ಮಂಡ್ಯ | ಯುವಜನರಿಗೆ ಗಾಂಧಿ ಚಿಂತನೆಯನ್ನು ತಿಳಿಸುವ ಅಗತ್ಯವಿದೆ: ಡಾ. ಬಿ.ಸಿ. ಬಸವರಾಜು

Date:

ದೇಶದ ಯುವ ಜನರಿಗೆ ಗಾಂಧಿ ಚಿಂತನೆಯನ್ನು ತಿಳಿಸುವುದು ಎಂದಿಗಿಂತ ಇಂದಿನ ತುರ್ತು ಆದ್ಯತೆಯಾಗಬೇಕು ಎಂದು ಈ ದಿನ.ಕಾಮ್ ವಿಡಿಯೋ ವಿಭಾಗದ ಮುಖ್ಯಸ್ಥ ಡಾ.ಬಿ.ಸಿ. ಬಸವರಾಜು ತಿಳಿಸಿದರು.

ಮಂಡ್ಯ ನಗರದ ಗಾಂಧಿ ಭವನದಲ್ಲಿ ಚಿತ್ರಕೂಟದ ವತಿಯಿಂದ ಭಾನುವಾರ ಸಂಜೆ ನಡೆದ ಹಾಡು, ಹಸೆ, ಕವಿತೆಗಳ ಜತೆ ಮಾತುಕತೆ ಎಂಬ ವಿಭಿನ್ನ ಕಾರ್ಯಕ್ರಮದಲ್ಲಿ ‘ಗಾಂಧಿ ಮತ್ತು ಮಾಧ್ಯಮ’ ಕುರಿತು ವಿಶೇಷ ಉಪನ್ಯಾಸ ನೀಡುತ್ತಾ ಅವರು ಮಾತನಾಡುತ್ತಿದ್ದರು.

“ಇಂದಿನ ಜನರಲ್ಲಿ ಗಾಂಧಿ ಚಿಂತನೆಯನ್ನು ಅರ್ಥ ಮಾಡಿಸುವ ಮನಸ್ಥಿತಿ ಕಡಿಮೆಯಾಗಿದೆ. ಒಂದು ವೇಳೆ ನಾವು ಗಾಂಧಿಯನ್ನು ತಿಳಿದುಕೊಳ್ಳಲು ವಿಫಲವಾದರೆ, ಈ ಒಕ್ಕೂಟವನ್ನು ಅವರ ಆಶಯದ ಭಾರತವನ್ನಾಗಿ ಉಳಿಸಿಕೊಳ್ಳುವುದು ಕಷ್ಟವಾಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶ ವಿಭಜನೆಯ ಕಾರಣಕ್ಕಾಗಿ ಗಾಂಧಿಯನ್ನು ಕೊಲ್ಲಲಾಯಿತು ಎಂಬುದು ಸುಳ್ಳು. ನಿಜವಾಗಲೂ ಆಗಿನ ಸಂದರ್ಭದಲ್ಲಿ ಗಾಂಧಿಯವರ ವೈಚಾರಿಕ ಸಿದ್ದಾಂತಕ್ಕೆ ವಿರುದ್ದವಾದ ವರ್ಣಾಶ್ರಮ, ಮನುವಾದವನ್ನು ಪ್ರತಿಪಾದಿಸುತ್ತಿದ್ದ ಸಂಘ ಪರಿವಾರದ ಗುಂಪು ಅವರನ್ನು ಹತ್ಯೆ ಮಾಡಿತು. ಏಕೆಂದರೆ ಗಾಂಧಿಜೀಯವರು ಮನುವಾದಿಗಳ ಸಿದ್ದಾಂತಕ್ಕೆ ಎದುರಾಗಿದ್ದರು ಎಂದು ತಿಳಿಸಿದರು.

ಗಾಂಧಿ 11

ಪತ್ರಿಕೋದ್ಯಮವು ಸಮಾಜ ಸೇವೆಯಾಗಬೇಕೆಂದು ಗಾಂಧೀಜಿಯವರು ಬಯಸಿದ್ದರು. ಆದರೆ, ಈ ದೇಶದಲ್ಲಿ ಮಾಧ್ಯಮಗಳ ಸ್ಥಿತಿ ಏನಾಗಿದೆ ಎಂಬುದನ್ನು ಗಮನಿಸಿದರೆ, ಅವರು ಬಂಡವಾಳ ಶಾಹಿಗಳು ಹಾಗೂ ಉದ್ಯಮಿಗಳ ಕೈಯಲ್ಲಿ ಸಿಲುಕಿ, ಪತ್ರಕರ್ತರು ಸ್ವತಂತ್ರವಾಗಿ ಕೆಲಸ ಮಾಡಲು ಸಾಧ್ಯವಾಗದ ಸ್ಥಿತಿಗೆ ತಲುಪಿವೆ. ಇದು ಅಪಾಯಕಾರಿ ಬೆಳವಣಿಗೆ ಎಂದರು.

ಸಹ ಪ್ರಾಧ್ಯಾಪಕರಾದ ಡಾ. ಶಿಲ್ಪಶ್ರೀ ಹರವು ‘ಗಾಂಧೀ ಮತ್ತು ಗ್ರಾಮ’ ವಿಚಾರ ಕುರಿತು ಮಾತನಾಡಿ, ಗಾಂಧೀಜಿಯವರ ಸರ್ವೋದಯವೆಂದರೆ ಒಬ್ಬ ವ್ಯಕ್ತಿಯ ಹಿತ, ಎಲ್ಲರ ಹಿತದಲ್ಲಿದೆ ಎಂಬುದಾಗಿತ್ತು. ಅವರ ಸರ್ವೋದಯ ತತ್ವವು ಒಂದು ದೇಶಕ್ಕೆ ಮಾತ್ರ ಸೀಮಿತವಾಗಿರಲಿಲ್ಲ, ಇಡೀ ವಿಶ್ವಕ್ಕೆ ಸಂಬಂಧಿಸಿದ್ದಾಗಿತ್ತು ಎಂದರು.

ಇದನ್ನು ಓದಿದ್ದೀರಾ? ಬೀದರ್‌ | ತೊಗರಿ ಬೆಳೆ ಮಧ್ಯೆ ಗಾಂಜಾ ಬೆಳೆದ ರೈತ : 700 ಗಿಡ ಜಪ್ತಿ ಮಾಡಿದ ಪೊಲೀಸರು

ಶಿಕ್ಷಣ ತಜ್ಞ ವೋಡೇ ಪಿ.ಕೃಷ್ಣ ಸಮಾರಂಭ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ರಂಗಾಯಣ ಮಾಜಿ ನಿರ್ದೇಶಕ ಸಿ. ಬಸವಲಿಂಗಯ್ಯ, ಲಂಕೇಶ್ ಪತ್ರಿಕೆ ಅಂಕಣಕಾರ ಬಿ. ಚಂದ್ರೇಗೌಡ, ನಾಟಕ ಅಕಾಡೆಮಿ ಮಾಜಿ ಸದಸ್ಯ ಮಲ್ಲಿಕಾರ್ಜುನ ಮಹಾಮನೆ ಭಾಗವಹಿಸಿದ್ದರು. ಹರವು ದೇವೇಗೌಡರು ಕಾರ್ಯಕ್ರಮದ ನಿರೂಪಣೆ ಮಾಡಿದರು.

ಮಂಡ್ಯ1 3
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...