ಮಂಡ್ಯ | ವಾಹನ ವ್ಯವಸ್ಥೆ ಇಲ್ಲದೇ ಮತದಾರರ ಪರದಾಟ

Date:

ಕೃಷ್ಣರಾಜಪೇಟೆ ಮತ ಹಾಕಿ ಎಂದು ಮನೆ ಮನೆ ಸುತ್ತುತ್ತಾರೆ. ನಾವು ಮತ ಹಾಕುತ್ತೇವೆಂದರೆ, ದೂರದಿಂದ ಬರುವವರಿಗೆ ಸರಿಯಾಗಿ ವಾಹನದ ವ್ಯವಸ್ಥೆಯೇ ಇಲ್ಲದಾಗಿದೆ. ಅಭ್ಯರ್ಥಿಗಳು ಅಬ್ಬರದ ಪ್ರಚಾರಗಳು, ಭಾಷಣಗಳು ಅವರವರ ಪಕ್ಷದ ಕರಪತ್ರಗಳು ಹಾಗೂ ಪ್ರಣಾಳಿಕೆಯನ್ನು ಹಂಚುತ್ತಾರೆ. ಮತ ಚಲಾಯಿಸಲು ಮತದಾರರಿಗೆ ಬೇಕಾಗುವ ಸವಲತ್ತುಗಳನ್ನು ಮಾಡಿ ಕೊಡುತ್ತಾರೆ. ಆದರೆ, ಆದರೆ, ಮಂಡ್ಯ ಲೋಕಸಭಾ ಕ್ಷೇತ್ರದ ಕೆ.ಆರ್ ಪೇಟೆ ತಾಲೂಕಿಗೆ ಸೇರುವ ರಾಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತಗಟ್ಟೆಯಲ್ಲಿ ಮತ ಚಲಾಯಿಸಲು ಬರುಲು ಬೇರೆ ಬೇರೆ ಜಿಲ್ಲೆಗೆ ಕೆಲಸಕ್ಕೆಂದು ಹೋಗಿರುವ ಮತದಾರರಿಗೆ ಕಷ್ಟವಾಗುತ್ತಿದೆ.

ಇಂದು ಮತ ಚಲಾಯಿಸಲು ಬರುವವರಿಗೆ ಬಸ್ ಸಂಖ್ಯೆ ಕಡಿಮೆ ಇರುವುದರಿಂದ ಸಮಸ್ಯೆ ಉಂಟಾಗಿದೆ. ಈ ಮತಗಟ್ಟೆಯಲ್ಲಿ ಯಾವುದೇ ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯಿತಿಯಿಂದ ಯಾವುದೇ ಮಾಹಿತಿ ನೀಡಿಲ್ಲ ಹಾಗೂ ವ್ಯವಸ್ಥೆ ಕೂಡ ಸರಿಯಾಗಿ ನಿರ್ವಹಿಸಿಲ್ಲ ಎಂದು ಮತದಾರರು ಆರೋಪಿಸುತ್ತಿದ್ದಾರೆ.

ಕಳೆದ ಸಲ ವಿಧಾನಸಭಾ ಕ್ಷೇತ್ರದಲ್ಲಿ ಮತದಾನವಿದ್ದಾಗ ಆ ಸಮಯದಲ್ಲಿ ಕೂಡ ಒಂದು ಕುಟುಂಬದಲ್ಲಿ 3 ಜನ ಸದಸ್ಯರು ಮತ ಚಲಾಯಿಸಲು ಕಿಕ್ಕೇರಿಯಿಂದ ರಾಮನಹಳ್ಳಿ ಗ್ರಾಮ ಪಂಚಾಯಿತಿ ಸರ್ಕಾರಿ ಶಾಲೆಯಲ್ಲಿ ಮತ ಚಲಾಯಿಸಲೆಂದು 14-15 ಕಿ.ಮೀ ಕಾಲುನಡಿಗೆಯಲ್ಲಿ ಹೋಗಿ ಮತ ಹಾಕಿದ್ದೇವೆ ಎಂದು ಹೇಳುತ್ತಿದ್ದಾರೆ ಗ್ರಾಮಸ್ಥರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾವುದೇ ವಾಹನದ ವ್ಯವಸ್ಥೆ ಮಾಡಿ ಕೊಟ್ಟಿರದ ಕಾರಣ ಅನಾರೋಗ್ಯ ಇದ್ದ ನನ್ನ ಗಂಡ ಬಿಸಿನಲ್ಲಿಯೇ ನಡೆದುಕೊಂಡು ಹೋಗಿ ಮತ ಹಾಕಿದ್ದಾರೆ ಎಂದು ಮಹಿಳೆಯೊಬ್ಬರು ತಮ್ಮ ಅಳಲು ತೋಡಿಕೊಂಡರು.

