ಮಂಡ್ಯ | ಕೃಷಿಗಿರುವ ಸಾಮಾಜಿಕ ಪ್ರತಿಷ್ಠೆ ಕಡಿಮೆಯಾಗಿದೆ: ಡಾ. ವಾಸು

Date:

ನಗರ ಪ್ರದೇಶ ಅಥವಾ ನಗರೀಕರಣವೇ ಅಭಿವೃದ್ಧಿ ಎಂದು ಕೆಲವರಿಂದ ನಂಬಿಸಲಾಗಿದೆ. ಕೃಷಿಗಿರುವ ಸಾಮಾಜಿಕ ಪ್ರತಿಷ್ಠೆ ಕಡಿಮೆಯಾಗಿದೆ. ಆದಾಗ್ಯೂ ಕೃಷಿ ಹಾಗೂ ಗ್ರಾಮ ಪ್ರಧಾನವಾಗಿರುವ ಜಿಲ್ಲೆಯಾಗಿಯೂ ಅಭಿವೃದ್ಧಿಯತ್ತ ಸಾಗಲು ಸಾಧ್ಯ ಎಂಬುದನ್ನು ಮಂಡ್ಯ ಜಿಲ್ಲೆ ಸಾಧಿಸಿ ತೋರಿಸುತ್ತಿದೆ. ಆದರೆ, ಇಲ್ಲಿನ ಜನರು ಅದನ್ನು ಅರ್ಥೈಸಿಕೊಂಡು ಕೃಷಿಗೆ ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಕಾರ್ಯಸಾಧುವಾದ ಅಭಿವೃದ್ಧಿಯ ಮಾದರಿಯನ್ನು ಸಾಧ್ಯಮಾಡಬೇಕಿದೆ ಎಂದು ಜಾಗೃತ ಕರ್ನಾಟಕ ಸಂಘಟನೆಯ ಡಾ. ವಾಸು ಹೆಚ್ ವಿ ಹೇಳಿದರು.

ಮಂಡ್ಯದಲ್ಲಿ ನಡೆದ ಕೃಷಿ ಹಾಗೂ ಗ್ರಾಮೀಣ ಭಾಗಗಳು ಎಲ್ಲಾ ರೀತಿಯಲ್ಲಿಯೂ ನಗಣ್ಯವಾಗುತ್ತಿರುವಾಗ ಗ್ರಾಮ ಮತ್ತು ಕೃಷಿ ಪ್ರಧಾನವಾದ ಜಿಲ್ಲೆಗಳ ಅಭಿವೃದ್ಧಿ ಹೇಗೆ ಸಾಧ್ಯ ಎಂಬ ವಿಚಾರ ಗೋಷ್ಠಿಯಲ್ಲಿ ಮಾತನಾಡಿದ ಅವರು, “ರೈತರ ಕೃಷಿ ಭೂಮಿಗೆ ಸಂಬಂಧಿಸಿದಂತೆ ಇತ್ತೀಚಿನ ದಿನಗಳಲ್ಲಿ ಚನ್ನರಾಯಪಟ್ಟಣದಲ್ಲಿ ಅತಿ ದೊಡ್ಡ ಹೋರಾಟವೊಂದು ನಡೆದಿದೆ. ಇಡೀ ಸರ್ಕಾರವೇ ತಲೆಕೆಡಿಸಿಕೊಂಡು, ಯಾವ ರೀತಿ ನಿರ್ಧಾರ ಮಾಡಬೇಕು? ಏನೆಂದು ಘೋಷಣೆ ಮಾಡಬೇಕು? ಎಂಬ ಮಟ್ಟಿಗೆ ತಲೆಕೆಡಿಸಿಕೊಂಡಿರುವ ಮಹತ್ವದ ಹೋರಾಟ ಆಗಿದ್ದರೂ, ಈ ಕ್ಷಣಕ್ಕೆ ಆಯಾ ಹೋರಾಟ ಭಾವನಾತ್ಮಕವಾಗಿದ್ದರೂ ಕೂಡ ಮುಂದಿನ 25 ವರ್ಷಗಳಲ್ಲಿ ಈಗಿನ ಕೃಷಿ ಭೂಮಿ ಅಂದಿಗೂ ಕೂಡ ಕೃಷಿ ಭೂಮಿಯೇ ಆಗಿ ಉಳಿಯಲಿದೆಯೇ ಎಂಬ ಮೂಲಭೂತ ಪ್ರಶ್ನೆಯನ್ನು ಎಲ್ಲರೂ ಸಹ ಕೇಳಿಕೊಳ್ಳಬೇಕು. ಕೃಷಿ ಭೂಮಿ ಮುಂದಿನ ದಿನಗಳಲ್ಲಿಯೂ ಕೂಡ ಕೃಷಿ ಭೂಮಿಯೇ ಆಗಿರಬೇಕು ಎಂದರೆ ಕೃಷಿಗೆ ಸಾಮಾಜಿಕ ಪ್ರತಿಷ್ಠೆ ಬರಬೇಕು” ಎಂದರು.

