ಗೊರವನಹಳ್ಳಿ | ಮೂಟೆಗಳಲ್ಲಿ ದಾಖಲೆಗಳನ್ನೊಯ್ದ ಗ್ರಾ.ಪಂ ಅಧಿಕಾರಿಗಳು: ತಡೆಯಲೆತ್ನಿಸಿದ ಮುಖಂಡರ ಬಂಧನ

Date:

​ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೊರವನಹಳ್ಳಿ ಗ್ರಾಮ ಪಂಚಾಯಿತಿಯನ್ನು ನಗರಸಭೆಗೆ ಸೇರ್ಪಡೆ ಮಾಡುವುದನ್ನು ವಿರೋಧಿಸಿ ಕಳೆದ 66 ದಿನಗಳಿಂದ ನಡೆಯುತ್ತಿದ್ದ ಅಹೋರಾತ್ರಿ ಧರಣಿ ಸ್ಥಳಕ್ಕೆ ದಿಢೀರ್ ನುಗ್ಗಿದ ಪೊಲೀಸರು ಹಾಗೂ ಅಧಿಕಾರಿಗಳ ತಂಡ, ಗ್ರಾಮಸ್ಥರ ತೀವ್ರ ವಿರೋಧದ ನಡುವೆಯೂ ಪಂಚಾಯಿತಿಯ ಮಹತ್ವದ ದಾಖಲೆಗಳನ್ನು ಮೂಟೆಗಳಲ್ಲಿ ತುಂಬಿಕೊಂಡು ಬಲವಂತವಾಗಿ ಕೊಂಡೊಯ್ದಿರುವ ಘಟನೆ ನಡೆದಿದೆ. ಪೊಲೀಸ್ ಇಲಾಖೆಯ ಈ ದೌರ್ಜನ್ಯವನ್ನು ಖಂಡಿಸಿರುವ ಮುಖಂಡರು, ಇದೊಂದು ರಾಜಕೀಯ ಪ್ರೇರಿತ ಕೃತ್ಯ ಹಾಗೂ ಮದ್ದೂರು ತಾಲೂಕಿಗೆ ಅಂಟಿದ ಕಪ್ಪುಚುಕ್ಕೆ ಎಂದು ಕಿಡಿಕಾರಿದ್ದಾರೆ.

ಗೊರವನಹಳ್ಳಿಯಲ್ಲಿ ಹೈಡ್ರಾಮಾವೇ ನಡೆದಿದ್ದು, ಭಾರೀ ಪೊಲೀಸ್ ಬಂದೋಬಸ್ತ್‌ನಲ್ಲಿ ಬಂದ ಅಧಿಕಾರಿಗಳು ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿದ್ದ ಕಡತಗಳು ಹಾಗೂ ಪ್ರಮುಖ ದಾಖಲಾತಿಗಳನ್ನು ದೊಡ್ಡ ಬಿಳಿ ಮೂಟೆ (ಚೀಲ) ಗಳಲ್ಲಿ ತುಂಬಿಕೊಂಡು ಹೊರಬಂದಿದ್ದಾರೆ. ಇದನ್ನು ಕಂಡು ರೊಚ್ಚಿಗೆದ್ದ ಗ್ರಾಮಸ್ಥರು ಅಧಿಕಾರಿಗಳಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. “ನ್ಯಾಯಾಲಯದಲ್ಲಿ ಪ್ರಕರಣ ಇರುವಾಗ ಕಳ್ಳರ ಹಾಗೆ ದಾಖಲೆಗಳನ್ನು ಏಕೆ ತೆಗೆದುಕೊಂಡು ಹೋಗುತ್ತಿದ್ದೀರಿ? ಇದು ಗೂಂಡಾ ರಾಜಕಾರಣ” ಎಂದು ಘೋಷಣೆ ಕೂಗುತ್ತಾ ಪೊಲೀಸರೊಂದಿಗೆ ತೀವ್ರ ವಾಗ್ವಾದ ನಡೆಸಿದ್ದಾರೆ.

