ಮಂಡ್ಯ | ಎಲೆಚಾಕನಹಳ್ಳಿಯಲ್ಲಿ ಉದ್ವಿಗ್ನತೆ; ಜೀವಭಯದಲ್ಲಿ ದಲಿತರು

Date:

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ ಕತ್ತರಘಟ್ಟದಲ್ಲಿ ದಲಿತ ಯುವಕನನ್ನು ಜೀವಂತವಾಗಿ ಸುಟ್ಟುಹಾಕಿಲಾದ ದುರಂತ ಘಟನೆ ಮಾಸುವ ಮುನ್ನವೇ ಮಂಡ್ಯ ಜಿಲ್ಲೆಯ ಮತ್ತೊಂದು ಗ್ರಾಮದಲ್ಲಿ ಜಾತಿ ದೌರ್ಜನ್ಯದ ಉದ್ವಿಗ್ನತೆ ಹೆಚ್ಚಾಗಿದೆ. ಮಂಡ್ಯ ತಾಲೂಕಿನ ಎಲೆಚಾಕನಹಳ್ಳಿ ಗ್ರಾಮದಲ್ಲಿ ದಲಿತರಿಗೆ ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿದ್ದು, ಪ್ರಕ್ಷ್ಯುಬ್ದ ಸ್ಥಿತಿ ನಿರ್ಮಾಣವಾಗಿದೆ. ಜೀವಭಯದಲ್ಲಿ ದಲಿತರು ದಿನದೂಡುತ್ತಿದ್ದಾರೆ.

ಎಲೆಚಾಕನಹಳ್ಳಿ ಗ್ರಾಮದಲ್ಲಿ ಪ್ರಬಲ ಜಾತಿಯ 500ಕ್ಕೂ ಹೆಚ್ಚು ಕುಟುಂಬಗಳು ಹಾಗೂ ದಲಿತ (ಮಾದಿಗ) ಸಮುದಾಯದ 40 ಕುಟುಂಬಗಳು ವಾಸಿಸುತ್ತಿವೆ. ಇತ್ತೀಚೆಗೆ, ದಲಿತರು ಗ್ರಾಮದ ಮಾರಮ್ಮನ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದರು. ಇದೇ ಕಾರಣಕ್ಕೆಸವರ್ಣೀಯರು ದಲಿತರ ಮೇಲೆ ಸಾಮಾಜಿಕ ಬಹಿಷ್ಕಾರ ಹೇರಿದ್ದಾರೆ. ಸವರ್ಣೀಯರು ತಮ್ಮ ಮೇಲೆ ಹಲ್ಲೆ ನಡೆಸಿಬಹುದು ಎಂಬ ಆತಂಕ ದಲಿತರನ್ನು ಆವರಿಸಿಕೊಂಡಿದೆ.

ಪರಿಸ್ಥಿತಿ ಉದ್ವಿಗ್ನಗೊಂಡ ಬಳಿಕ ಅಧಿಕಾರಿಗಳು ಮಾರಮ್ಮನ ದೇವಾಲಯಕ್ಕೆ ಬೀಗ ಹಾಕಿದ್ದಾರೆ. ಅಧಿಕಾರಿಗಳು ಒಂದು ಬೀಗ ಹಾಕಿದ್ದರೆ, ಗ್ರಾಮದ ಸವರ್ಣೀಯರು ಮತ್ತೊಂದು ಬೀಗ ಹಾಕಿದ್ದಾರೆ. ಪ್ರಬಲ ಜಾತಿಯವರು ಮತ್ತು ದಲಿತರ ನಡುವೆ ಅಧಿಕಾರಿಗಳು ಶಾಂತಿ-ಸಂಧಾನಕ್ಕೆ ಯತ್ನಿಸಿದ್ದಾರೆ. ಆದರೆ, ಅಧಿಕಾರಿಗಳ ಮಾತನ್ನು ಸವರ್ಣೀಯರು ಆಲಿಸುತ್ತಿಲ್ಲ. ಹೀಗಾಗಿ, ಶಾಂತಿ ಸಭೆ ಅರ್ಧಕ್ಕೆ ಮೊಟಕುಗೊಂಡಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ಕತ್ತರಘಟ್ಟ ದಲಿತ ಯುವಕನ ಸಾವು ಪ್ರಕರಣ: ಎಎಸ್‌ಐ ಅಮಾನತು; ನೈಜ ತಪ್ಪಿತಸ್ಥ ಅಧಿಕಾರಿಗಳ ಅಮಾನತಿಗೆ ಆಗ್ರಹ

