ಮಂಡ್ಯ | ರೈತರ ಜಮೀನಿನಲ್ಲಿ ಕಾಣಿಸಿಕೊಂಡ ಎರಡು ಕಾಡಾನೆ; ಸಾರ್ವಜನಿಕರಲ್ಲಿ ಆತಂಕ

Date:

ಮಂಡ್ಯದ ಕಾವೇರಿ ನಗರ ಸದ್ವಿದ್ಯಾ ಶಾಲೆಯ ಬಳಿ ಎರಡು ಕಾಡಾನೆಗಳು ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

ಇದೇ ಆನೆಗಳು ಶ್ರೀರಂಗಪಟ್ಟಣ ತಾಲೂಕಿನ ಹಲವು ಹಳ್ಳಿಗಳಲ್ಲಿ ರೈತರ ಜಮೀನಿಗೆ ಲಗ್ಗೆ ಇಟ್ಟು ಬೆಳೆ ಹಾನಿ ಮಾಡಿದ್ದವು. ಕಳೆದ ರಾತ್ರಿ ಮಂಡ್ಯ ನಗರದ ಕಲ್ಲಹಳ್ಳಿ ವಿವಿ ನಗರ ಭಾಗದಲ್ಲಿ ಅಡ್ಡಾಡಿದ್ದವು. ನಾಯಿ ಬೊಗಳುತ್ತಿರುವುದನ್ನು ಕಂಡ ಸ್ಥಳೀಯರು ಗಮನಿಸಿದಾಗ ಆನೆಗಳು ಸಂಚರಿಸುತ್ತಿರುವುದು ಬೆಳಕಿಗೆ ಬಂದಿದೆ.

ಮುಂಜಾನೆ ವೇಳೆಗೆ ಜಾಗ ಬದಲಾಯಿಸಿದ್ದ ಎರಡು ಆನೆಗಳು ಮಂಡ್ಯ, ಕಿರುಗಾವಲು ದಾರಿಯಲ್ಲಿ ಕಾವೇರಿನಗರ 2 ಹಂತದ ಸದ್ವಿದ್ಯಾ ಶಾಲೆ ಬಳಿಯ ಕಬ್ಬಿನ ಗದ್ದೆಯಲ್ಲಿ ಕಾಣಿಸಿಕೊಂಡಿವೆ. ಕಾರಸವಾಡಿ ಗ್ರಾಮದ ರೈತರ ಜಮೀನಿನಲ್ಲಿ ಆನೆಗಳು ನಡೆದಾಡಿರುವ ಹೆಜ್ಜೆ ಗುರುತುಗಳನ್ನು ಪತ್ತೆ ಹಚ್ಚಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತರ ಜಮೀನಿಗೆ ಲಗ್ಗೆ ಇಟ್ಟು ಅಡ್ಡಾಡುತ್ತಿರುವ ಎರಡು ಆನೆಗಳು ಕಂಡು ಬಂದ ಹಿನ್ನೆಲೆಯಲ್ಲಿ ಜನತೆ ನೋಡಲು ಮುಗಿಬಿದ್ದಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಮುನ್ನೆಚ್ಚರಿಕೆ ವಹಿಸಿ ಆನೆಗಳ ಸಮೀಪ ಜನರು ಸುಳಿಯದಂತೆ ಕಟ್ಟೆಚ್ಚರ ವಹಿಸಿದ್ದಾರೆ.

ಬೀಟ್ ಫಾರೆಸ್ಟರ್ ಲೋಕೇಶ್ ಈ ದಿನ.ಕಾಮ್ ಜೊತೆ ಮಾತನಾಡಿ, “ಮಂಡ್ಯದ ಕಾವೇರಿನಗರ ಬಳಿಯಲ್ಲಿ ಪ್ರತ್ಯಕ್ಷವಾಗಿರುವ ಕಾಡಾನೆಗಳು ಚನ್ನಪಟ್ಟಣದ ಅರಣ್ಯ ಪ್ರದೇಶದಿಂದ ಆಹಾರವನ್ನರಸಿ ಮಂಡ್ಯದವರೆಗೆ ವಲಸೆ ಬಂದಿವೆ. ಪ್ರಸ್ತುತ ಎಲ್ಲ ಕಡೆ ಮಳೆಯಾಗಿ ಅಲ್ಲಿಯೇ ಆಹಾರ ಲಭ್ಯವಿದ್ದರೂ, ವಿಭಿನ್ನವಾದ ಆಹಾರವನ್ನರಸಿ ಕಾಡಾನೆಗಳು ಇಲ್ಲಿಗೆ ಬಂದಿವೆ” ಎಂದು ಮಾಹಿತಿ ನೀಡಿದರು.

“ಆನೆಗಳು ಮುತ್ತತ್ತಿ ಅರಣ್ಯ ಭಾಗದಿಂದ ಮದ್ದೂರು ಮಾರ್ಗವಾಗಿ ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿ ಬಳಿಯಲ್ಲಿ ಕಳೆದ 3 ದಿನಗಳ ಹಿಂದೆ ಪ್ರತ್ಯಕ್ಷವಾಗಿದ್ದವು. ಆನಂತರ ಕಾಳೇನಹಳ್ಳಿ ಬಳಿಯ ಕಸ ವಿಲೇವಾರಿ ಘಟಕದ ಬಳಿ ಪ್ರತ್ಯಕ್ಷವಾಗಿದ್ದು. ಆನಂತರ ಇಂಡುವಾಳು- ಕಿರಗಂದೂರು ಭಾಗದಲ್ಲಿ ಕಾಣಿಸಿಕೊಂಡಿದ್ದವು. ಆನಂತರ ಕಾರಸವಾಡಿ ಮಹದೇಶ್ವರ ದೇವಾಲಯದ ಮಾರ್ಗವಾಗಿ ಕಾವೇರಿ ನಗರದ ಬಳಿಯ ಕಬ್ಬಿನ ಗದ್ದೆಯಲ್ಲಿ ಬೀಡು ಬಿಟ್ಟಿವೆ” ಎಂದರು.

ಡ್ರೋನ್ ಕ್ಯಾಮೆರಾದ ಮೂಲಕ ಆನೆಗಳ ಚಲನವಲನ ಮೇಲೆ ನಿಗಾ ಇಟ್ಟಿದ್ದು, ಅವುಗಳ ವಲಸೆ ಸಂಬಂಧಿಸಿದಂತೆ ಸುತ್ತಮುತ್ತಲ ಜನರಿಗೆ ಮುನ್ನೇಚ್ಚರಿಕೆ ನೀಡುತ್ತಿದ್ದೇವೆಂದು ಲೋಕೇಶ್ ತಿಳಿಸಿದ್ಧಾರೆ.

ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ನಡೆಸುವುದಕ್ಕಾಗಿ ಹುಣಸೂರಿನಿಂದ 18 ಅಧಿಕಾರಿಗಳನ್ನೊಳಗೊಂಡ ಆನೆ ಕಾರ್ಯಪಡೆಯನ್ನು ಕರೆಸಿಕೊಳ್ಳಲಾಗಿದೆ. ಅದರೊಂದಿಗೆ ಮಂಡ್ಯ, ಮದ್ದೂರು ಹಾಗೂ ಮಳವಳ್ಳಿ ಅರಣ್ಯ ಇಲಾಖೆಯ ಅಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...