“ಜನರ ಸಾಮಾಜಿಕ ಮನಶಾಸ್ತ್ರದ ಬಗ್ಗೆ ಪ್ರಯೋಗಗಳು ನಡೆಯಬೇಕಿದೆ. ಜನರು ವಲಸೆ ಹೋಗುವುದನ್ನು ತಡೆಯುವ ಕೆಲಸವಾಗಬೇಕಿದೆ. ವ್ಯವಸ್ಥಿತ ಸಂಪರ್ಕ ವ್ಯವಸ್ಥೆ, ವೈದ್ಯಕೀಯ ವ್ಯವಸ್ಥೆ, ಶಿಕ್ಷಣ, ವಸತಿ, ಮನೋರಂಜನೆ ಹಾಗೂ ಬಹು ಮುಖ್ಯವಾಗಿ ಸ್ಥಿರ ಆದಾಯವುಳ್ಳ ಉದ್ಯೋಗ ಅಥವಾ ಆದಾಯದ ಮೂಲಗಳು ಸಿಗುವಂತೆ ಮಾಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ಈ ನಿಟ್ಟಿನಲ್ಲಿ ಕಾರ್ಯಸಾಧ್ಯ ಮಾಡಲು ಕೃಷಿ ಆಧಾರಿತವಾಗಿ ಹಾಗೂ ಮಾನವ ಅಭಿವೃದ್ಧಿ ದೃಷ್ಟಿಯಿಂದ ರಚನಾತ್ಮಕ ಕೆಲಸ, ಬೇಕಾದ ಆಂದೋಲನ ಮಾಡಬೇಕು ಹಾಗೂ ವ್ಯವಸ್ಥಿತವಾಗಿ ರಾಜಕೀಯ ಪರಿಸ್ಥಿತಿಗಳನ್ನು ಅರ್ಥೈಸಿಕೊಂಡು ನಿಲುವುಗಳನ್ನು ತೆಗೆದುಕೊಳ್ಳುವಂತೆ ಮಾಡುವ ಬಾಬಾ ಸಾಹೇಬರು, ಮಹಾತ್ಮ ಗಾಂಧಿ ಅವರು, ಬುದ್ಧ ಬಸವಣ್ಣ ಅವರು ತೋರಿದ ಆಧ್ಯಾತ್ಮಿಕ ಚಿಂತನೆಯ ಬೀಜವನ್ನು ಬಿತ್ತುವ ಕೆಲಸ ಮಾಡಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮಂಡ್ಯ | ಕೃಷಿಯೇ ನಮ್ಮ ಭವಿಷ್ಯ: ಕವಿತಾ ಕುರುಗಂಟಿ ಅಭಿಮತ

“ಅಭಿವೃದ್ಧಿ ನಿಟ್ಟಿನಲ್ಲಿ ಕೃಷಿಯಿಂದ ಆದಾಯ, ಕೃಷಿ ಜೊತೆಗೆ ಇತರ ಕಸುಬುಗಳಿಂದ ಬರುವ ಆದಾಯ ಹೆಚ್ಚಿಸುವುದು, ಕೃಷಿಯೇತರ ಕಸುಬುಗಳು ಅಂದರೆ, ಪದಾರ್ಥಗಳ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸುವುದರಿಂದ ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಸೃಷ್ಟಿ ಮಾಡುವ ಮೂಲಕ ಆರ್ಥಿಕವಾಗಿ ಸಬಲರಾಗಿ ಕೃಷಿಯಿಂದಲೇ ಕೃಷಿಗಿರುವ ಸಾಮಾಜಿಕ ಪ್ರತಿಷ್ಠೆಯನ್ನು ಮತ್ತಷ್ಟು ಹೆಚ್ಚಿಸಬಹುದು. ಮಂಡ್ಯದಲ್ಲಿ ಅಗ್ರಿ ಟೆಕ್ ಪ್ರಾರಂಭ ಮಾಡಬೇಕು ಎಂಬ ಬಗ್ಗೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡಬೇಕಿದೆ” ಎಂದರು.

ವಿಚಾರಗೋಷ್ಠಿಯಲ್ಲಿ ಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ನಂದಿನಿ ಜಯರಾಮ್ ಮಾತನಾಡಿ, ಆಂಧ್ರಪ್ರದೇಶದಲ್ಲಿ 9 ಲಕ್ಷಕ್ಕೂ ಹೆಚ್ಚು ರೈತ ಕುಟುಂಬಗಳು ಸಾವಯವ ನೈಸರ್ಗಿಕ ಕೃಷಿ ಮಾಡಿ, ಇಂದು ಆರ್ಥಿಕವಾಗಿ ಸಬಲರಾದ ರೈತ ಕುಟುಂಬಗಳಾಗಿ ಮುಂದುವರಿದಿವೆ. ಅದೇ ರೀತಿ ಮಂಡ್ಯದಲ್ಲಿಯೂ ಕೂಡ ನೈಸರ್ಗಿಕ ಕೃಷಿ ಮಾಡುವವರ ಪ್ರಮಾಣ ಹೆಚ್ಚಾಗಬೇಕು, ಜಾಗೃತ ಕರ್ನಾಟಕ ತನ್ನ ವಿಚಾರಗೋಷ್ಠಿಗಳು ಮುಂದುವರಿಸಿಕೊಂಡು ಹೋಗಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...