ಗ್ರಾಮಕ್ಕೆ ಮಂಡ್ಯ ತಹಸೀಲ್ದಾರ್ ಶಿವಕುಮಾರ್ ಬಿರಾದರ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಬಂದಿದ್ದು, ಶಾಂತಿ ಸಭೆ ನಡೆಸಿದೆ. ಸಭೆಯಲ್ಲಿ, ಮಾರಮ್ಮನ ದೇವಾಲಯಕ್ಕೆ ತಮಗೂ ಪೂಜೆ ಸಲ್ಲಿಸಲು ಅವಕಾಶ, ಪ್ರವೇಶ ನೀಡಬೇಕೆಂದು ದಲಿತರು ಒತ್ತಾಯಿಸಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ದಲಿತರು ದೇವಾಲಯ ಪ್ರವೇಶಿಸಲು ಬಿಡುವುದಿಲ್ಲವೆಂದು ಪ್ರಬಲ ಜಾತಿಯವರು ಪಟ್ಟು ಹಿಡಿದಿದ್ದಾರೆ. ಅಧಿಕಾರಿಗಳ ಎದುರೇ ದಲಿತರನ್ನು ಅವಾಚ್ಯ, ಅಶ್ಲೀಲವಾಗಿ ನಿಂದಿಸಿದ್ದಾರೆ.

ಸಭೆ ವಿಫಲವಾದ ಬಳಿಕ, ಗ್ರಾಮದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಬಿಗಿ ಬಂದೋಬಸ್ತ್‌ ಮಾಡಲಾಗಿದೆ.

ಪೊಲೀಸರನ್ನು ನಿಯೋಜಿಸಿದ್ದರೂ ಗ್ರಾಮದಲ್ಲಿನ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಸವರ್ಣೀಯರು ದಲಿತರ ಬೀದಿಗೆ ನುಗ್ಗಿ ಹಲ್ಲೆ ನಡೆಸುವುದಾಗಿ ಸಾರ್ವಜನಿಕವಾಗಿಯೇ ಮಾತನಾಡುತ್ತಿದ್ದಾರೆ ಎಂದು ದಲಿತ ಯುವಕರು ಆರೋಪಿಸಿದ್ಧಾರೆ. ತಮಗೆ ಜೀವಭಯ ಇರುವುದಾಗಿ ಆತಂಕ ವ್ಯಕ್ತಪಡಿಸಿದ್ದಾರೆ.

ದಲಿತರ ವಸತಿ ಪ್ರದೇಶಕ್ಕೆ ನುಗ್ಗಿ ಸವರ್ಣೀಯರ ದಾಂಧಲೆ

ಜೂನ್ 3ರ ರಾತ್ರಿ 12:30ರ ಸುಮಾರಿಗೆ ಗ್ರಾಮದ ಸವರ್ಣೀಯರು ದಲಿತರ ವಸತಿ ಪ್ರದೇಶಕ್ಕೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಬೀದಿಯಲ್ಲಿ ನಿಂತಿದ್ದ ಕಾರಿನ ಗಾಜುಗಳನ್ನು ಹೊಡೆದು ಹಾಕಿದ್ದಾರೆ. ‘ಮಾದಿಗ ಬಡ್ಡಿ ಮಕ್ಕಳ ನಿಮಗೆ ದೇವಸ್ಥಾನ ಪ್ರವೇಶ ಬೇಕಾ’ ಎಂದು ಅವಾಚ್ಯ, ಅಶ್ಲೀಲವಾಗಿ ನಿಂದಿಸಿದ್ದಾರೆ. ಮಾತ್ರವಲ್ಲದೆ, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದಲಿತ ಯುವಕ ವಿಜಯ್ ಕುಮಾರ್ ಆರೋಪಿಸಿದ್ದಾರೆ. ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ಧಾರೆ.

ವಿಜಯಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಬಲ ಜಾತಿಯ ಶಿವಲಿಂಗ ಅಲಿಯಾಸ್ ಪಾಪು, ದಿನೇಶ್, ಜನಾರ್ದನ, ಚೇತನ್ ಕುಮಾರ್, ರೋಪೇಶ ಹಾಗೂ ಮನು ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...