ಮಂಡ್ಯ | ಸತ್ತ ಮೇಲೆ ದೇಹವನ್ನು ಮಣ್ಣು ಮಾಡುವ ಬದಲು ದಾನ ಮಾಡಿ: ಶ್ರೀಧರ್

Date:

“ಮನುಷ್ಯನ ದೇಹವನ್ನು ಸತ್ತ ನಂತರ ಬೆಂಕಿಯಲ್ಲಿ ಸುಟ್ಟು ಇಲ್ಲವೇ ತನ್ನ ದೇಹವನ್ನು ಮಣ್ಣಿನಲ್ಲಿ ಹೂತು ನಾಶ ಮಾಡಬೇಡಿ. ವಿದ್ಯಾರ್ಥಿಗಳ ಜ್ಞಾನವನ್ನು ಹೆಚ್ಚಿಸಲು ಸಲುವಾಗಿ ವೈದ್ಯಕೀಯ ಸಂಸ್ಥೆಗಳಿಗೆ ತಮ್ಮ ದೇಹವನ್ನು ಸತ್ತ ನಂತರದಲ್ಲಿ ದಾನ ಮಾಡಿ” ಎಂದು ಶ್ರೀಧರ್ ಹಳೆಬೀಡು ತಿಳಿಸಿದರು.

ಅವರು ಶ್ರೀರಂಗಪಟ್ಟಣದ ರಾಂಪಾಲ್ ರಸ್ತೆಯಲ್ಲಿರುವ ಶ್ರೀರಂಗ ಡಯಾಗ್ನೋಸ್ಟಿಕ್ ವತಿಯಿಂದ ವಿಶ್ವ ಅಂಗಾಂಗ ದಾನ ದಿನವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವ್ಯವಸ್ಥಾಪಕರಾದ ಶ್ರೀಧರ್ ಮಾತನಾಡಿ, “ಅನ್ನ ದಾನದಂತೆ ದೇಹ ದಾನ ಮಾಡುವುದು ಕೂಡ ಶ್ರೇಷ್ಠದಾನ” ಎಂದು ಹೇಳಿದರು.

ಇದೇ ಕಾರ್ಯಕ್ರಮದಲ್ಲಿ ತಮ್ಮ ದೇಹವನ್ನು ದಾನ ಮಾಡಲು ನೋಂದಣಿ ಮಾಡಿರುವ ಯೋಗ ಶಿಕ್ಷಕರಾದ ಕೆ ಶೆಟ್ಟಹಳ್ಳಿ ಅಪ್ಪಾಜಿಗೆ, ವೆಂಕಟೇಗೌಡ ಸೇವಾ ಸಮಿತಿಯ ಅಧ್ಯಕ್ಷರಾದಂತಹ ಡಾ.ಕೆ. ವೈ. ಶ್ರೀನಿವಾಸ್ ಹಾಗೂ ಸಮರ್ಪಣಾ ಟ್ರಸ್ಟ್ ಅಧ್ಯಕ್ಷರಾದ ಶ್ರೀಜೈಶಂಕರ್ ಅವರಿಂದ ಸನ್ಮಾನಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸನ್ಮಾನಿಸಿ ಮಾತನಾಡಿದ ಡಾ.ಕೆ. ವೈ. ಶ್ರೀನಿವಾಸ್, “ನಮ್ಮ ಸ್ನೇಹಿತರಾದ ಅಪ್ಪಾಜಿ ತಮ್ಮ ಹಾಗೂ ಶ್ರೀಮತಿಯವರ ದೇಹವನ್ನು ದಾನ ಮಾಡಿದ್ದಾರೆ. ದೇಹದಾನ ಮಾಡುವುದು ಮುಖ್ಯ ಅಲ್ಲ. ನೋಂದಣಿ ಮಾಡಿರುತ್ತಾರೆ, ಆಸ್ಪತ್ರೆಯವರು ಪ್ರಮಾಣಪತ್ರ ಕೊಟ್ಟಿರುತ್ತಾರೆ. ವ್ಯಕ್ತಿ ತೀರಿ ಹೋದ ಮೇಲೆ ಮನೆಯವರು ಒಪ್ಪಿ, ದೇಹವನ್ನು ಆಸ್ಪತ್ರೆಗೆ ಕೊಡುವುದು ಮುಖ್ಯ. ಅವರ ಮಕ್ಕಳು ಇದಕ್ಕೆ ಒಪ್ಪಿರುತ್ತಾರೆ ಎಂದು ಭಾವಿಸುತ್ತೇನೆ” ಎಂದರು.

“ಮೆಡಿಕಲ್ ವಿದ್ಯಾರ್ಥಿಗಳಿಗೆ ಅಂಗಾಂಗಗಳ ಅಧ್ಯಯನ ಮಾಡಲು ದೇಹಗಳ ಅಲಭ್ಯತೆ ಇದೆ. ಚಿತ್ರಪಟಗಳನ್ನು ಮಾತ್ರ ತೋರಿಸಿ ಕಲಿಸಬೇಕಾದ ಅನಿವಾರ್ಯತೆ ಉಂಟಾಗಿದೆ. ಇದು ಕಲಿಕೆಗೆ ಹಿನ್ನಡೆ. ಅರೆಬರೆ ಕಲಿಯುವುದರಿಂದ ರೋಗಿಗಳ ಆರೋಗ್ಯದ ಮೇಲೂ ಪರಿಣಾಮ ಉಂಟು ಮಾಡುತ್ತದೆ. ಇದನ್ನು ತಪ್ಪಿಸಲು ನಾವೆಲ್ಲರೂ ದೇಹ ದಾನ ಮಾಡಬೇಕು. ಇದಕ್ಕಾಗಿ ನಾನು ಕೂಡ ದೇಹ ದಾನ ಮಾಡಬೇಕೆಂದು ತೀರ್ಮಾನಿಸಿದ್ದೇನೆ” ಎಂದು ಚಿಕ್ಕತಮ್ಮೇಗೌಡ ತಿಳಿಸಿದರು.

ಸಾಹಿತಿಗಳಾದ ಶಿವಕುಮಾರ್, ಡಾ. ಕೆ. ವೈ. ಶ್ರೀನಿವಾಸ್, ಜೈ ಶಂಕರ್, ಪೂಜಾ ಶ್ರೀಧರ್ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...