ಪಕ್ಷದ ಕಾರ್ಯಕರ್ತರು ಹಾಗೂ ಜವಾಬ್ದಾರಿ ತೆಗೆದುಕೊಂಡಿರುವವರಿಗೆ ನೆನ್ನೆ ರಾತ್ರಿ ಗಮನಕ್ಕೆ ತಂದರೂ ಯಾವುದೇ ಸರಿಯಾದ ಸ್ಪಂದನೆ ಸಿಗುತ್ತಿಲ್ಲ. ನಾವು ಯಾವುದೇ ಪಕ್ಷದಿಂದ ಮತ ಹಾಕಲು ಹಣ ಹಾಗೂ ಆಮಿಷಗಳಿಗೆ ಆಸೆ ಪಡುವುದಿಲ್ಲ ಈ ಸಲ ಮತ ಹಾಕುವುದಕ್ಕೆ ಹೋಗುವುದೇ ಬೇಡ ಅಂದುಕೊಂಡಿದ್ದೆವು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಮತ ಹಾಕುವುದು ನಮ್ಮ ಹಕ್ಕು ಹಾಗೂ ನಾವು ಪ್ರಜಾಪ್ರಭುತ್ವದಲ್ಲಿದ್ದೇವೆಂದರೆ ನಾವು ನಮ್ಮ ಮತ ಹಾಕುವುದು ನಮ್ಮ ಹಕ್ಕು ಎಂದು ತಿಳಿದುಕೊಂಡಿದ್ದೇವೆ ಎಂದು ಗ್ರಾಮಸ್ಥರು ಈ ದಿನ.ಕಾಮ್‌ಗೆ ಹೇಳಿಕೊಂಡಿದ್ದಾರೆ.

ದೊರೆನಹಳ್ಳಿ ಗ್ರಾಮದ ಲಕ್ಷ್ಮಮ್ಮನವರು ಹಾಗೂ ಕುಟುಂಬದವರು  ಈದಿನ.ಕಾಮ್ ಜೊತೆ ಮಾತಾಡಿ, ಬೂತ್‌ಗಳಲ್ಲಿ ಕೆಲಸ ಮಾಡುವ ಪಕ್ಷದ ಅಧ್ಯಕ್ಷರು ಹಾಗೂ ಕಾರ್ಯಕರ್ತರಿಗೆ ಹಣ ಹಚ್ಚುವ ಬದಲು ಮತದಾರರಿಗೆ ಮತ ಹಾಕುವ ಅರಿವು ಹಾಗೂ ವಯಸ್ಸಾದ ವೃದ್ಧರಿಗೆ ಹಾಗೂ ಬಸ್ ವ್ಯವಸ್ಥೆ ಕಡಿಮೆ ಇರುವುದರಿಂದ ವಾಹನದ ವ್ಯವಸ್ಥೆ ಮಾಡಿ ಕೊಡಿ. ನಮ್ಮ ಹಾಗೆ ಬೇರೆ ಭಾಗದಿಂದ ಮತ ಹಾಕಲು ಬರುವವರಿಗೆ ಇಂತಹ ಪರಿಸ್ಥಿತಿ ಎದುರಾಗಬಾರದು ಎಂದರು.

ಇಂದು ಬೆಳಗ್ಗೆ ಗಾಡಿ ವ್ಯವಸ್ಥೆ ಮಾಡುತ್ತೇವೆ ಎಂದು ತಿಳಿಸಿದ್ದರು. ಅವರಿಗೆ ಕರೆ ಮಾಡುವಂತೆ ಸ್ಥಳೀಯ ಮುಖಂಡರು ಹೇಳಿದ್ದರು. ಅವರಿಗೆ ಫೊನ್ ಮೂಲಕ ಮಾತಾಡಿ, ಪೆಟ್ರೋಲ್ ಬಂಕ್ ಸೂರಿ ಅಥವಾ ಸುರೇಶ್ ಅವರೆ ನೀವು ಗಾಡಿ ವ್ಯವಸ್ಥೆ ಮಾಡುತ್ತೇವೆಂದು ಹೇಳಿದ್ರಿ ಎಂದು ವಿಚಾರಿಸಿದಾಗ ʼmide ur tongueʼ ಎಂದು ಕೇಳಿ ಯಾವನು ಕೊಟ್ಟವನು ನಂಬರ್ ಎಂದು ಅವಾಚ್ಯವಾಗಿ ನಿಂದಿಸಿ ಫೋನ್ ಕಟ್ ಮಾಡಿದರು ಎಂದು ಕಿಕ್ಕೇರಿ ಹೋಬಳಿ ಮತದಾರರು ಈದಿನ.ಕಾಮ್‌ಗೆ ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...