿಜಯಕುಮಾರ್, ಡಾ. ಮಾದೇಶ್, ಎಂಜಿನಿಯರ್ ಜಿ ಎನ್ ಕೆಂಪರಾಜು, ಡಾ. ಆದಿತ್ಯಗೌಡ, ‘ನುಡಿ ಕರ್ನಾಟಕ’ದ ಸಂಪಾದಕ ಎನ್. ನಾಗೇಶ್, ಸಂತೋಷ್, ಟಿ ಡಿ ನಾಗರಾಜ್, ವೈರಮುಡಿ, ಪಾವನಿ, ನೆಲದನಿ ಬಳಗದ ಮಂಗಲ ಲಂಕೇಶ್, ಸುಬ್ರಮಣ್ಯ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...