​ಆದರೆ, ನೂರಾರು ಸಂಖ್ಯೆಯಲ್ಲಿದ್ದ ಪೊಲೀಸರು ಪ್ರತಿಭಟನಾಕಾರರನ್ನು ಬಲವಂತವಾಗಿ ತಡೆದು ನಿಲ್ಲಿಸಿ, ದಾಖಲೆಗಳಿದ್ದ ಮೂಟೆಗಳನ್ನು ತಮ್ಮ ವಾಹನಗಳ(ಕಾರು/ಜೀಪ್) ಡಿಕ್ಕಿಗೆ ತುಂಬಿಕೊಂಡು ಪೊಲೀಸ್ ಬೆಂಗಾವಲಿನೊಂದಿಗೆ ಅಲ್ಲಿಂದ ಪರಾರಿಯಾಗಿದ್ದಾರೆ. ಈ ಹಿಂದೆ ಕೂಡ ಎರಡು ಬಾರಿ ಅಧಿಕಾರಿಗಳು ದಾಖಲೆಗಳನ್ನು ತೆಗೆದುಕೊಂಡು ಹೋಗುವ ಪ್ರಯತ್ನ ಮಾಡಿದ್ದರು, ಆಗ ಗ್ರಾಮಸ್ಥರು ಆ ಪ್ರಯತ್ನವನ್ನು ತಡೆದು ಯಶಸ್ವಿಯಾಗಿದ್ದರು. ಆದರೆ ಈ ಬಾರಿ ಹತ್ತಕ್ಕೂ ಹೆಚ್ಚು ಜೀಪ್ ಹಾಗೂ ಡಿಎಆರ್(DAR) ತುಕಡಿಗಳನ್ನು ಬಳಸಿಕೊಂಡು ಹತ್ತಿಕ್ಕಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶನಿವಾರ ಮಧ್ಯಾಹ್ನ 3:30ರಿಂದ 4ರ ಸುಮಾರಿಗೆ, ಧರಣಿ ಸ್ಥಳದಲ್ಲಿ ಜನರ ಸಂಖ್ಯೆ ಕಡಿಮೆಯಿದ್ದ ಸಮಯವನ್ನು ನೋಡಿಕೊಂಡು ಈ ದಿಢೀರ್ ಕಾರ್ಯಾಚರಣೆ ನಡೆಸಲಾಗಿದೆ. ರಕ್ಷಣೆ ಕೊಡಬೇಕಾದ ಇಲಾಖೆಯೇ ದೌರ್ಜನ್ಯ ನಡೆಸಿದೆ. ಮಹಿಳೆಯರು, ಯುವಕರು ಎನ್ನದೆ ಎಳೆದಾಡಿ, ತಳ್ಳಾಡಿದ್ದಾರೆ. ಹೋರಾಟದ ಮುಂಚೂಣಿಯಲ್ಲಿದ್ದ ಮುಖಂಡರಾದ ಮಹೇಶ್, ಅಶೋಕ್ ಹಾಗೂ ಪುಟ್ಟಸ್ವಾಮಿ ಎಂಬುವವರನ್ನು ಪೊಲೀಸರು ಬಲವಂತವಾಗಿ ವ್ಯಾನ್‌ಗೆ ತುಂಬಿಕೊಂಡು ಕರೆದೊಯ್ದಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ಗಂಭೀರ ಆರೋಪ ಮಾಡಿದ್ದಾರೆ.

ಗೊರವನಹಳ್ಳಿ, ಗೆಜ್ಜಲಗೆರೆ, ಸೋಮನಹಳ್ಳಿ, ಚಾಮನಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಮದ್ದೂರು ನಗರಸಭೆಗೆ ಸೇರಿಸಲು ಆಡಳಿತ ನಿರ್ಧರಿಸಿತ್ತು. ಆದರೆ, ಗ್ರಾಮಸ್ಥರು ನಗರಸಭೆ ವ್ಯಾಪ್ತಿಗೆ ಸೇರಲು ನಿರಾಕರಿಸಿ, ಗ್ರಾಮ ಪಂಚಾಯಿತಿಯಾಗಿಯೇ ಮುಂದುವರೆಯಬೇಕು ಎಂದು ಪಟ್ಟುಹಿಡಿದಿದ್ದರು. ಈ ಸಂಬಂಧ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದ್ದು, ಜತೆಗೆ ಸತತ 66 ದಿನಗಳಿಂದ ಶಾಂತಿಯುತವಾಗಿ ಧರಣಿ, ಅಹೋರಾತ್ರಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿತ್ತು.

ಘಟನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸ್ಥಳೀಯ ಹಿರಿಯ ಮುಖಂಡರು, “ಒಂದು ಸಣ್ಣ ವಿಚಾರಕ್ಕೆ 100-200 ಜನ ಪೊಲೀಸರು, ಡಿಎಆರ್ ವ್ಯಾನ್‌ಗಳನ್ನು ತೆಗೆದುಕೊಂಡು ಹಳ್ಳಿಗಳಿಗೆ ನುಗ್ಗಿರುವುದು ಹಿಂದೆಂದೂ ನಡೆದಿರಲಿಲ್ಲ. ದೊಡ್ಡ ಗಲಾಟೆಗಳಾದಾಗಲೂ ಇಷ್ಟು ಜನ ಹೋಗಿರಲಿಲ್ಲ. ಇದು ಮದ್ದೂರು ತಾಲೂಕಿಗೆ ಒಂದು ಕಪ್ಪುಚುಕ್ಕೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿದ್ದೀರಾ? ಸಿಲಿಂಡರ್ ಸಿಗುತ್ತಿಲ್ಲ- ಪರ್ಯಾಯ ಮಾರ್ಗಗಳೇನು? ಇಲ್ಲಿದೆ ನೋಡಿ…

