ಗೆಜ್ಜಲಗೆರೆ ನಗರಸಭೆಗೆ ಸೇರ್ಪಡೆ: ಜನರ ಆಶೋತ್ತರದ ವಿರುದ್ಧ ನಿರ್ಣಯಕ್ಕೆ ಸುನಂದಮ್ಮ ಜಯರಾಮ್ ಆಕ್ರೋಶ

Date:

​ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆಯ ಮಣ್ಣಿನ ಗುಣ ಹೋರಾಟ ರೂಪದ್ದು. ನಮ್ಮ ಗ್ರಾಮದ ಸ್ವಾಯತ್ತತೆಯನ್ನು ಉಳಿಸಿಕೊಳ್ಳಲು ನಾವು ಯಾವುದೇ ತ್ಯಾಗಕ್ಕೂ ಸಿದ್ಧ. ಹೀಗಿರುವಾಗ ಗ್ರಾಮದ ಅಸ್ಮಿತೆ ಮತ್ತು ರೈತರ ಹಿತಾಸಕ್ತಿಯನ್ನು ಬಲಿಕೊಡುವ ಸರಕಾರದ ನಿರ್ಧಾರ ಖಂಡನೀಯ ಎಂದು ರೈತ ಹೋರಾಟಗಾರ್ತಿ ಸುನಂದಮ್ಮ ಜಯರಾಮ್ ಆಕ್ರೋಶ ವ್ಯಕ್ತಪಡಿಸಿದರು.

ಗೆಜ್ಜಲಗೆರೆ ಗ್ರಾಮವನ್ನು ಮದ್ದೂರು ನಗರಸಭೆಗೆ ಸೇರ್ಪಡೆಗೊಳಿಸಿರುವ ಸರ್ಕಾರದ ನಿರ್ಣಯವನ್ನು ವಿರೋಧಿಸಿ ನಡೆಯುತ್ತಿರುವ ನಿರಂತರ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, “​ಗೆಜ್ಜಲಗೆರೆ ಗ್ರಾಮಸ್ಥರ ಅಭಿಪ್ರಾಯವನ್ನು ಪಡೆಯದೆ, ಏಕಪಕ್ಷೀಯವಾಗಿ ಗ್ರಾಮವನ್ನು ನಗರಸಭೆಗೆ ಸೇರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಇದು ಪ್ರಜಾಪ್ರಭುತ್ವ ವಿರೋಧಿ ಕ್ರಮ” ಎಂದು ಸುನಂದಮ್ಮ ಕಿಡಿಕಾರಿದರು.

“ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿದ್ದಾಗ ಸಿಗುತ್ತಿದ್ದ ಸೌಲಭ್ಯಗಳು ಮತ್ತು ರೈತಾಪಿ ವರ್ಗದ ಹಕ್ಕುಗಳು ನಗರಸಭೆ ವ್ಯಾಪ್ತಿಗೆ ಬಂದಾಗ ಮರೀಚಿಕೆಯಾಗಲಿವೆ. ​ಗ್ರಾಮವನ್ನು ನಗರಸಭೆಗೆ ಸೇರಿಸುವುದರಿಂದ ಸಾಮಾನ್ಯ ಜನರ ಮೇಲೆ ಹೆಚ್ಚಿನ ತೆರಿಗೆ ಹೊರೆ ಬೀಳಲಿದೆ. ಕೃಷಿ ಭೂಮಿಯನ್ನು ಹೊಂದಿರುವ ರೈತರಿಗೆ ಇದರಿಂದ ಯಾವುದೇ ಲಾಭವಿಲ್ಲ, ಬದಲಾಗಿ ಮೂಲಭೂತ ಸೌಕರ್ಯಗಳ ಹೆಸರಿನಲ್ಲಿ ರೈತರನ್ನು ಒಕ್ಕಲೆಬ್ಬಿಸುವ ಅಥವಾ ಅವರ ಹಕ್ಕುಗಳನ್ನು ಮೊಟಕುಗೊಳಿಸುವ ಹುನ್ನಾರ ಇದರ ಹಿಂದಿದೆ” ಎಂದು ಆತಂಕ ವ್ಯಕ್ತಪಡಿಸಿದರು.

“ಸರ್ಕಾರ ಮತ್ತು ಸ್ಥಳೀಯ ಜನಪ್ರತಿನಿಧಿಗಳು ಈ ಕೂಡಲೇ ಎಚ್ಚೆತ್ತುಕೊಂಡು ಈ ನಿರ್ಣಯವನ್ನು ಕೈಬಿಡಬೇಕು. ಇಲ್ಲದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಸಾಂಪ್ರದಾಯಿಕವಾಗಿ ಹಿಂದೂ ಮಹಿಳೆಯ ಅಂತ್ಯಕ್ರಿಯೆ: ಸೌಹಾರ್ದತೆ ಮೆರೆದ ಮುಸ್ಲಿಂ, ಕ್ರಿಶ್ಚಿಯನ್ನರು

ಧರಣಿ ಸತ್ಯಾಗ್ರಹದಲ್ಲಿ ಕುಳಿತಿರುವ ಹೋರಾಟಗಾರರನ್ನು ಹುರಿದುಂಬಿಸಿದ ಅವರು, “ಪಕ್ಷಭೇದ ಮರೆತು ಗ್ರಾಮದ ಹಿತದೃಷ್ಟಿಯಿಂದ ಎಲ್ಲರೂ ಒಗ್ಗೂಡಬೇಕು. ನ್ಯಾಯ ಸಿಗುವವರೆಗೂ ಈ ಸತ್ಯಾಗ್ರಹ ನಿಲ್ಲಬಾರದು” ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಲಿಂಗಪ್ಪಾಜಿ, ಶಂಕರ್, ವಳಗೆರೆಹಳ್ಳಿ ಉಮೇಶ್, ರವಿ, ರಘು, ವಿನೋದ್ ಬಾಬು, ಸತ್ಯಪ್ಪ ವಕೀಲರು, ವೆಂಕಟೇಶ್ ಮುಟ್ಟನಹಳ್ಳಿ, ಪ್ರಸನ್ನ ಗೊರವನಹಳ್ಳಿ ಸೇರಿದಂತೆ ಹಲವಾರು ಗ್ರಾಮಸ್ಥರು ಹಾಗೂ ರೈತ ಸಂಘದ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ಸಿನ ಶಿಖರವನ್ನೇರಲು ಉತ್ತಮ ಚಿಂತನೆಗಳಿಂದ ಮಾತ್ರ ಸಾಧ್ಯ: ಪದ್ಮಶ್ರೀ ಪುರಸ್ಕೃತ ಎಂ ಅಂಕೇಗೌಡ ಅಭಿಮತ

ವಿದ್ಯಾರ್ಥಿಗಳು ಮನರಂಜನೆಗಳಿಂದ ದೂರ ಉಳಿದು ಉತ್ತಮ ಚಿಂತನೆಗಳತ್ತ ಮುಖ ಮಾಡಿದರೆ ಮಾತ್ರ...

ಕೆ ಆರ್ ಪೇಟೆ | ಅಕ್ಕಿಹೆಬ್ಬಾಳು ಶಾಲೆ ಜಾಗ ಒತ್ತುವರಿ ಆರೋಪ; ಗ್ರಾಮಸ್ಥರಿಂದ ಶಿಕ್ಷಣ ಸಚಿವರಿಗೆ ದೂರು

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ...