ಬ್ರಾಹ್ಮಣ ಮಹಿಳೆಯರು ಜನಿವಾರ ಧರಿಸುವುದಿಲ್ಲ – ಅವರೂ ಶೂದ್ರರೇ: ಭಗವಾನ್

Date:

ಯಾರು ಜನಿವಾರ ಹಾಕುವುದಿಲ್ಲವೋ, ಅವರೆಲ್ಲರೂ ಶೂದ್ರರು. ಬ್ರಾಹ್ಮಣ ಮಹಿಳೆಯರು ಕೂಡ ಜನಿವಾರ ಹಾಕುವುದಿಲ್ಲ. ಹಾಗಾಗಿ, ಅವರು ಸಹ ಶೂದ್ರರೇ ಎಂದು ಸಾಹಿತಿ ಪ್ರೊ. ಕೆ.ಎಸ್ ಭಗವಾನ್ ವ್ಯಂಗ್ಯವಾಡಿದ್ದಾರೆ.

ಮಂಡ್ಯದಲ್ಲಿ ದಸಂಸ ಆಯೋಜಿಸಿದ್ದ ಸಾಮಾಜಿಕ ನ್ಯಾಯ ಜಾರಿಗಾಗಿ ಜನಾಗ್ರಹ ಸಮಾವೇಶದಲ್ಲಿ ಅವರು ಮಾತನಾಡಿದರು. “ಚಾತುರ್ವಣಗಳಲ್ಲಿ ಈಗ ಉಳಿದಿರುವುದು ಬ್ರಾಹ್ಮಣ ಮತ್ತು ಶೂದ್ರ ಮಾತ್ರ. ಬ್ರಾಹ್ಮಣರಲ್ಲಿ ಮಹಿಳೆಯರಿಗೆ ಉಪನಯನ ಇಲ್ಲ, ಜನಿವಾರ ಧರಿಸುವಂತಿಲ್ಲ. ಯಾರೂ ಜನಿವಾರ ಹಾಕುವುದಿಲ್ಲವೋ ಅವರೆಲ್ಲರೂ ಶೂದ್ರರೇ” ಎಂದಿದ್ದಾರೆ.

“ಸ್ವಾಮಿ ವಿವೇಕಾನಂದ ಅವರನ್ನು ಹಿಂದು ಧರ್ಮದ ಪ್ರತಿಪಾಕರು ಎಂದು ಕೆಲವು ಬಲಪಂಥೀಯರು ಬಿಂಬಿಸಲು ಹೊರಟಿದ್ದಾರೆ. ಆದರೆ, ಅವರು ವಾಸ್ತವದಲ್ಲಿ ಮೇಲು ಕೀಳಿನಿಂದ ಕೂಡಿದ್ದ, ಅಸಮಾನತೆಯ ಹಿಂದು ಧರ್ಮದ ಕಟು ಟೀಕಾಕಾರರಾಗಿದ್ದರು. ಅವರು ನಾನೊಬ್ಬ ಬೌದ್ಧ ಎಂದು ಹೇಳಿಕೊಂಡಿದ್ದರು. ನನ್ನದು ಸಂಕುಚಿತ ಹಿಂದು ಧರ್ಮವಲ್ಲ, ಬದಲಾಗಿ ಮಾನವ ಧರ್ಮ ಎಂದಿದ್ದರು” ಎಂದು ಭಗವಾನ್ ಪ್ರತಿಪಾದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

Bhagavan

“ರಾಷ್ಟ್ರಕವಿ ಕುವೆಂಪು ಕಾನೂನು ಹೆಗ್ಗಡತಿ ಹಾಗೂ ಮಲೆಗಳಲ್ಲಿ ಮದುಮಗಳು ಕೃತಿಯಲ್ಲಿ ಹಿಂದು ಧರ್ಮವನ್ನು ಸಿಗಿದು ತೋರಣ ಕಟ್ಟಿದ್ದಾರೆ” ಎಂದಿದ್ದಾರೆ.

“ಪೆರಿಯಾರ್, ನಾರಾಯಣಗುರು, ಅಂಬೇಡ್ಕರ್ ಹಿಂದೂ ಧರ್ಮದಲ್ಲಿನ ಮೌಢ್ಯ, ಅಂಧಕಾರ, ಶೋಷಣೆ ವಿರುದ್ಧ ನಿರಂತರ ಹೋರಾಟ ನಡೆಸಿದ್ದಾರೆ, ಹಾಗಾಗಿ ಬುದ್ಧ, ಅಶೋಕ, ಬಸವಣ್ಣ, ಸ್ವಾಮಿ ವಿವೇಕಾನಂದರ ಜೊತೆಗೆ ಇಂತಹ ಮಹನೀಯರ ಅಧ್ಯಯನ ಮಾಡಬೇಕು, ಅಂಬೇಡ್ಕರ್ ನಮ್ಮವರು ಎಂದರೆ ಬಲ ಬರಲ್ಲ, ಬದಲಾಗಿ ಅವರ ಬದುಕು -ಬರಹ ಮತ್ತು ವಿಚಾರದ ಪುಸ್ತಕಗಳನ್ನು ಓದಬೇಕು, ವಿಶೇಷವಾಗಿ ಜಾತಿ ವಿನಾಶ ಸಂಪುಟವನ್ನು ಓದಿ” ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ದಸಂಸ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಅಧ್ಯಕ್ಷತೆ ವಹಿಸಿದ್ದರು, ರಾಜ್ಯ ಸಂಪನ್ಮೂಲ ಕೇಂದ್ರದ ಮಾಜಿ ನಿರ್ದೇಶಕ ಡಾ.ಎಸ್.ತುಕಾರಾಂ, ವಿಚಾರವಾದಿ ಮಾಯಿಗೌಡ ಸೇರಿದಂತೆ ಮತ್ತಿತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...