​”ಈ ಪ್ರಕರಣ ಈಗಾಗಲೇ ನ್ಯಾಯಾಲಯದಲ್ಲಿದೆ. ಕೋರ್ಟ್ ತೀರ್ಪು ಬರುವವರೆಗೆ ಕಾಯುವುದರಲ್ಲಿ ಏನಾಗುತ್ತಿತ್ತು? ನ್ಯಾಯಾಲಯದ ತೀರ್ಪು ಬರುವವರೆಗೆ ಕಾಯಬೇಕು. ಕೋರ್ಟ್ ಯಾವುದೇ ತೀರ್ಪು ನೀಡಿದರೂ ನಾವೆಲ್ಲ ಅದಕ್ಕೆ ತಲೆಬಾಗುತ್ತೇವೆ. ಆದರೆ ಈ ರೀತಿ ಕಾನೂನು ಮೀರಿ ವರ್ತಿಸಿದರೆ ಜನರು ಸುಮ್ಮನಿರುವುದಿಲ್ಲ” ಎಂದು ಎಚ್ಚರಿಕೆ ನೀಡಿದರು.

ಬಂಧಿತರಾಗಿರುವ ಎಲ್ಲಾ ಮುಖಂಡರು ಮತ್ತು ಯುವಕರನ್ನು ತಕ್ಷಣವೇ ಬಿಡುಗಡೆ ಮಾಡಿ ಇದೇ ಧರಣಿ ಸ್ಥಳಕ್ಕೆ ತಂದು ಬಿಡಬೇಕು. ​ಅಧಿಕಾರಿಗಳು ಬಲವಂತವಾಗಿ ಕದ್ದೊಯ್ದಿರುವ ಗ್ರಾಮ ಪಂಚಾಯಿತಿ ದಾಖಲೆಗಳನ್ನು ಕೂಡಲೇ ವಾಪಸ್ ತಂದಿಡಬೇಕು. ​ಬಲವಂತದ ನಗರಸಭೆ ಸೇರ್ಪಡೆ ಕೈಬಿಟ್ಟು, ಗ್ರಾಮ ಪಂಚಾಯಿತಿಯನ್ನಾಗಿ ಉಳಿಸಬೇಕು. ​ಬಂಧಿತರನ್ನು ಬಿಡುಗಡೆ ಮಾಡಿ, ಕಡತಗಳನ್ನು ವಾಪಸ್ ತರುವವರೆಗೂ ನಾವು ಜಾಗ ಬಿಟ್ಟು ಕದಲುವುದಿಲ್ಲ ಎಂದು ಪಟ್ಟು ಹಿಡಿದಿರುವ ಗ್ರಾಮಸ್ಥರು, ಮುಂದಿನ ಕಾನೂನು ಹೋರಾಟ ಹಾಗೂ ತೀವ್ರ ಸ್ವರೂಪದ ಪ್ರತಿಭಟನೆಯ ರೂಪುರೇಷೆ ಸಿದ್ಧಪಡಿಸಲು ನಿರ್ಧರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆ ಆರ್ ಪೇಟೆ | ಅಕ್ಕಿಹೆಬ್ಬಾಳು ಶಾಲೆ ಜಾಗ ಒತ್ತುವರಿ ಆರೋಪ; ಗ್ರಾಮಸ್ಥರಿಂದ ಶಿಕ್ಷಣ ಸಚಿವರಿಗೆ ದೂರು

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ...

​ಮೊಬೈಲ್ ಗೀಳಿಗೆ ಬಿದ್ದು ಪುಸ್ತಕಗಳ ಕಡೆಗಣಿಸದಿರಿ: ವಿದ್ಯಾರ್ಥಿಗಳಿಗೆ ‘ಪುಸ್ತಕದ ಮನೆ’ ಅಂಕೆಗೌಡ ಕಿವಿಮಾತು

​ಪ್ರಪಂಚದ ಯಾವುದೇ ಕ್ಷೇತ್ರದಲ್ಲಿಯೂ ಹಣ, ಅಂತಸ್ತು ಸಂಪಾದನೆಗಿಂತ ಜ್ಞಾನ ಸಂಪಾದನೆ ಅತಿ...